ತಮ್ಮ ವಿರುದ್ಧ ಜಾರಿ ಮಾಡಿರುವ ಸಮನ್ಸ್ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಕಾನೂನಿಗೆ ವಿರುದ್ಧವಾಗಿದೆ. ಜೀವನವನ್ನು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ನಡೆಸುತ್ತಿದ್ದು, ಮರೆಮಾಚಲು ಏನೂ ಇಲ್ಲ. ಕಾನೂನಿನ ಪ್ರಕಾರ ಕಳುಹಿಸಿದ ಸಮನ್ಸ್ ಸ್ವೀಕರಿಸಲು ಸಿದ್ಧವಿರುವುದಾಗಿ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಹೇಳಿರುವುದಾಗಿ ಎಎಪಿ ತಿಳಿಸಿದೆ.
ಕೇಜ್ರಿವಾಲ್ ಡಿಸೆಂಬರ್ 19ರಿಂದ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ತೆರಳಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ವಿಪಶ್ಶನ ಧ್ಯಾನ ನಡೆಸುವ ಸ್ಥಳವನ್ನು ಬಹಿರಂಗಪಡಿಸಿಲ್ಲ.
ಈ ಹಿಂದೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ.