ವಯನಾಡ್ ಹಾಗೂ ಮೈಸೂರನ್ನು ಸಂಪರ್ಕಿಸುವರಾಷ್ಟ್ರೀಯ ಹೆದ್ದಾರಿ 766ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮೂಲಕ ಸಾಗುತ್ತಿದ್ದು, ಇದನ್ನು ಶಾಶ್ವತವಾಗಿ ಮುಚ್ಚಲು ಕರ್ನಾಟಕ ಹಾಗೂ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇಂಥ ನಿರ್ಧಾರ ಕೈಗೊಳ್ಳಬಾರದು ಎಂದು ಕೇರಳ ಒತ್ತಡ ಹೇರಲಿದೆ. ಪ್ರಸ್ತುತ ಇರುವಂಥ ನಿಯಮ
ವನ್ನು ಮುಂದುವರಿಸಿ, ರಾತ್ರಿ ವೇಳೆ ಎರಡೂ ರಾಜ್ಯದ ಸರ್ಕಾರಿ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ನಿಯೋಗವು ಮನವಿ ಸಲ್ಲಿಸುವ ಸಾಧ್ಯತೆ ಇದೆ.