<p><strong>ಕೊಚ್ಚಿ:</strong> ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಆಡಳಿತಾರೂಢ ‘ಎಲ್ಡಿಎಫ್’ಗೆ ಪೀಪಲ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಬೆಂಬಲ ಘೋಷಿಸಿದೆ. </p><p>ಎರ್ನಾಕುಲಂನಲ್ಲಿ ಭಾನುವಾರ ನಡೆದ ಪಕ್ಷದ ಸಭೆಯ ಬಳಿಕ ಪಿಡಿಪಿ ಮುಖ್ಯಸ್ಥ ಅಬ್ದುಲ್ ನಾಸರ್ ಮದನಿ ಅವರು ಎಲ್ಡಿಎಫ್ ಜೊತೆಗಿನ ಮೈತ್ರಿಯ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. </p><p>ಭಾರತದ ಬೇರೆ ಭಾಗಗಳಂತೆ, ಕೋಮುವಾದಿಗಳು ಕೇರಳದ ರಾಜಕೀಯವನ್ನು ಬದಲಾಯಿಸಲು ಹೊರಟಿದ್ದಾರೆ. ಅದನ್ನು ತಡೆಯುವ ಉದ್ದೇಶದಿಂದ ಹಾಗೂ ಎಡಪಂಥಿಯ ಚಿಂತನೆಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಮತ್ತು ಕೇರಳವನ್ನು ಜಾತ್ಯಾತೀತವಾಗಿ ಉಳಿಸುವುದಕ್ಕಾಗಿ ನಾವು ಎಲ್ಡಿಎಫ್ನೊಂದಿಗೆ ಕೈ ಜೋಡಿಸುತ್ತಿದ್ದೇವೆ ಎಂದು ಅಬ್ದುಲ್ ನಾಸರ್ ಮದನಿ ಹೇಳಿದ್ದಾರೆ. </p><p>ಸಂಘ ಪರಿವಾರದ ಗುಂಪುಗಳು ಮಂಡಿಸುವ ಆರೋಪಗಳ ಪ್ರಚಾರಕರಾಗಿ ಕಾರ್ಯನಿರ್ವಹಿಸುವ ಮೂಲಕ ಕಾಂಗ್ರೆಸ್ ಕೂಡ ಅಂತಹ ಶಕ್ತಿಗಳಿಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ ಎಂದು ಪಿಡಿಪಿ ಆರೋಪಿಸಿದೆ.</p><p>ಕೇರಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಭವಿಷ್ಯದಲ್ಲಿ ರಾಜ್ಯವನ್ನು ಜಾತ್ಯಾತೀತವಾಗಿ ಉಳಿಸುವುದಕ್ಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.</p><p>140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 4 ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಆಡಳಿತಾರೂಢ ‘ಎಲ್ಡಿಎಫ್’ಗೆ ಪೀಪಲ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಬೆಂಬಲ ಘೋಷಿಸಿದೆ. </p><p>ಎರ್ನಾಕುಲಂನಲ್ಲಿ ಭಾನುವಾರ ನಡೆದ ಪಕ್ಷದ ಸಭೆಯ ಬಳಿಕ ಪಿಡಿಪಿ ಮುಖ್ಯಸ್ಥ ಅಬ್ದುಲ್ ನಾಸರ್ ಮದನಿ ಅವರು ಎಲ್ಡಿಎಫ್ ಜೊತೆಗಿನ ಮೈತ್ರಿಯ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. </p><p>ಭಾರತದ ಬೇರೆ ಭಾಗಗಳಂತೆ, ಕೋಮುವಾದಿಗಳು ಕೇರಳದ ರಾಜಕೀಯವನ್ನು ಬದಲಾಯಿಸಲು ಹೊರಟಿದ್ದಾರೆ. ಅದನ್ನು ತಡೆಯುವ ಉದ್ದೇಶದಿಂದ ಹಾಗೂ ಎಡಪಂಥಿಯ ಚಿಂತನೆಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಮತ್ತು ಕೇರಳವನ್ನು ಜಾತ್ಯಾತೀತವಾಗಿ ಉಳಿಸುವುದಕ್ಕಾಗಿ ನಾವು ಎಲ್ಡಿಎಫ್ನೊಂದಿಗೆ ಕೈ ಜೋಡಿಸುತ್ತಿದ್ದೇವೆ ಎಂದು ಅಬ್ದುಲ್ ನಾಸರ್ ಮದನಿ ಹೇಳಿದ್ದಾರೆ. </p><p>ಸಂಘ ಪರಿವಾರದ ಗುಂಪುಗಳು ಮಂಡಿಸುವ ಆರೋಪಗಳ ಪ್ರಚಾರಕರಾಗಿ ಕಾರ್ಯನಿರ್ವಹಿಸುವ ಮೂಲಕ ಕಾಂಗ್ರೆಸ್ ಕೂಡ ಅಂತಹ ಶಕ್ತಿಗಳಿಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ ಎಂದು ಪಿಡಿಪಿ ಆರೋಪಿಸಿದೆ.</p><p>ಕೇರಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಭವಿಷ್ಯದಲ್ಲಿ ರಾಜ್ಯವನ್ನು ಜಾತ್ಯಾತೀತವಾಗಿ ಉಳಿಸುವುದಕ್ಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.</p><p>140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 4 ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>