<p><strong>ನವದೆಹಲಿ:</strong> ಮುಂದಿನ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವುದೇ ಎಎಪಿಯ ಆದ್ಯತೆಯ ಕೆಲಸವಾಗಿರಲಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p><p>ವಿಡಿಯೊ ಸಂದೇಶದ ಮೂಲಕ ಮಾತನಾಡಿರುವ ಅವರು, ‘ಯುವ ಜನತೆಗೆ ಉದ್ಯೋಗ ನೀಡುವುದೇ ನಮ್ಮ ಆದ್ಯತೆ. ಹೀಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಉದ್ಯೋಗವನ್ನು ಸೃಷ್ಟಿಸಲು ತಮ್ಮ ತಂಡ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಭರವಸೆ ನೀಡಿದರು.</p><p>ಇದೇ ವೇಳೆ ತಮ್ಮ ಸರ್ಕಾರದ ದಾಖಲೆಗಳ ಬಗ್ಗೆ ವಿವರಿಸಿ, ‘ಪಂಜಾಬ್ನಲ್ಲಿನ ಎಎಪಿ ಸರ್ಕಾರವು ಎರಡು ವರ್ಷಗಳೊಳಗೆ 48 ಸಾವಿರ ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಯುವಕರಿಗೆ ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ’ ಎಂದು ಹೇಳಿದರು.</p><p>‘ಉದ್ಯೋಗವನ್ನು ಹೇಗೆ ಸೃಷ್ಟಿಸಬೇಕೆಂದು ನಮಗೆ ತಿಳಿದಿದೆ. ನಮ್ಮ ಉದ್ದೇಶಗಳೂ ಪ್ರಾಮಾಣಿಕವಾಗಿದೆ. ಜನರ ಬೆಂಬಲದೊಂದಿಗೆ ನಾವು ಮುಂದಿನ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುತ್ತೇವೆ’ ಎಂದು ಪ್ರತಿಪಾದಿಸಿದರು.</p><p>ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಏಳು ಹಕ್ಕೊತ್ತಾಯಗಳಿರುವ ‘ಪ್ರಣಾಳಿಕೆ’ಯನ್ನು ಬುಧವಾರ ಬಿಡುಗಡೆ ಮಾಡಿದ್ದರು.</p>.ಮಧ್ಯಮ ವರ್ಗದವರ ಏಳಿಗೆಗೆ ಏಳು ಸಲಹೆ: ಅರವಿಂದ ಕೇಜ್ರಿವಾಲ್.ದೆಹಲಿ ಚುನಾವಣೆ– ಮಹಾಭಾರತದ ಧರ್ಮಯುದ್ಧವಿದ್ದಂತೆ: ಅರವಿಂದ ಕೇಜ್ರಿವಾಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂದಿನ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವುದೇ ಎಎಪಿಯ ಆದ್ಯತೆಯ ಕೆಲಸವಾಗಿರಲಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ.</p><p>ವಿಡಿಯೊ ಸಂದೇಶದ ಮೂಲಕ ಮಾತನಾಡಿರುವ ಅವರು, ‘ಯುವ ಜನತೆಗೆ ಉದ್ಯೋಗ ನೀಡುವುದೇ ನಮ್ಮ ಆದ್ಯತೆ. ಹೀಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಉದ್ಯೋಗವನ್ನು ಸೃಷ್ಟಿಸಲು ತಮ್ಮ ತಂಡ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಭರವಸೆ ನೀಡಿದರು.</p><p>ಇದೇ ವೇಳೆ ತಮ್ಮ ಸರ್ಕಾರದ ದಾಖಲೆಗಳ ಬಗ್ಗೆ ವಿವರಿಸಿ, ‘ಪಂಜಾಬ್ನಲ್ಲಿನ ಎಎಪಿ ಸರ್ಕಾರವು ಎರಡು ವರ್ಷಗಳೊಳಗೆ 48 ಸಾವಿರ ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಯುವಕರಿಗೆ ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ’ ಎಂದು ಹೇಳಿದರು.</p><p>‘ಉದ್ಯೋಗವನ್ನು ಹೇಗೆ ಸೃಷ್ಟಿಸಬೇಕೆಂದು ನಮಗೆ ತಿಳಿದಿದೆ. ನಮ್ಮ ಉದ್ದೇಶಗಳೂ ಪ್ರಾಮಾಣಿಕವಾಗಿದೆ. ಜನರ ಬೆಂಬಲದೊಂದಿಗೆ ನಾವು ಮುಂದಿನ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುತ್ತೇವೆ’ ಎಂದು ಪ್ರತಿಪಾದಿಸಿದರು.</p><p>ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಏಳು ಹಕ್ಕೊತ್ತಾಯಗಳಿರುವ ‘ಪ್ರಣಾಳಿಕೆ’ಯನ್ನು ಬುಧವಾರ ಬಿಡುಗಡೆ ಮಾಡಿದ್ದರು.</p>.ಮಧ್ಯಮ ವರ್ಗದವರ ಏಳಿಗೆಗೆ ಏಳು ಸಲಹೆ: ಅರವಿಂದ ಕೇಜ್ರಿವಾಲ್.ದೆಹಲಿ ಚುನಾವಣೆ– ಮಹಾಭಾರತದ ಧರ್ಮಯುದ್ಧವಿದ್ದಂತೆ: ಅರವಿಂದ ಕೇಜ್ರಿವಾಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>