ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ಈಗಾಗಲೇ 8 ಬಾರಿ ಸಮನ್ಸ್ ಜಾರಿ ಮಾಡಿದೆ. ಯಾವುದೇ ವಿಚಾರಣೆಗೆ ಅವರು ಈವರೆಗೆ ಹಾಜರಾಗಿಲ್ಲ. ಮಾರ್ಚ್21 ರಂದು ಹಾಜರಾಗುವಂತೆ ಕೇಜ್ರಿವಾಲ್ ಇ.ಡಿ 9ನೇ ಸಮನ್ಸ್ ಜಾರಿ ಮಾಡಿದೆ. ಈ ನಡುವೆ ಜಲ ಮಂಡಳಿ ಅವ್ಯವಹಾರದಲ್ಲೂ ಅವರಿಗೆ ಇ.ಡಿ ಸಮನ್ಸ್ ನೀಡಿ, ಸೋಮವಾರ ಮಾರ್ಚ್ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಅವರು ಹಾಜರಾಗಿಲ್ಲ.