ತಿರುವನಂತಪುರ: ‘ಕೇರಳದಲ್ಲಿ ದಿನೇದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿನ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿದೆ’ ಎನ್ನುವ ಟೀಕೆಯನ್ನು ತಿರಸ್ಕರಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ‘ಇಂಥ ಟೀಕೆ ಅನಗತ್ಯ. ಇದು ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಜನಬೆಂಬಲವನ್ನು ದುರ್ಬಲಗೊಳಿಸುವ ಪ್ರಯತ್ನ’ ಎಂದಿದ್ದಾರೆ.