<p><strong>ತಿರುವನಂತಪುರ:</strong> ಅಶಿಸ್ತಿನ ವರ್ತನೆ ಹಾಗೂ ಮಾರ್ಷಲ್ಗಳ ಮೇಲೆ ಹಲ್ಲೆ ಮಾಡಿದ ಆರೋಪಗಳ ಮೇಲೆ ಕಾಂಗ್ರೆಸ್ ಪಕ್ಷದ ಮೂವರು ಶಾಸಕರನ್ನು ಕೇರಳ ವಿಧಾನಸಭೆಯ ಪ್ರಸಕ್ತ ಅಧಿವೇಶನದಿಂದ ಗುರುವಾರ ಅಮಾನತುಗೊಳಿಸಲಾಗಿದೆ.</p>.<p>ಶಾಸಕರಾದ ರೋಜಿ ಎಂ.ಜಾನ್, ಎಂ.ವಿನ್ಸೆಂಟ್ ಹಾಗೂ ಸನೀಶ್ ಕುಮಾರ್ ಜೋಸೆಫ್ ಅಮಾನತುಗೊಂಡಿರುವ ಶಾಸಕರು. </p>.<p>ಈ ಘಟನೆ ವೇಳೆ, ಮುಖ್ಯ ಮಾರ್ಷಲ್ ಅವರಿಗೆ ಗಾಯಗಳಾಗಿವೆ. ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಅವರು ಮಂಡಿಸಿದ ಗೊತ್ತುವಳಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ಶಬರಿಮಲೆ ದೇವಸ್ಥಾನದಲ್ಲಿನ ಚಿನ್ನ ಕಳುವು ವಿಚಾರವಾಗಿ ವಿಧಾನಸಭೆಯಲ್ಲಿ ನಡೆಯುತ್ತಿರುವ ಜಟಾಪಟಿಯಿಂದಾಗಿ ಸತತ ನಾಲ್ಕನೇ ದಿನವೂ ಕಲಾಪಕ್ಕೆ ಅಡ್ಡಿಯುಂಟಾಯಿತು.</p>.<p>ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ವಿಷಯ ಪ್ರಸ್ತಾಪಿಸಿ, ‘ದೇವಸ್ವಂ ಸಚಿವ ವಿ.ಎನ್.ವಾಸವನ್ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಕಲಾಪ ನಡೆಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷ ಪಾಳಯ ಯುಡಿಎಫ್ ಅವಕಾಶ ನೀಡುವುದಿಲ್ಲ’ ಎಂದರು.</p>.<p>ಇದರ ಬೆನ್ನಲ್ಲೇ, ವಿರೋಧ ಪಕ್ಷಗಳ ಶಾಸಕರು ವಿಧಾನಸಭಾಧ್ಯಕ್ಷರ ಪೀಠದ ಮುಂದೆ ಜಮಾಯಿಸಿ, ಘೋಷಣೆಗಳನ್ನು ಕೂಗಲು ಆರಂಭಿಸಿದರು. ಘೋಷಣಾ ವಾಕ್ಯಗಳಿರುವ ಬ್ಯಾನರ್ಗಳನ್ನು ಹಿಡಿದು ಪ್ರತಿಭಟಿಸಿದರು.</p>.<p>ಆಗ, ವಿಪಕ್ಷಗಳ ಶಾಸಕರ ಹಿಡಿದಿರುವ ಬ್ಯಾನರ್ಗಳನ್ನು ವಶಪಡಿಸಿಕೊಳ್ಳುವಂತೆ ವಿಧಾನಸಭಾಧ್ಯಕ್ಷ ಎ.ಎನ್.ಶಂಸೀರ್ ಅವರು ಮಾರ್ಷಲ್ಗಳಿಗೆ ಸೂಚಿಸಿದರು. ಇದು, ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು. ಬಳಿಕ ಕೆಲ ಕಾಲ ಕಲಾಪವೂ ಸ್ಥಗಿತಗೊಂಡಿತು.</p>.<p>ಮತ್ತೆ ಕಲಾಪ ಆರಂಭಗೊಂಡಾಗ ಮಾತನಾಡಿದ ವಿಧಾನಸಭಾಧ್ಯಕ್ಷ ಶಂಸೀರ್,‘ಗಲಾಟೆ ವೇಳೆ, ವಿರೋಧ ಪಕ್ಷಗಳ ಶಾಸಕರು ನಡೆಸಿದ ಹಲ್ಲೆಯಿಂದಾಗಿ ಮುಖ್ಯ ಮಾರ್ಷಲ್ ಅವರಿಗೆ ಗಾಯಗಳಾಗಿವೆ’ ಎಂದು ಸದನಕ್ಕೆ ತಿಳಿಸಿದರು.</p>.<p>ನಂತರ, ಮೂವರು ಕಾಂಗ್ರೆಸ್ ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತುಗೊಳಿಸಬೇಕು ಎಂಬ ಗೊತ್ತುವಳಿಯನ್ನು ಸಚಿವ ರಾಜೇಶ್ ಮಂಡಿಸಿದರು. ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p><strong>ನಿರಾಧಾರ:</strong> ಇನ್ನೊಂದೆಡೆ, ವಿರೋಧ ಪಕ್ಷಗಳ ಶಾಸಕರು, ಕಲಾಪವನ್ನು ಬಹಿಷ್ಕರಿಸಿದ್ದಕ್ಕೂ ಸದನ ಸಾಕ್ಷಿಯಾಯಿತು.</p>.<p>ತಮ್ಮನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕರು,‘ಮಾರ್ಷಲ್ಗಳ ಮೇಲೆ ಹಲ್ಲೆ ಮಾಡಿದ್ದೇವೆ ಎಂಬ ಆರೋಪ ನಿರಾಧಾರ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಅಶಿಸ್ತಿನ ವರ್ತನೆ ಹಾಗೂ ಮಾರ್ಷಲ್ಗಳ ಮೇಲೆ ಹಲ್ಲೆ ಮಾಡಿದ ಆರೋಪಗಳ ಮೇಲೆ ಕಾಂಗ್ರೆಸ್ ಪಕ್ಷದ ಮೂವರು ಶಾಸಕರನ್ನು ಕೇರಳ ವಿಧಾನಸಭೆಯ ಪ್ರಸಕ್ತ ಅಧಿವೇಶನದಿಂದ ಗುರುವಾರ ಅಮಾನತುಗೊಳಿಸಲಾಗಿದೆ.</p>.<p>ಶಾಸಕರಾದ ರೋಜಿ ಎಂ.ಜಾನ್, ಎಂ.ವಿನ್ಸೆಂಟ್ ಹಾಗೂ ಸನೀಶ್ ಕುಮಾರ್ ಜೋಸೆಫ್ ಅಮಾನತುಗೊಂಡಿರುವ ಶಾಸಕರು. </p>.<p>ಈ ಘಟನೆ ವೇಳೆ, ಮುಖ್ಯ ಮಾರ್ಷಲ್ ಅವರಿಗೆ ಗಾಯಗಳಾಗಿವೆ. ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಅವರು ಮಂಡಿಸಿದ ಗೊತ್ತುವಳಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ಶಬರಿಮಲೆ ದೇವಸ್ಥಾನದಲ್ಲಿನ ಚಿನ್ನ ಕಳುವು ವಿಚಾರವಾಗಿ ವಿಧಾನಸಭೆಯಲ್ಲಿ ನಡೆಯುತ್ತಿರುವ ಜಟಾಪಟಿಯಿಂದಾಗಿ ಸತತ ನಾಲ್ಕನೇ ದಿನವೂ ಕಲಾಪಕ್ಕೆ ಅಡ್ಡಿಯುಂಟಾಯಿತು.</p>.<p>ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ವಿಷಯ ಪ್ರಸ್ತಾಪಿಸಿ, ‘ದೇವಸ್ವಂ ಸಚಿವ ವಿ.ಎನ್.ವಾಸವನ್ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಕಲಾಪ ನಡೆಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷ ಪಾಳಯ ಯುಡಿಎಫ್ ಅವಕಾಶ ನೀಡುವುದಿಲ್ಲ’ ಎಂದರು.</p>.<p>ಇದರ ಬೆನ್ನಲ್ಲೇ, ವಿರೋಧ ಪಕ್ಷಗಳ ಶಾಸಕರು ವಿಧಾನಸಭಾಧ್ಯಕ್ಷರ ಪೀಠದ ಮುಂದೆ ಜಮಾಯಿಸಿ, ಘೋಷಣೆಗಳನ್ನು ಕೂಗಲು ಆರಂಭಿಸಿದರು. ಘೋಷಣಾ ವಾಕ್ಯಗಳಿರುವ ಬ್ಯಾನರ್ಗಳನ್ನು ಹಿಡಿದು ಪ್ರತಿಭಟಿಸಿದರು.</p>.<p>ಆಗ, ವಿಪಕ್ಷಗಳ ಶಾಸಕರ ಹಿಡಿದಿರುವ ಬ್ಯಾನರ್ಗಳನ್ನು ವಶಪಡಿಸಿಕೊಳ್ಳುವಂತೆ ವಿಧಾನಸಭಾಧ್ಯಕ್ಷ ಎ.ಎನ್.ಶಂಸೀರ್ ಅವರು ಮಾರ್ಷಲ್ಗಳಿಗೆ ಸೂಚಿಸಿದರು. ಇದು, ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು. ಬಳಿಕ ಕೆಲ ಕಾಲ ಕಲಾಪವೂ ಸ್ಥಗಿತಗೊಂಡಿತು.</p>.<p>ಮತ್ತೆ ಕಲಾಪ ಆರಂಭಗೊಂಡಾಗ ಮಾತನಾಡಿದ ವಿಧಾನಸಭಾಧ್ಯಕ್ಷ ಶಂಸೀರ್,‘ಗಲಾಟೆ ವೇಳೆ, ವಿರೋಧ ಪಕ್ಷಗಳ ಶಾಸಕರು ನಡೆಸಿದ ಹಲ್ಲೆಯಿಂದಾಗಿ ಮುಖ್ಯ ಮಾರ್ಷಲ್ ಅವರಿಗೆ ಗಾಯಗಳಾಗಿವೆ’ ಎಂದು ಸದನಕ್ಕೆ ತಿಳಿಸಿದರು.</p>.<p>ನಂತರ, ಮೂವರು ಕಾಂಗ್ರೆಸ್ ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತುಗೊಳಿಸಬೇಕು ಎಂಬ ಗೊತ್ತುವಳಿಯನ್ನು ಸಚಿವ ರಾಜೇಶ್ ಮಂಡಿಸಿದರು. ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p><strong>ನಿರಾಧಾರ:</strong> ಇನ್ನೊಂದೆಡೆ, ವಿರೋಧ ಪಕ್ಷಗಳ ಶಾಸಕರು, ಕಲಾಪವನ್ನು ಬಹಿಷ್ಕರಿಸಿದ್ದಕ್ಕೂ ಸದನ ಸಾಕ್ಷಿಯಾಯಿತು.</p>.<p>ತಮ್ಮನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕರು,‘ಮಾರ್ಷಲ್ಗಳ ಮೇಲೆ ಹಲ್ಲೆ ಮಾಡಿದ್ದೇವೆ ಎಂಬ ಆರೋಪ ನಿರಾಧಾರ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>