<p><strong>ತಿರುವನಂತಪುರ</strong>: ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಖನಿಜಗಳ ಗಣಿಗಾರಿಕೆಗೆ ಅವಕಾಶ ಕುರಿತಾದ ಪ್ರಸ್ತಾಪವನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಡಳಿತ ಪಕ್ಷದ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಅವರ ವೇದಿಕೆಯ ಮುಂದೆ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ನಡುವೆಯೇ ನಿರ್ಣಯವನ್ನು ಅಂಗೀಕರಿಸಲಾಯಿತು. </p><p>ಆಶಾ ಕಾರ್ಯಕರ್ತರ ಪ್ರತಿಭಟನೆ ಕುರಿತಂತೆ ಚರ್ಚಿಸಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಅಂಗೀಕರಿಸದ ಕಾರಣ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ತಮ್ಮ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡದಿದ್ದಕ್ಕಾಗಿ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಿಂದಾಗಿ, ಆಳ ಸಮುದ್ರ ಗಣಿಗಾರಿಕೆ ನಿರ್ಣಯವನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. </p><p>ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಯನ್ನು ಪ್ರಾರಂಭಿಸುವ ಕೇಂದ್ರದ ನಡೆಯನ್ನು ಏನೇ ಆದರೂ ಅನುಮತಿಸಲಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಮೀನುಗಾರ ಸಮುದಾಯದ ಕಳವಳವನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.</p><p>ಕಡಲಾಚೆಯ ಪ್ರದೇಶಗಳ ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ 2002ರ ಮಾನದಂಡಗಳು ಮತ್ತು ಕಳೆದ ವರ್ಷ ಅದಕ್ಕೆ ಮಾಡಲಾದ ತಿದ್ದುಪಡಿಗಳು ರಾಜ್ಯಗಳ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂದು ಸರ್ಕಾರ ಈ ಹಿಂದೆ ಸದನದಲ್ಲಿ ಹೇಳಿತ್ತು. </p><p>ಪ್ರಸ್ತಾಪಿತ ಆಳ ಸಮುದ್ರ ಗಣಿಗಾರಿಕೆಯ ವಿರುದ್ಧದ ಆಂದೋಲನದಲ್ಲಿ ಸೇರಲು ಆಡಳಿತ ಪಕ್ಷವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅನ್ನು ಒತ್ತಾಯಿಸಿತ್ತು. ಎಲ್ಡಿಎಫ್ ಸರ್ಕಾರವು ಗಣಿಗಾರಿಕೆ ಉಪಕ್ರಮವನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿ ಯುಡಿಎಫ್ ಜಂಟಿ ಪ್ರತಿಭಟನೆಯ ಆಹ್ವಾನವನ್ನು ತಿರಸ್ಕರಿಸಿದೆ. </p><p>ಕೇಂದ್ರದ ಈ ಕ್ರಮವನ್ನು ಪ್ರತ್ಯೇಕವಾಗಿ ಪ್ರತಿಭಟಿಸುವುದಾಗಿ ಅದು ಹೇಳಿದೆ. ದೀರ್ಘಾವಧಿಯಲ್ಲಿ, ಆಳ ಸಮುದ್ರ ಗಣಿಗಾರಿಕೆಯು ಸಾಂಪ್ರದಾಯಿಕ ಸಮುದ್ರ ಮತ್ತು ಹಿನ್ನೀರಿನ ಮೀನುಗಳನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ. ಕರಾವಳಿ ಸವೆತ ಮತ್ತು ಉದ್ಯೋಗ ನಷ್ಟವನ್ನು ವೇಗಗೊಳಿಸುತ್ತದೆ ಮತ್ತು ಮೀನುಗಾರರ ಹಡಗುಗಳಿಗೆ ಅಡ್ಡಿಯಾಗುತ್ತದೆ ಎಂದು ಸರ್ಕಾರ ಕಳೆದ ತಿಂಗಳು ವಿಧಾನಸಭೆಯಲ್ಲಿ ಹೇಳಿತ್ತು. ಕೇರಳ ಕೈಗಾರಿಕಾ ಸಚಿವ ಪಿ.ರಾಜೀವ್ ಇತ್ತೀಚೆಗೆ ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆಯ ವಿರುದ್ಧ ಕೇರಳವು ಮೂರು ಸಂದರ್ಭಗಳಲ್ಲಿ ಅಧಿಕೃತವಾಗಿ ಪ್ರತಿಭಟನೆಯನ್ನು ದಾಖಲಿಸಿದೆ ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಖನಿಜಗಳ ಗಣಿಗಾರಿಕೆಗೆ ಅವಕಾಶ ಕುರಿತಾದ ಪ್ರಸ್ತಾಪವನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಡಳಿತ ಪಕ್ಷದ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಅವರ ವೇದಿಕೆಯ ಮುಂದೆ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ನಡುವೆಯೇ ನಿರ್ಣಯವನ್ನು ಅಂಗೀಕರಿಸಲಾಯಿತು. </p><p>ಆಶಾ ಕಾರ್ಯಕರ್ತರ ಪ್ರತಿಭಟನೆ ಕುರಿತಂತೆ ಚರ್ಚಿಸಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಅಂಗೀಕರಿಸದ ಕಾರಣ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ತಮ್ಮ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡದಿದ್ದಕ್ಕಾಗಿ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಿಂದಾಗಿ, ಆಳ ಸಮುದ್ರ ಗಣಿಗಾರಿಕೆ ನಿರ್ಣಯವನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. </p><p>ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಯನ್ನು ಪ್ರಾರಂಭಿಸುವ ಕೇಂದ್ರದ ನಡೆಯನ್ನು ಏನೇ ಆದರೂ ಅನುಮತಿಸಲಾಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಮೀನುಗಾರ ಸಮುದಾಯದ ಕಳವಳವನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.</p><p>ಕಡಲಾಚೆಯ ಪ್ರದೇಶಗಳ ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ 2002ರ ಮಾನದಂಡಗಳು ಮತ್ತು ಕಳೆದ ವರ್ಷ ಅದಕ್ಕೆ ಮಾಡಲಾದ ತಿದ್ದುಪಡಿಗಳು ರಾಜ್ಯಗಳ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂದು ಸರ್ಕಾರ ಈ ಹಿಂದೆ ಸದನದಲ್ಲಿ ಹೇಳಿತ್ತು. </p><p>ಪ್ರಸ್ತಾಪಿತ ಆಳ ಸಮುದ್ರ ಗಣಿಗಾರಿಕೆಯ ವಿರುದ್ಧದ ಆಂದೋಲನದಲ್ಲಿ ಸೇರಲು ಆಡಳಿತ ಪಕ್ಷವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅನ್ನು ಒತ್ತಾಯಿಸಿತ್ತು. ಎಲ್ಡಿಎಫ್ ಸರ್ಕಾರವು ಗಣಿಗಾರಿಕೆ ಉಪಕ್ರಮವನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿ ಯುಡಿಎಫ್ ಜಂಟಿ ಪ್ರತಿಭಟನೆಯ ಆಹ್ವಾನವನ್ನು ತಿರಸ್ಕರಿಸಿದೆ. </p><p>ಕೇಂದ್ರದ ಈ ಕ್ರಮವನ್ನು ಪ್ರತ್ಯೇಕವಾಗಿ ಪ್ರತಿಭಟಿಸುವುದಾಗಿ ಅದು ಹೇಳಿದೆ. ದೀರ್ಘಾವಧಿಯಲ್ಲಿ, ಆಳ ಸಮುದ್ರ ಗಣಿಗಾರಿಕೆಯು ಸಾಂಪ್ರದಾಯಿಕ ಸಮುದ್ರ ಮತ್ತು ಹಿನ್ನೀರಿನ ಮೀನುಗಳನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ. ಕರಾವಳಿ ಸವೆತ ಮತ್ತು ಉದ್ಯೋಗ ನಷ್ಟವನ್ನು ವೇಗಗೊಳಿಸುತ್ತದೆ ಮತ್ತು ಮೀನುಗಾರರ ಹಡಗುಗಳಿಗೆ ಅಡ್ಡಿಯಾಗುತ್ತದೆ ಎಂದು ಸರ್ಕಾರ ಕಳೆದ ತಿಂಗಳು ವಿಧಾನಸಭೆಯಲ್ಲಿ ಹೇಳಿತ್ತು. ಕೇರಳ ಕೈಗಾರಿಕಾ ಸಚಿವ ಪಿ.ರಾಜೀವ್ ಇತ್ತೀಚೆಗೆ ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆಯ ವಿರುದ್ಧ ಕೇರಳವು ಮೂರು ಸಂದರ್ಭಗಳಲ್ಲಿ ಅಧಿಕೃತವಾಗಿ ಪ್ರತಿಭಟನೆಯನ್ನು ದಾಖಲಿಸಿದೆ ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>