<p><strong>ತಿರುವನಂತಪುರ</strong>: ಮಹಿಳೆಯರಿಗೆ ಅಗೌರವ ತೋರುವ ವಿಚಾರದಲ್ಲಿ ಕೇರಳದ ಸಿಪಿಎಂನ ಶಾಸಕರು ಮತ್ತೆ ಮತ್ತೆ ವಿವಾದಕ್ಕೆ ಒಳಗಾಗುತ್ತಿದ್ದಾರೆ.</p>.<p>ದೇವಿಕುಲಂ ಉಪವಿಭಾಗಾಧಿಕಾರಿ ರೇಣು ರಾಜ್ ಅವರಿಗೆ ಬುದ್ಧಿಮತ್ತೆಯೇ ಇಲ್ಲ ಎಂದು ಶಾಸಕ ಎಸ್. ರಾಜೇಂದ್ರನ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅವರನ್ನು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂಬುದು ವಿವಾದದ ಸ್ವರೂಪ ಪಡೆದುಕೊಂಡಿದೆ. ಹಾಗಾಗಿ, ರಾಜೇಂದ್ರನ್ ಅವರಿಂದ ವಿವರಣೆ ಕೇಳಲು ಸಿಪಿಎಂ ನಿರ್ಧರಿಸಿದೆ.</p>.<p>ಅಧಿಕಾರಿಯ ಆರೋಪಕ್ಕೆ ರಾಜೇಂದ್ರನ್ ಅವರು ಪ್ರತಿ ಆರೋಪವನ್ನೂ ಮಾಡಿದ್ದಾರೆ. ರೇಣು ಅವರೇ ತಮ್ಮನ್ನು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಪ್ರಕರಣದ ಆರೋಪಿಗಳ ಪತ್ತೆಗಾಗಿ ಸಿಪಿಎಂ ತಿರುವನಂತಪುರ ಜಿಲ್ಲಾ ಕಚೇರಿಯಲ್ಲಿ ಐಪಿಎಸ್ ಅಧಿಕಾರಿ ಚೈತ್ರಾ ತೆರೆಸಾ ಜಾನ್ ಅವರು ಶೋಧ ನಡೆಸಿದ್ದರು. ಇದನ್ನು ಸಿಪಿಎಂ ಖಂಡಿಸಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೂಡ ಈ ಘಟನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಅವರು ಅಧಿಕಾರಿಯನ್ನು ಬೆಂಬಲಿಸಿದ್ದರು.</p>.<p>ಸಿಪಿಎಂ ಮುಖಂಡ ಮತ್ತು ಲೋಕೋಪಯೋಗಿ ಸಚಿವ ಜಿ. ಸುಧಾಕರನ್ ಅವರುಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಲೆಪ್ಪಿಯ ನ್ಯಾಯಾಲಯವೊಂದು ಇತ್ತೀಚೆಗೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಮಹಿಳೆಯರಿಗೆ ಅಗೌರವ ತೋರುವ ವಿಚಾರದಲ್ಲಿ ಕೇರಳದ ಸಿಪಿಎಂನ ಶಾಸಕರು ಮತ್ತೆ ಮತ್ತೆ ವಿವಾದಕ್ಕೆ ಒಳಗಾಗುತ್ತಿದ್ದಾರೆ.</p>.<p>ದೇವಿಕುಲಂ ಉಪವಿಭಾಗಾಧಿಕಾರಿ ರೇಣು ರಾಜ್ ಅವರಿಗೆ ಬುದ್ಧಿಮತ್ತೆಯೇ ಇಲ್ಲ ಎಂದು ಶಾಸಕ ಎಸ್. ರಾಜೇಂದ್ರನ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅವರನ್ನು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂಬುದು ವಿವಾದದ ಸ್ವರೂಪ ಪಡೆದುಕೊಂಡಿದೆ. ಹಾಗಾಗಿ, ರಾಜೇಂದ್ರನ್ ಅವರಿಂದ ವಿವರಣೆ ಕೇಳಲು ಸಿಪಿಎಂ ನಿರ್ಧರಿಸಿದೆ.</p>.<p>ಅಧಿಕಾರಿಯ ಆರೋಪಕ್ಕೆ ರಾಜೇಂದ್ರನ್ ಅವರು ಪ್ರತಿ ಆರೋಪವನ್ನೂ ಮಾಡಿದ್ದಾರೆ. ರೇಣು ಅವರೇ ತಮ್ಮನ್ನು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಪ್ರಕರಣದ ಆರೋಪಿಗಳ ಪತ್ತೆಗಾಗಿ ಸಿಪಿಎಂ ತಿರುವನಂತಪುರ ಜಿಲ್ಲಾ ಕಚೇರಿಯಲ್ಲಿ ಐಪಿಎಸ್ ಅಧಿಕಾರಿ ಚೈತ್ರಾ ತೆರೆಸಾ ಜಾನ್ ಅವರು ಶೋಧ ನಡೆಸಿದ್ದರು. ಇದನ್ನು ಸಿಪಿಎಂ ಖಂಡಿಸಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೂಡ ಈ ಘಟನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಅವರು ಅಧಿಕಾರಿಯನ್ನು ಬೆಂಬಲಿಸಿದ್ದರು.</p>.<p>ಸಿಪಿಎಂ ಮುಖಂಡ ಮತ್ತು ಲೋಕೋಪಯೋಗಿ ಸಚಿವ ಜಿ. ಸುಧಾಕರನ್ ಅವರುಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಲೆಪ್ಪಿಯ ನ್ಯಾಯಾಲಯವೊಂದು ಇತ್ತೀಚೆಗೆ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>