<p> <strong>ತಿರುವನಂತಪುರ:</strong> ಸೆಪ್ಟೆಂಬರ್ 3ರಿಂದ 7 ದಿನ ಅಧಿಕೃತವಾಗಿ ಓಣಂ ಆಚರಣೆ ಮಾಡಲಾಗುವುದು ಎಂದು ಕೇರಳ ಸರ್ಕಾರ ಶನಿವಾರ ತಿಳಿಸಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಒಂದು ವಾರ ಓಣಂ ಆಚರಿಸುವ ಬಗ್ಗೆ ತೀರ್ಮಾನಿಸಲಾಯಿತು. ರಾಜಧಾನಿ ತಿರುವನಂತಪುರದಲ್ಲಿ ಭವ್ಯ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಉತ್ಸವ ಮುಕ್ತಾಯಗೊಳ್ಳಿದೆ ಎಂದು ಮುಖ್ಯಮಂತ್ರಿ ಕಚೇರಿಯ ತಿಳಿಸಿದೆ.</p>.ಭೂಕುಸಿತ ಕಂಡ ವಯನಾಡ್ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ.<p>ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ (ಡಿಟಿಪಿಸಿ) ಆಶ್ರಯದಲ್ಲಿ ಆಚರಣೆಗಳನ್ನು ಆಯೋಜಿಸಲಾಗುವುದು. ಕಾರ್ಯಕ್ರಮ ಯಶಸ್ವಿಯಾಗಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.</p><p>ತಿರುವನಂತಪುರದ ಕೌಡಿಯಾರ್ನಿಂದ ಮಣಕಾಡ್ವರೆಗಿನ ಪ್ರದೇಶವನ್ನು ಉತ್ಸವ ವಲಯವೆಂದು ಘೋಷಿಸಲಾಗುವುದು. ರಾಜಧಾನಿಗೆ ದೀಪಾಲಂಕಾರ ಮಾಡಲಾಗುತ್ತದೆ.ಎಲ್ಲಾ ಕಾರ್ಯಕ್ರಮಗಳು ರಾಜ್ಯದ ಹಸಿರು ಶಿಷ್ಟಾಚಾರಕ್ಕೆ ಬದ್ಧವಾಗಿರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p><p>ಅಗತ್ಯ ಸಾಮಗ್ರಿಗಳನ್ನು ಒಳಗೊಂಡಿರುವ ‘ಓಣಂ ಕಿಟ್ಗಳನ್ನು’ ಆಫ್ಲೈನ್ ಮತ್ತು ಆನ್ಲೈನ್ನಲ್ಲಿ ವಿತರಿಸಲು ಸಹ ನಿರ್ಧರಿಸಲಾಗಿದೆ.</p> .ಕೇರಳದಲ್ಲಿ ಓಣಂ ಸಂಭ್ರಮ: ಮನೆ ಮನೆಗಳಲ್ಲಿ ಹಬ್ಬ ಆಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ತಿರುವನಂತಪುರ:</strong> ಸೆಪ್ಟೆಂಬರ್ 3ರಿಂದ 7 ದಿನ ಅಧಿಕೃತವಾಗಿ ಓಣಂ ಆಚರಣೆ ಮಾಡಲಾಗುವುದು ಎಂದು ಕೇರಳ ಸರ್ಕಾರ ಶನಿವಾರ ತಿಳಿಸಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಒಂದು ವಾರ ಓಣಂ ಆಚರಿಸುವ ಬಗ್ಗೆ ತೀರ್ಮಾನಿಸಲಾಯಿತು. ರಾಜಧಾನಿ ತಿರುವನಂತಪುರದಲ್ಲಿ ಭವ್ಯ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಉತ್ಸವ ಮುಕ್ತಾಯಗೊಳ್ಳಿದೆ ಎಂದು ಮುಖ್ಯಮಂತ್ರಿ ಕಚೇರಿಯ ತಿಳಿಸಿದೆ.</p>.ಭೂಕುಸಿತ ಕಂಡ ವಯನಾಡ್ ಗ್ರಾಮಗಳಲ್ಲಿ ಕಾಣದ ಓಣಂ ಸಂಭ್ರಮ.<p>ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ (ಡಿಟಿಪಿಸಿ) ಆಶ್ರಯದಲ್ಲಿ ಆಚರಣೆಗಳನ್ನು ಆಯೋಜಿಸಲಾಗುವುದು. ಕಾರ್ಯಕ್ರಮ ಯಶಸ್ವಿಯಾಗಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.</p><p>ತಿರುವನಂತಪುರದ ಕೌಡಿಯಾರ್ನಿಂದ ಮಣಕಾಡ್ವರೆಗಿನ ಪ್ರದೇಶವನ್ನು ಉತ್ಸವ ವಲಯವೆಂದು ಘೋಷಿಸಲಾಗುವುದು. ರಾಜಧಾನಿಗೆ ದೀಪಾಲಂಕಾರ ಮಾಡಲಾಗುತ್ತದೆ.ಎಲ್ಲಾ ಕಾರ್ಯಕ್ರಮಗಳು ರಾಜ್ಯದ ಹಸಿರು ಶಿಷ್ಟಾಚಾರಕ್ಕೆ ಬದ್ಧವಾಗಿರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p><p>ಅಗತ್ಯ ಸಾಮಗ್ರಿಗಳನ್ನು ಒಳಗೊಂಡಿರುವ ‘ಓಣಂ ಕಿಟ್ಗಳನ್ನು’ ಆಫ್ಲೈನ್ ಮತ್ತು ಆನ್ಲೈನ್ನಲ್ಲಿ ವಿತರಿಸಲು ಸಹ ನಿರ್ಧರಿಸಲಾಗಿದೆ.</p> .ಕೇರಳದಲ್ಲಿ ಓಣಂ ಸಂಭ್ರಮ: ಮನೆ ಮನೆಗಳಲ್ಲಿ ಹಬ್ಬ ಆಚರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>