<p><strong>ತಿರುವನಂತಪುರ:</strong> ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ ಮತ್ತು ಮುಖ್ಯ ಅರ್ಚಕ ಕಂಡರಾರು ರಾಜೀವರು ಅವರ ಬಂಧನ ಸಂಬಂಧ ಕೇರಳ ವಿಧಾನಸಭೆಯಲ್ಲಿ ಸೋಮವಾರ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ನಡುವೆ ತೀವ್ರ ವಾಗ್ವಾದ ನಡೆಯಿತು.</p>.<p>ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ನಾಯಕರು, ‘ಚಿನ್ನ ನಾಪತ್ತೆ ಪ್ರಕರಣ, ಮಹಿಳೆಯರ ಪ್ರವೇಶ ಸೇರಿದಂತೆ ಶಬರಿಮಲೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸರ್ಕಾರದ ನಿಲುವು ಸರಿಯಲ್ಲ. ಸದನದ ಕಲಾಪಗಳಿಗೆ ಸಹಕರಿಸುವುದಿಲ್ಲ’ ಎಂದು ಸಭಾಧ್ಯಕ್ಷ ಎ.ಎನ್. ಶಂಸೀರ್ ಅವರಿಗೆ ಹೇಳಿದರು.</p>.<p>‘ನವಯುಗ ಯಾತ್ರೆ’ಯ ಭಾಗವಾಗಿ ಹೊರಗಿರುವ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರ ಅನುಪಸ್ಥಿತಿಯಲ್ಲಿ, ಕಾಂಗ್ರೆಸ್ ಶಾಸಕ ಕೆ. ಬಾಬು ಅವರು ಸದನಕ್ಕೆ ತಮ್ಮ ನಿಲುವನ್ನು ತಿಳಿಸಿದರು. </p>.<p>ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕಿರುವುದು ಹಾಗೂ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಪ್ರಧಾನ ಅರ್ಚಕರನ್ನು ಬಂಧಿಸಿದ್ದಕ್ಕೆ ಟೀಕಿಸಿದರು.</p>.<p>‘ದೇವಸ್ವಂ ಸಚಿವ ವಿ.ಎನ್. ವಾಸವನ್ ಅವರು ರಾಜೀನಾಮೆ ನೀಡಬೇಕು. ಸರ್ಕಾರದ ಲೋಪಗಳಿಂದಾಗಿ ಪ್ರಕರಣದ ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಅವರೆಲ್ಲರೂ ಈಗ ಜೈಲಿನ ಹೊರಗೆ ಮುಕ್ತ ಜೀವನ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಶಬರಿಮಲೆ ಆಚರಣೆಗಳ ಉಲ್ಲಂಘನೆಯನ್ನು ಸರ್ಕಾರ ಬೆಂಬಲಿಸುತ್ತಿದೆ. ಈ ನಿಲುವನ್ನು ಬೆಂಬಲಿಸದ ಕಾರಣ ಪ್ರಧಾನ ಅರ್ಚಕರನ್ನು 40 ದಿನಗಳವರೆಗೆ ಜೈಲಿನಲ್ಲಿರಿಸಲಾಯಿತು’ ಎಂದು ಆರೋಪಿಸಿದರು.</p>.<p>2018ರಲ್ಲಿ ಮಹಿಳೆಯರ ಪ್ರವೇಶ ವಿಷಯವನ್ನೂ ಬಾಬು ಉಲ್ಲೇಖಿಸಿದರು. ‘ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸರ್ಕಾರದ ಬೆಂಬಲದೊಂದಿಗೆ ಆಯೋಜಿಸಿದ್ದ ‘ಜಾಗತಿಕ ಅಯ್ಯಪ್ಪ ಸಂಗಮ’ ಕಾರ್ಯಕ್ರಮದಲ್ಲಿ ಅಕ್ರಮಗಳು ನಡೆದಿವೆ’ ಎಂದೂ ಆರೋಪಿಸಿದರು.</p>.<p>ಈ ವೇಳೆ, ಎಲ್ಡಿಎಫ್ ಮತ್ತು ಯುಡಿಎಫ್ ನಡುವೆ ತೀವ್ರ ವಾಗ್ವಾದ ನಡೆಯಿತು. ಯುಡಿಎಫ್ ಶಾಸಕರು ಫಲಕಗಳನ್ನು ಹಿಡಿದುಕೊಂಡು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ, ಕಲಾಪವನ್ನು ಬಹಿಷ್ಕರಿಸಿ ಸದನದಿಂದ ಹೊರನಡೆದರು. ಸಭಾಧ್ಯಕ್ಷ ಎ.ಎನ್. ಶಂಸೀರ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ ಮತ್ತು ಮುಖ್ಯ ಅರ್ಚಕ ಕಂಡರಾರು ರಾಜೀವರು ಅವರ ಬಂಧನ ಸಂಬಂಧ ಕೇರಳ ವಿಧಾನಸಭೆಯಲ್ಲಿ ಸೋಮವಾರ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ನಡುವೆ ತೀವ್ರ ವಾಗ್ವಾದ ನಡೆಯಿತು.</p>.<p>ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ನಾಯಕರು, ‘ಚಿನ್ನ ನಾಪತ್ತೆ ಪ್ರಕರಣ, ಮಹಿಳೆಯರ ಪ್ರವೇಶ ಸೇರಿದಂತೆ ಶಬರಿಮಲೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸರ್ಕಾರದ ನಿಲುವು ಸರಿಯಲ್ಲ. ಸದನದ ಕಲಾಪಗಳಿಗೆ ಸಹಕರಿಸುವುದಿಲ್ಲ’ ಎಂದು ಸಭಾಧ್ಯಕ್ಷ ಎ.ಎನ್. ಶಂಸೀರ್ ಅವರಿಗೆ ಹೇಳಿದರು.</p>.<p>‘ನವಯುಗ ಯಾತ್ರೆ’ಯ ಭಾಗವಾಗಿ ಹೊರಗಿರುವ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರ ಅನುಪಸ್ಥಿತಿಯಲ್ಲಿ, ಕಾಂಗ್ರೆಸ್ ಶಾಸಕ ಕೆ. ಬಾಬು ಅವರು ಸದನಕ್ಕೆ ತಮ್ಮ ನಿಲುವನ್ನು ತಿಳಿಸಿದರು. </p>.<p>ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕಿರುವುದು ಹಾಗೂ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಪ್ರಧಾನ ಅರ್ಚಕರನ್ನು ಬಂಧಿಸಿದ್ದಕ್ಕೆ ಟೀಕಿಸಿದರು.</p>.<p>‘ದೇವಸ್ವಂ ಸಚಿವ ವಿ.ಎನ್. ವಾಸವನ್ ಅವರು ರಾಜೀನಾಮೆ ನೀಡಬೇಕು. ಸರ್ಕಾರದ ಲೋಪಗಳಿಂದಾಗಿ ಪ್ರಕರಣದ ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಅವರೆಲ್ಲರೂ ಈಗ ಜೈಲಿನ ಹೊರಗೆ ಮುಕ್ತ ಜೀವನ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಶಬರಿಮಲೆ ಆಚರಣೆಗಳ ಉಲ್ಲಂಘನೆಯನ್ನು ಸರ್ಕಾರ ಬೆಂಬಲಿಸುತ್ತಿದೆ. ಈ ನಿಲುವನ್ನು ಬೆಂಬಲಿಸದ ಕಾರಣ ಪ್ರಧಾನ ಅರ್ಚಕರನ್ನು 40 ದಿನಗಳವರೆಗೆ ಜೈಲಿನಲ್ಲಿರಿಸಲಾಯಿತು’ ಎಂದು ಆರೋಪಿಸಿದರು.</p>.<p>2018ರಲ್ಲಿ ಮಹಿಳೆಯರ ಪ್ರವೇಶ ವಿಷಯವನ್ನೂ ಬಾಬು ಉಲ್ಲೇಖಿಸಿದರು. ‘ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸರ್ಕಾರದ ಬೆಂಬಲದೊಂದಿಗೆ ಆಯೋಜಿಸಿದ್ದ ‘ಜಾಗತಿಕ ಅಯ್ಯಪ್ಪ ಸಂಗಮ’ ಕಾರ್ಯಕ್ರಮದಲ್ಲಿ ಅಕ್ರಮಗಳು ನಡೆದಿವೆ’ ಎಂದೂ ಆರೋಪಿಸಿದರು.</p>.<p>ಈ ವೇಳೆ, ಎಲ್ಡಿಎಫ್ ಮತ್ತು ಯುಡಿಎಫ್ ನಡುವೆ ತೀವ್ರ ವಾಗ್ವಾದ ನಡೆಯಿತು. ಯುಡಿಎಫ್ ಶಾಸಕರು ಫಲಕಗಳನ್ನು ಹಿಡಿದುಕೊಂಡು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ, ಕಲಾಪವನ್ನು ಬಹಿಷ್ಕರಿಸಿ ಸದನದಿಂದ ಹೊರನಡೆದರು. ಸಭಾಧ್ಯಕ್ಷ ಎ.ಎನ್. ಶಂಸೀರ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>