<p><strong>ತಿರುವನಂತಪುರ</strong>: ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯರ್ ಡಿವಿಷನ್) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.</p>.<p>ತಾನ್ಯಾ ಅವರು ಒಂದು ವರ್ಷದಿಂದ ವಕೀಲಿಕೆ ಅಭ್ಯಾಸ ಮಾಡುತ್ತಿದ್ದಾರೆ. ಸ್ಕ್ರೀನ್ ರೀಡರ್ ಮತ್ತು ಡಿಕ್ಟೇಷನ್ ಆ್ಯಪ್ಗಳನ್ನು ಬಳಸಿಕೊಂಡು ಅವರು ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ತಾನ್ಯಾ ಅವರು ಕಣ್ಣೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿರುವ ಅವರು, ಪ್ರೌಢಶಾಲೆಯಲ್ಲಿ ಕಲಿಯುತ್ತಿರುವಾಗಲೇ ಕಾನೂನು ಕ್ಷೇತ್ರದಲ್ಲಿ ಮುಂದುವರಿಯುವ ಕನಸು ಕಂಡಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ತಾನ್ಯಾ ಅವರು, ‘ಕಾನೂನು ಸೇವೆಯು ವಿಭಿನ್ನ ವೃತ್ತಿ ಎಂದು ಪರಿಗಣಿಸುತ್ತೇನೆ. ಅಲ್ಲದೆ, ಪ್ರತಿಯೊಬ್ಬರ ಪಾಲಿಗೂ ಕಾನೂನು ಬಲಿಷ್ಠವಾದ ಅಸ್ತ್ರ. ಇದು ಈ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೇರೇಪಿಸಿತು’ ಎಂದರು.</p>.<p> ‘ಇ–ನ್ಯಾಯಾಲಯಗಳ ಅನುಷ್ಠಾನದೊಂದಿಗೆ ಕೋರ್ಟ್ಗಳ ಆಧುನೀಕರಣವು ಅಂಗವಿಕಲರಿಗೆ ನ್ಯಾಯಾಲಯಗಳಲ್ಲಿ ವೃತ್ತಿ ಮಾಡಲು ಅನುಮಾಡಿಕೊಡುತ್ತದೆ’ ಎಂದು ಹೇಳಿದರು.</p>.<p>‘ಕಿರಿಯ ವಕೀಲೆಯಾಗಿದ್ದರೂ ಸಾಕಷ್ಟು ಬೆಂಬಲ ದೊರೆತಿದೆ. ಅಂಧತೆಯ ಮಿತಿಯಿಂದ ಹೊರಬಂದು ನ್ಯಾಯದಾನ ಮಾಡುವ ವಿಶ್ವಾಸವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯರ್ ಡಿವಿಷನ್) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.</p>.<p>ತಾನ್ಯಾ ಅವರು ಒಂದು ವರ್ಷದಿಂದ ವಕೀಲಿಕೆ ಅಭ್ಯಾಸ ಮಾಡುತ್ತಿದ್ದಾರೆ. ಸ್ಕ್ರೀನ್ ರೀಡರ್ ಮತ್ತು ಡಿಕ್ಟೇಷನ್ ಆ್ಯಪ್ಗಳನ್ನು ಬಳಸಿಕೊಂಡು ಅವರು ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ತಾನ್ಯಾ ಅವರು ಕಣ್ಣೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿರುವ ಅವರು, ಪ್ರೌಢಶಾಲೆಯಲ್ಲಿ ಕಲಿಯುತ್ತಿರುವಾಗಲೇ ಕಾನೂನು ಕ್ಷೇತ್ರದಲ್ಲಿ ಮುಂದುವರಿಯುವ ಕನಸು ಕಂಡಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ತಾನ್ಯಾ ಅವರು, ‘ಕಾನೂನು ಸೇವೆಯು ವಿಭಿನ್ನ ವೃತ್ತಿ ಎಂದು ಪರಿಗಣಿಸುತ್ತೇನೆ. ಅಲ್ಲದೆ, ಪ್ರತಿಯೊಬ್ಬರ ಪಾಲಿಗೂ ಕಾನೂನು ಬಲಿಷ್ಠವಾದ ಅಸ್ತ್ರ. ಇದು ಈ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೇರೇಪಿಸಿತು’ ಎಂದರು.</p>.<p> ‘ಇ–ನ್ಯಾಯಾಲಯಗಳ ಅನುಷ್ಠಾನದೊಂದಿಗೆ ಕೋರ್ಟ್ಗಳ ಆಧುನೀಕರಣವು ಅಂಗವಿಕಲರಿಗೆ ನ್ಯಾಯಾಲಯಗಳಲ್ಲಿ ವೃತ್ತಿ ಮಾಡಲು ಅನುಮಾಡಿಕೊಡುತ್ತದೆ’ ಎಂದು ಹೇಳಿದರು.</p>.<p>‘ಕಿರಿಯ ವಕೀಲೆಯಾಗಿದ್ದರೂ ಸಾಕಷ್ಟು ಬೆಂಬಲ ದೊರೆತಿದೆ. ಅಂಧತೆಯ ಮಿತಿಯಿಂದ ಹೊರಬಂದು ನ್ಯಾಯದಾನ ಮಾಡುವ ವಿಶ್ವಾಸವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>