<p><strong>ನವದೆಹಲಿ:</strong> ಜಾರಿ ನಿರ್ದೇಶನಾಲಯದ (ಇ.ಡಿ) ಸಮನ್ಸ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉತ್ತರಿಸಿದ್ದು, ಇದನ್ನು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿರುವುದಾಗಿ ಆಮ್ ಅದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ. </p><p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಡಿಸೆಂಬರ್ 21ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿತ್ತು. </p>.ನನ್ನ ಬಂಧನವಾದರೂ ಸಹ ದೆಹಲಿಯಲ್ಲಿ ಎಎಪಿ ಜಯಭೇರಿ ಬಾರಿಸಲಿದೆ: ಕೇಜ್ರಿವಾಲ್.ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್ ಕೇಜ್ರಿವಾಲ್ಗೆ ಇ.ಡಿ ಸಮನ್ಸ್.<p>ತಮ್ಮ ವಿರುದ್ಧ ಜಾರಿ ಮಾಡಿರುವ ಸಮನ್ಸ್ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಕಾನೂನಿಗೆ ವಿರುದ್ಧವಾಗಿದೆ. ಜೀವನವನ್ನು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ನಡೆಸುತ್ತಿದ್ದು, ಮರೆಮಾಚಲು ಏನೂ ಇಲ್ಲ. ಕಾನೂನಿನ ಪ್ರಕಾರ ಕಳುಹಿಸಿದ ಸಮನ್ಸ್ ಸ್ವೀಕರಿಸಲು ಸಿದ್ಧವಿರುವುದಾಗಿ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಹೇಳಿರುವುದಾಗಿ ಎಎಪಿ ತಿಳಿಸಿದೆ. </p><p>ಕೇಜ್ರಿವಾಲ್ ಡಿಸೆಂಬರ್ 19ರಿಂದ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ತೆರಳಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ವಿಪಶ್ಶನ ಧ್ಯಾನ ನಡೆಸುವ ಸ್ಥಳವನ್ನು ಬಹಿರಂಗಪಡಿಸಿಲ್ಲ. </p><p>ಈ ಹಿಂದೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾರಿ ನಿರ್ದೇಶನಾಲಯದ (ಇ.ಡಿ) ಸಮನ್ಸ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉತ್ತರಿಸಿದ್ದು, ಇದನ್ನು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿರುವುದಾಗಿ ಆಮ್ ಅದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ. </p><p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಡಿಸೆಂಬರ್ 21ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿತ್ತು. </p>.ನನ್ನ ಬಂಧನವಾದರೂ ಸಹ ದೆಹಲಿಯಲ್ಲಿ ಎಎಪಿ ಜಯಭೇರಿ ಬಾರಿಸಲಿದೆ: ಕೇಜ್ರಿವಾಲ್.ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್ ಕೇಜ್ರಿವಾಲ್ಗೆ ಇ.ಡಿ ಸಮನ್ಸ್.<p>ತಮ್ಮ ವಿರುದ್ಧ ಜಾರಿ ಮಾಡಿರುವ ಸಮನ್ಸ್ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಕಾನೂನಿಗೆ ವಿರುದ್ಧವಾಗಿದೆ. ಜೀವನವನ್ನು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ನಡೆಸುತ್ತಿದ್ದು, ಮರೆಮಾಚಲು ಏನೂ ಇಲ್ಲ. ಕಾನೂನಿನ ಪ್ರಕಾರ ಕಳುಹಿಸಿದ ಸಮನ್ಸ್ ಸ್ವೀಕರಿಸಲು ಸಿದ್ಧವಿರುವುದಾಗಿ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಹೇಳಿರುವುದಾಗಿ ಎಎಪಿ ತಿಳಿಸಿದೆ. </p><p>ಕೇಜ್ರಿವಾಲ್ ಡಿಸೆಂಬರ್ 19ರಿಂದ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ತೆರಳಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ವಿಪಶ್ಶನ ಧ್ಯಾನ ನಡೆಸುವ ಸ್ಥಳವನ್ನು ಬಹಿರಂಗಪಡಿಸಿಲ್ಲ. </p><p>ಈ ಹಿಂದೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>