<p><strong>ತಿರುವನಂತಪುರ: </strong>ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆರವುಗೊಳಿಸಿ, ಅಲ್ಲಿಗೆ ಶಿಕ್ಷಣ ತಜ್ಞರನ್ನು ನೇಮಕಗೊಳಿಸುವ ನಿಟ್ಟಿನಲ್ಲಿ ಕೇರಳ ವಿಧಾನಸಭೆಯು ಮಂಗಳವಾರ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ.</p>.<p>ಮಸೂದೆಗೆ ಸಂಬಂಧಿಸಿ ತನ್ನ ಸಲಹೆಗಳನ್ನು ಸ್ವೀಕರಿಸದ ಕಾರಣ ವಿರೋಧ ಪಕ್ಷ ಯುಡಿಎಫ್ ಸದನವನ್ನು ಬಹಿಷ್ಕರಿಸಿದೆ.</p>.<p>ಸುದೀರ್ಘ ಚರ್ಚೆಯ ಬಳಿಕ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಎ.ಎನ್. ಶಂಸೀರ್ ತಿಳಿಸಿದ್ದಾರೆ.</p>.<p>‘ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆರವುಗೊಳಿಸುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಆ ಸ್ಥಾನಕ್ಕೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ಅಥವಾ ಕೇರಳ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿಗಳನ್ನು ನೇಮಕಗೊಳಿಸಬೇಕು’ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹೇಳಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿದಕಾನೂನು ಸಚಿವ ಪಿ.ರಾಜೀವ್ ‘ನ್ಯಾಯಮೂರ್ತಿಗಳು ನೇಮಕಾತಿ ಸಮಿತಿಯಲ್ಲಿರಬಾರದು. ಅದಕ್ಕಿಂತ ಸ್ಪೀಕರ್ ಇದ್ದರೆ ಉತ್ತಮ. ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ನಿವೃತ್ತ ನ್ಯಾಯಮೂರ್ತಿಗಳು ಏಕೈಕ ಆಯ್ಕೆಯಲ್ಲ’ ಎಂದಿದ್ದಾರೆ.</p>.<p>ಈ ವಿಚಾರವಾಗಿ ಸರ್ಕಾರ ಭಿನ್ನ ನಿಲುವು ಪ್ರಕಟಿಸಿರುವುದರಿಂದ ವಿರೋಧಪಕ್ಷವು ಸದನವನ್ನು ಬಹಿಷ್ಕರಿಸಿತು.</p>.<p>‘ರಾಜ್ಯ ಸರ್ಕಾರವು ತಮಗೆ ಬೇಕಾದವರನ್ನು ನೇಮಕ ಮಾಡುವ ಮೂಲಕ ವಿಶ್ವವಿದ್ಯಾಲಯಗಳನ್ನು ಕಮ್ಯುನಿಸ್ಟ್ ಕೇಂದ್ರಗಳನ್ನಾಗಿ ಮಾಡಲು ಯತ್ನಿಸುತ್ತಿದೆ’ ಎಂದೂ ಆರೋಪಿಸಿದೆ.</p>.<p>ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ ಬೆನ್ನಲ್ಲೇ ಈ ಮಸೂದೆಯನ್ನು ಮಂಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆರವುಗೊಳಿಸಿ, ಅಲ್ಲಿಗೆ ಶಿಕ್ಷಣ ತಜ್ಞರನ್ನು ನೇಮಕಗೊಳಿಸುವ ನಿಟ್ಟಿನಲ್ಲಿ ಕೇರಳ ವಿಧಾನಸಭೆಯು ಮಂಗಳವಾರ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ.</p>.<p>ಮಸೂದೆಗೆ ಸಂಬಂಧಿಸಿ ತನ್ನ ಸಲಹೆಗಳನ್ನು ಸ್ವೀಕರಿಸದ ಕಾರಣ ವಿರೋಧ ಪಕ್ಷ ಯುಡಿಎಫ್ ಸದನವನ್ನು ಬಹಿಷ್ಕರಿಸಿದೆ.</p>.<p>ಸುದೀರ್ಘ ಚರ್ಚೆಯ ಬಳಿಕ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಎ.ಎನ್. ಶಂಸೀರ್ ತಿಳಿಸಿದ್ದಾರೆ.</p>.<p>‘ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆರವುಗೊಳಿಸುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಆ ಸ್ಥಾನಕ್ಕೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ಅಥವಾ ಕೇರಳ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿಗಳನ್ನು ನೇಮಕಗೊಳಿಸಬೇಕು’ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹೇಳಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿದಕಾನೂನು ಸಚಿವ ಪಿ.ರಾಜೀವ್ ‘ನ್ಯಾಯಮೂರ್ತಿಗಳು ನೇಮಕಾತಿ ಸಮಿತಿಯಲ್ಲಿರಬಾರದು. ಅದಕ್ಕಿಂತ ಸ್ಪೀಕರ್ ಇದ್ದರೆ ಉತ್ತಮ. ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ನಿವೃತ್ತ ನ್ಯಾಯಮೂರ್ತಿಗಳು ಏಕೈಕ ಆಯ್ಕೆಯಲ್ಲ’ ಎಂದಿದ್ದಾರೆ.</p>.<p>ಈ ವಿಚಾರವಾಗಿ ಸರ್ಕಾರ ಭಿನ್ನ ನಿಲುವು ಪ್ರಕಟಿಸಿರುವುದರಿಂದ ವಿರೋಧಪಕ್ಷವು ಸದನವನ್ನು ಬಹಿಷ್ಕರಿಸಿತು.</p>.<p>‘ರಾಜ್ಯ ಸರ್ಕಾರವು ತಮಗೆ ಬೇಕಾದವರನ್ನು ನೇಮಕ ಮಾಡುವ ಮೂಲಕ ವಿಶ್ವವಿದ್ಯಾಲಯಗಳನ್ನು ಕಮ್ಯುನಿಸ್ಟ್ ಕೇಂದ್ರಗಳನ್ನಾಗಿ ಮಾಡಲು ಯತ್ನಿಸುತ್ತಿದೆ’ ಎಂದೂ ಆರೋಪಿಸಿದೆ.</p>.<p>ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ ಬೆನ್ನಲ್ಲೇ ಈ ಮಸೂದೆಯನ್ನು ಮಂಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>