<p><strong>ನವದೆಹಲಿ</strong>: ದೆಹಲಿಯ ಜಲ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅವ್ಯಹಾರಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೈರಾಗಿದ್ದಾರೆ.</p>.<p>‘ಇ.ಡಿ ನೀಡಿರುವ ಸಮನ್ಸ್ ಕಾನೂನು ಬಾಹಿರವಾಗಿದ್ದು, ಲೋಕಸಭೆ ಚುನಾವಣೆಗೆ ಕೇಜ್ರಿವಾಲ್ ಪ್ರಚಾರ ಮಾಡದಂತೆ ತಡೆಯಲು ಕೇಂದ್ರ ಬಿಜೆಪಿ ಸರ್ಕಾರವು ಇ.ಡಿಯನ್ನು ಬಳಸಿಕೊಳ್ಳುತ್ತಿದೆ. ಇ.ಡಿಯನ್ನು ಬಳಸಿಕೊಂಡು ಲೋಕಸಭೆಗೆ ಹೋರಾಟ ನಡೆಸಲು ಬಿಜೆಪಿ ಯೋಜಿಸಿದೆ.’ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. </p>.<p>ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ಈಗಾಗಲೇ 8 ಬಾರಿ ಸಮನ್ಸ್ ಜಾರಿ ಮಾಡಿದೆ. ಯಾವುದೇ ವಿಚಾರಣೆಗೆ ಅವರು ಈವರೆಗೆ ಹಾಜರಾಗಿಲ್ಲ. ಮಾರ್ಚ್21 ರಂದು ಹಾಜರಾಗುವಂತೆ ಕೇಜ್ರಿವಾಲ್ ಇ.ಡಿ 9ನೇ ಸಮನ್ಸ್ ಜಾರಿ ಮಾಡಿದೆ. ಈ ನಡುವೆ ಜಲ ಮಂಡಳಿ ಅವ್ಯವಹಾರದಲ್ಲೂ ಅವರಿಗೆ ಇ.ಡಿ ಸಮನ್ಸ್ ನೀಡಿ, ಸೋಮವಾರ ಮಾರ್ಚ್ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಅವರು ಹಾಜರಾಗಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಜಲ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅವ್ಯಹಾರಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೈರಾಗಿದ್ದಾರೆ.</p>.<p>‘ಇ.ಡಿ ನೀಡಿರುವ ಸಮನ್ಸ್ ಕಾನೂನು ಬಾಹಿರವಾಗಿದ್ದು, ಲೋಕಸಭೆ ಚುನಾವಣೆಗೆ ಕೇಜ್ರಿವಾಲ್ ಪ್ರಚಾರ ಮಾಡದಂತೆ ತಡೆಯಲು ಕೇಂದ್ರ ಬಿಜೆಪಿ ಸರ್ಕಾರವು ಇ.ಡಿಯನ್ನು ಬಳಸಿಕೊಳ್ಳುತ್ತಿದೆ. ಇ.ಡಿಯನ್ನು ಬಳಸಿಕೊಂಡು ಲೋಕಸಭೆಗೆ ಹೋರಾಟ ನಡೆಸಲು ಬಿಜೆಪಿ ಯೋಜಿಸಿದೆ.’ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. </p>.<p>ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ಈಗಾಗಲೇ 8 ಬಾರಿ ಸಮನ್ಸ್ ಜಾರಿ ಮಾಡಿದೆ. ಯಾವುದೇ ವಿಚಾರಣೆಗೆ ಅವರು ಈವರೆಗೆ ಹಾಜರಾಗಿಲ್ಲ. ಮಾರ್ಚ್21 ರಂದು ಹಾಜರಾಗುವಂತೆ ಕೇಜ್ರಿವಾಲ್ ಇ.ಡಿ 9ನೇ ಸಮನ್ಸ್ ಜಾರಿ ಮಾಡಿದೆ. ಈ ನಡುವೆ ಜಲ ಮಂಡಳಿ ಅವ್ಯವಹಾರದಲ್ಲೂ ಅವರಿಗೆ ಇ.ಡಿ ಸಮನ್ಸ್ ನೀಡಿ, ಸೋಮವಾರ ಮಾರ್ಚ್ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಅವರು ಹಾಜರಾಗಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>