<p><strong>ತಿರುವನಂತಪುರ (ಕೇರಳ):</strong> ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.</p>.<p>ಕಣ್ಣೂರಿನಿಂದ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಹಾಲಿ ಸಂಸದ ಕೆ. ಸುಧಾಕರನ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.</p>.<p>ಸೇನಾಪತಿ ವೇಣು ಅವರು ಉಡುಂಬಂಚೋಳ ಕ್ಷೇತ್ರದಿಂದ ಹಾಗೂ ಶಾಂತಕುಮಾರ್ ಅಡೂರ್ನಿಂದ (ಎಸ್ಸಿ) ಸ್ಪರ್ಧಿಸುತ್ತಿದ್ದಾರೆ.</p>.<p>ಸಂದೀಪ್ ವಾರಿಯರ್ ತ್ರಿಕರಿಪುರದಿಂದ ಸ್ಪರ್ಧಿಸಿದರೆ, ಎಂ.ಲಿಜು ಕಾಯಂಕುಲಂನಿಂದ ಮತ್ತು ಅಬಿನ್ ವರ್ಕಿ ಅವರು ಅರನ್ಮುಲಾದಿಂದ ಕಣಕ್ಕಿಳಿಯಲಿದ್ದಾರೆ.</p>.<p>ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 55 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.</p>. <p>ಕೇರಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಪೆರಾವೂರ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪರವೂರ್ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಕಣಕ್ಕಿಳಿದಿದ್ದಾರೆ. </p>.<p>ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಅವರ ಪುತ್ರ, ಕೆ ಮುರಳೀಧರನ್ ಅವರು ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. </p>.<p>140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 4 ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ. ಪ್ರಸ್ತುತ ವಿಧಾನಸಭೆಯ ಅವಧಿ ಮೇ 23ರಂದು ಕೊನೆಗೊಳ್ಳಲಿದೆ. </p> .ಕೇರಳ ವಿಧಾನಸಭೆಗೆ ದಿನಾಂಕ ಘೋಷಣೆ: ತ್ರಿಕೋನ ಹೋರಾಟಕ್ಕೆ ಸಜ್ಜು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ (ಕೇರಳ):</strong> ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.</p>.<p>ಕಣ್ಣೂರಿನಿಂದ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಹಾಲಿ ಸಂಸದ ಕೆ. ಸುಧಾಕರನ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.</p>.<p>ಸೇನಾಪತಿ ವೇಣು ಅವರು ಉಡುಂಬಂಚೋಳ ಕ್ಷೇತ್ರದಿಂದ ಹಾಗೂ ಶಾಂತಕುಮಾರ್ ಅಡೂರ್ನಿಂದ (ಎಸ್ಸಿ) ಸ್ಪರ್ಧಿಸುತ್ತಿದ್ದಾರೆ.</p>.<p>ಸಂದೀಪ್ ವಾರಿಯರ್ ತ್ರಿಕರಿಪುರದಿಂದ ಸ್ಪರ್ಧಿಸಿದರೆ, ಎಂ.ಲಿಜು ಕಾಯಂಕುಲಂನಿಂದ ಮತ್ತು ಅಬಿನ್ ವರ್ಕಿ ಅವರು ಅರನ್ಮುಲಾದಿಂದ ಕಣಕ್ಕಿಳಿಯಲಿದ್ದಾರೆ.</p>.<p>ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 55 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.</p>. <p>ಕೇರಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಪೆರಾವೂರ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪರವೂರ್ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಕಣಕ್ಕಿಳಿದಿದ್ದಾರೆ. </p>.<p>ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಅವರ ಪುತ್ರ, ಕೆ ಮುರಳೀಧರನ್ ಅವರು ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. </p>.<p>140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 4 ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ. ಪ್ರಸ್ತುತ ವಿಧಾನಸಭೆಯ ಅವಧಿ ಮೇ 23ರಂದು ಕೊನೆಗೊಳ್ಳಲಿದೆ. </p> .ಕೇರಳ ವಿಧಾನಸಭೆಗೆ ದಿನಾಂಕ ಘೋಷಣೆ: ತ್ರಿಕೋನ ಹೋರಾಟಕ್ಕೆ ಸಜ್ಜು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>