<p><strong>ನವದೆಹಲಿ:</strong> ದೆಹಲಿಯ ಮೆಟ್ರೊಗಳಲ್ಲಿ ವಿದ್ಯಾರ್ಥಿಗಳಿಗೆ ಶೇ 50ರಷ್ಟು ರಿಯಾಯಿತಿ ನೀಡುವಂತೆ ಕೋರಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎಂದು ಪಕ್ಷ ತಿಳಿಸಿದೆ.</p><p>ದೆಹಲಿ ವಿಧಾಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಜ್ರಿವಾಲ್ ಬೇಡಿಕೆಯನ್ನು ಮುಂದಿಟ್ಟದ್ದಾರೆ.</p><p>ಪ್ರಧಾನಿಗೆ ಬರೆದ ಪತ್ರದಲ್ಲಿ, ‘ಮೆಟ್ರೊ ದರ ವಿದ್ಯಾರ್ಥಿಗಳಿಗೆ ದುಬಾರಿಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಶೇ 50ರಷ್ಟು ರಿಯಾಯಿತಿ ನೀಡುವ ಯೋಜನೆಯನ್ನು ಜಾರಿಗೊಳಿಸಿ. ಅರ್ಧ ಹಣವನ್ನು ಭರಿಸಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ತಿಳಿಸಿದ್ದಾರೆ.</p><p>ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಜ್ರಿವಾಲ್, ಚುನಾವಣೆಯಲ್ಲಿ ತಮ್ಮ ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಶಾಲಾ ಕಾಲೇಜಿಗೆ ಹೋಗುವ ಯುವಕರಿಗೆ ಉಚಿತ ಬಸ್ ಸಂಚಾರ ಕಲ್ಪಿಸುವುದಾಗಿ ಘೋಷಿಸಿದ್ದಾರೆ.</p><p>‘ದೆಹಲಿಯಲ್ಲಿ ಮಹಿಳೆಯರು ಈಗಾಗಲೇ ಉಚಿತ ಬಸ್ ಸಂಚಾರವನ್ನು ಆನಂದಿಸುತ್ತಿದ್ದಾರೆ. ಇದೇ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿ ಯುವಕರ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಲು ಮತ್ತು ಶಿಕ್ಷಣದ ಅವಕಾಶವನ್ನು ಒದಗಿಸಲು ಉಚಿತ ಸಂಚಾರ ನೀಡಲಾಗುವುದು’ ಎಂದು ಹೇಳಿದ್ದಾರೆ.</p><p>‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಘೋಷಣೆಯನ್ನು ತಕ್ಷಣಕ್ಕೆ ಜಾರಿ ಮಾಡಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಆಯ್ಕೆಯಾದರೆ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸಿಲಾಗುವುದು’ ಎಂದರು.</p>.ಕೇಜ್ರಿವಾಲ್ ಎದುರು ಶೀಲಾ ದೀಕ್ಷಿತ್ ಮಗ ಕಣಕ್ಕೆ; ಸೋಮವಾರ ರಾಹುಲ್ ಗಾಂಧಿ ಪ್ರಚಾರ.ಸೆಲೆಬ್ರಿಟಿಗಳೇ ಸುರಕ್ಷಿತರಲ್ಲ, ಸಾಮಾನ್ಯರ ಕಥೆ ಏನು: ಕೇಜ್ರಿವಾಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮೆಟ್ರೊಗಳಲ್ಲಿ ವಿದ್ಯಾರ್ಥಿಗಳಿಗೆ ಶೇ 50ರಷ್ಟು ರಿಯಾಯಿತಿ ನೀಡುವಂತೆ ಕೋರಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎಂದು ಪಕ್ಷ ತಿಳಿಸಿದೆ.</p><p>ದೆಹಲಿ ವಿಧಾಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಜ್ರಿವಾಲ್ ಬೇಡಿಕೆಯನ್ನು ಮುಂದಿಟ್ಟದ್ದಾರೆ.</p><p>ಪ್ರಧಾನಿಗೆ ಬರೆದ ಪತ್ರದಲ್ಲಿ, ‘ಮೆಟ್ರೊ ದರ ವಿದ್ಯಾರ್ಥಿಗಳಿಗೆ ದುಬಾರಿಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಶೇ 50ರಷ್ಟು ರಿಯಾಯಿತಿ ನೀಡುವ ಯೋಜನೆಯನ್ನು ಜಾರಿಗೊಳಿಸಿ. ಅರ್ಧ ಹಣವನ್ನು ಭರಿಸಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ತಿಳಿಸಿದ್ದಾರೆ.</p><p>ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಜ್ರಿವಾಲ್, ಚುನಾವಣೆಯಲ್ಲಿ ತಮ್ಮ ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಶಾಲಾ ಕಾಲೇಜಿಗೆ ಹೋಗುವ ಯುವಕರಿಗೆ ಉಚಿತ ಬಸ್ ಸಂಚಾರ ಕಲ್ಪಿಸುವುದಾಗಿ ಘೋಷಿಸಿದ್ದಾರೆ.</p><p>‘ದೆಹಲಿಯಲ್ಲಿ ಮಹಿಳೆಯರು ಈಗಾಗಲೇ ಉಚಿತ ಬಸ್ ಸಂಚಾರವನ್ನು ಆನಂದಿಸುತ್ತಿದ್ದಾರೆ. ಇದೇ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿ ಯುವಕರ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಲು ಮತ್ತು ಶಿಕ್ಷಣದ ಅವಕಾಶವನ್ನು ಒದಗಿಸಲು ಉಚಿತ ಸಂಚಾರ ನೀಡಲಾಗುವುದು’ ಎಂದು ಹೇಳಿದ್ದಾರೆ.</p><p>‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಘೋಷಣೆಯನ್ನು ತಕ್ಷಣಕ್ಕೆ ಜಾರಿ ಮಾಡಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಆಯ್ಕೆಯಾದರೆ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸಿಲಾಗುವುದು’ ಎಂದರು.</p>.ಕೇಜ್ರಿವಾಲ್ ಎದುರು ಶೀಲಾ ದೀಕ್ಷಿತ್ ಮಗ ಕಣಕ್ಕೆ; ಸೋಮವಾರ ರಾಹುಲ್ ಗಾಂಧಿ ಪ್ರಚಾರ.ಸೆಲೆಬ್ರಿಟಿಗಳೇ ಸುರಕ್ಷಿತರಲ್ಲ, ಸಾಮಾನ್ಯರ ಕಥೆ ಏನು: ಕೇಜ್ರಿವಾಲ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>