ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ಫಲಿತಾಂಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಗವದ್ಗೀತೆಯನ್ನು ಉಲ್ಲೇಖಿಸಿ, ‘ಬಿಜೆಪಿಯ ಅಧರ್ಮವನ್ನು ತಡೆಯುವುದಕ್ಕಾಗಿ ದೇವರು ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾನೆ’ ಎಂದು ಹೇಳಿದರು.