<p><strong>ಕೊಚ್ಚಿ:</strong> ಆಯುರ್ವೇದ ಚಿಕಿತ್ಸೆಗಾಗಿ ಕೇರಳಕ್ಕೆ ಆಗಮಿಸಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಂಡಿಗಾ, ಹೃದಯಸ್ತಂಭನದಿಂದಾಗಿ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ರೈಲಾ ಒಡಿಂಗಾ ಅವರು ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. </p><p>ಆಯುರ್ವೇದ ಕೇಂದ್ರದ ಆವರಣದಲ್ಲಿ ಇಂದು (ಬುಧವಾರ) ಬೆಳಗಿನ ನಡಿಗೆಯ ವೇಳೆ ಒಡಿಂಗಾ ಕುಸಿದು ಬಿದಿದ್ದರು. ತಕ್ಷಣವೇ ಕೂಥಾಟುಕುಳಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳಿಗ್ಗೆ ಸುಮಾರು 9.52ರ ಹೊತ್ತಿಗೆ ನಿಧನರಾದರು ಎಂದು ಆಯುರ್ವೇದ ಕಣ್ಣಿನ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. </p><p>ಒಡಿಂಗಾ ಅವರ ಪಾರ್ಥಿವ ಶರೀರ ಹಸ್ತಾಂತರ ಸೇರಿದಂತೆ ಮುಂದಿನ ಶಿಷ್ಟಾಚಾರಕ್ಕಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್ಆರ್ಆರ್ಒ) ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ಹಿಂದೆ ಇದೇ ಆಸ್ಪತ್ರೆಯಲ್ಲಿ ಪಡೆದ ಚಿಕಿತ್ಸೆಯಲ್ಲಿ ಒಡಿಂಗಾ ಅವರ ಪುತ್ರಿ ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. </p>.ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ.42 ಮಹಿಳೆಯರ ಕೊಂದು ಕ್ವಾರಿಗೆ ಎಸೆದಿದ್ದ ಕೀನ್ಯಾ ಸೀರಿಯಲ್ ಕಿಲ್ಲರ್ ಜೈಲಿಂದ ಪರಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಆಯುರ್ವೇದ ಚಿಕಿತ್ಸೆಗಾಗಿ ಕೇರಳಕ್ಕೆ ಆಗಮಿಸಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಂಡಿಗಾ, ಹೃದಯಸ್ತಂಭನದಿಂದಾಗಿ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ರೈಲಾ ಒಡಿಂಗಾ ಅವರು ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. </p><p>ಆಯುರ್ವೇದ ಕೇಂದ್ರದ ಆವರಣದಲ್ಲಿ ಇಂದು (ಬುಧವಾರ) ಬೆಳಗಿನ ನಡಿಗೆಯ ವೇಳೆ ಒಡಿಂಗಾ ಕುಸಿದು ಬಿದಿದ್ದರು. ತಕ್ಷಣವೇ ಕೂಥಾಟುಕುಳಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳಿಗ್ಗೆ ಸುಮಾರು 9.52ರ ಹೊತ್ತಿಗೆ ನಿಧನರಾದರು ಎಂದು ಆಯುರ್ವೇದ ಕಣ್ಣಿನ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. </p><p>ಒಡಿಂಗಾ ಅವರ ಪಾರ್ಥಿವ ಶರೀರ ಹಸ್ತಾಂತರ ಸೇರಿದಂತೆ ಮುಂದಿನ ಶಿಷ್ಟಾಚಾರಕ್ಕಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್ಆರ್ಆರ್ಒ) ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ಹಿಂದೆ ಇದೇ ಆಸ್ಪತ್ರೆಯಲ್ಲಿ ಪಡೆದ ಚಿಕಿತ್ಸೆಯಲ್ಲಿ ಒಡಿಂಗಾ ಅವರ ಪುತ್ರಿ ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. </p>.ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ.42 ಮಹಿಳೆಯರ ಕೊಂದು ಕ್ವಾರಿಗೆ ಎಸೆದಿದ್ದ ಕೀನ್ಯಾ ಸೀರಿಯಲ್ ಕಿಲ್ಲರ್ ಜೈಲಿಂದ ಪರಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>