<p><strong>ತಿರುವನಂತಪುರ</strong>: ವೈದ್ಯರು ಶಿಫಾರಸು ಮಾಡಿದರೆ ಮಾತ್ರ 12 ವರ್ಷದ ಒಳಗಿನ ಮಕ್ಕಳಿಗೆ ಔಷಧ ನೀಡಬೇಕು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಆದೇಶಿಸಿದೆ.</p><p>ಮಕ್ಕಳಲ್ಲಿ ಕೆಮ್ಮಿನ ಔಷಧಿಗಳ ಬಳಕೆಯ ಅಧ್ಯಯನ ಮಾಡಲು ಮೂವರು ತಜ್ಞರ ಸಮಿತಿ ರಚಿಸಿದ್ದು, ತುರ್ತು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆಯ ನಂತರ ಇಲ್ಲಿ ತಿಳಿಸಿದರು.</p><p>ರಾಜ್ಯ ಔಷಧ ನಿಯಂತ್ರಕ, ಮಕ್ಕಳ ಆರೋಗ್ಯ ನೋಡಲ್ ಅಧಿಕಾರಿ ಮತ್ತು ಭಾರತೀಯ ಮಕ್ಕಳ ತಜ್ಞರ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷರು ಸಮಿತಿಯ ಸದಸ್ಯರಾಗಿದ್ದಾರೆ.</p><p>ಈ ಸಮಿತಿ ನೀಡುವ ವರದಿಯು ಮಕ್ಕಳಲ್ಲಿ ಕೆಮ್ಮು ಸಿರಪ್ ಬಳಕೆಗೆ ಹೊಸ ಮಾರ್ಗಸೂಚಿ ರೂಪಿಸಲು ಸಹಾಯ ಮಾಡಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ವೈದ್ಯರು ಈ ಹಿಂದೆಯೇ ನೀಡಿದ್ದ ಔಷಧ ಸಲಹಾ ಚೀಟಿಗಳನ್ನು ಬಳಸಿಕೊಂಡು ಔಷಧಿಗಳನ್ನು ವಿತರಿಸಬಾರದು. ಈ ಕುರಿತಂತೆ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಲಾಗಿದೆ’ ಎಂದೂ ವೀಣಾ ಹೇಳಿದ್ದಾರೆ.</p><p>‘ಮಕ್ಕಳಿಗೆ ಔಷಧಿಗಳನ್ನು ಅವರ ದೇಹದ ತೂಕಕ್ಕೆ ಅನುಗುಣವಾಗಿ ಸೂಚಿಸಲಾಗುವುದರಿಂದ, ಒಂದು ಮಗುವಿಗೆ ನೀಡಲಾದ ಔಷಧಿಯನ್ನೇ ಮತ್ತೊಂದು ಮಗುವಿಗೂ ನೀಡಬಾರದು. ಹಾಗೆ ಮಾಡುವುದರಿಂದ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚು’ ಎಂದಿದ್ದಾರೆ.</p><p>ಕೆಮ್ಮಿನ ಸಿರಪ್ಗೆ ಸಂಬಂಧಿಸಿದಂತೆ ಕೇರಳದಲ್ಲಿ ಯಾವುದೇ ಸಮಸ್ಯೆಯ ವರದಿ ಆಗಿಲ್ಲ ಎಂದು ವೈದ್ಯರು ಸಭೆಗೆ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p><p>ಎಸ್ಆರ್–13 ಬ್ಯಾಚ್ನ ಕೋಲ್ಡ್ರಿಫ್ ಸಿರಪ್ ಸೇವಿಸಿದ ಕೆಲವು ಮಕ್ಕಳು ಬೇರೆ ರಾಜ್ಯಗಳಲ್ಲಿ ಮೃತಪಟ್ಟಿದ್ದರಿಂದ, ಡ್ರಗ್ಸ್ ನಿಯಂತ್ರಣ ಇಲಾಖೆಯು ರಾಜ್ಯದಲ್ಲಿ ಅದರ ಮಾರಾಟವನ್ನು ಸ್ಥಗಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವೈದ್ಯರು ಶಿಫಾರಸು ಮಾಡಿದರೆ ಮಾತ್ರ 12 ವರ್ಷದ ಒಳಗಿನ ಮಕ್ಕಳಿಗೆ ಔಷಧ ನೀಡಬೇಕು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಆದೇಶಿಸಿದೆ.</p><p>ಮಕ್ಕಳಲ್ಲಿ ಕೆಮ್ಮಿನ ಔಷಧಿಗಳ ಬಳಕೆಯ ಅಧ್ಯಯನ ಮಾಡಲು ಮೂವರು ತಜ್ಞರ ಸಮಿತಿ ರಚಿಸಿದ್ದು, ತುರ್ತು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆಯ ನಂತರ ಇಲ್ಲಿ ತಿಳಿಸಿದರು.</p><p>ರಾಜ್ಯ ಔಷಧ ನಿಯಂತ್ರಕ, ಮಕ್ಕಳ ಆರೋಗ್ಯ ನೋಡಲ್ ಅಧಿಕಾರಿ ಮತ್ತು ಭಾರತೀಯ ಮಕ್ಕಳ ತಜ್ಞರ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷರು ಸಮಿತಿಯ ಸದಸ್ಯರಾಗಿದ್ದಾರೆ.</p><p>ಈ ಸಮಿತಿ ನೀಡುವ ವರದಿಯು ಮಕ್ಕಳಲ್ಲಿ ಕೆಮ್ಮು ಸಿರಪ್ ಬಳಕೆಗೆ ಹೊಸ ಮಾರ್ಗಸೂಚಿ ರೂಪಿಸಲು ಸಹಾಯ ಮಾಡಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ವೈದ್ಯರು ಈ ಹಿಂದೆಯೇ ನೀಡಿದ್ದ ಔಷಧ ಸಲಹಾ ಚೀಟಿಗಳನ್ನು ಬಳಸಿಕೊಂಡು ಔಷಧಿಗಳನ್ನು ವಿತರಿಸಬಾರದು. ಈ ಕುರಿತಂತೆ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಲಾಗಿದೆ’ ಎಂದೂ ವೀಣಾ ಹೇಳಿದ್ದಾರೆ.</p><p>‘ಮಕ್ಕಳಿಗೆ ಔಷಧಿಗಳನ್ನು ಅವರ ದೇಹದ ತೂಕಕ್ಕೆ ಅನುಗುಣವಾಗಿ ಸೂಚಿಸಲಾಗುವುದರಿಂದ, ಒಂದು ಮಗುವಿಗೆ ನೀಡಲಾದ ಔಷಧಿಯನ್ನೇ ಮತ್ತೊಂದು ಮಗುವಿಗೂ ನೀಡಬಾರದು. ಹಾಗೆ ಮಾಡುವುದರಿಂದ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚು’ ಎಂದಿದ್ದಾರೆ.</p><p>ಕೆಮ್ಮಿನ ಸಿರಪ್ಗೆ ಸಂಬಂಧಿಸಿದಂತೆ ಕೇರಳದಲ್ಲಿ ಯಾವುದೇ ಸಮಸ್ಯೆಯ ವರದಿ ಆಗಿಲ್ಲ ಎಂದು ವೈದ್ಯರು ಸಭೆಗೆ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p><p>ಎಸ್ಆರ್–13 ಬ್ಯಾಚ್ನ ಕೋಲ್ಡ್ರಿಫ್ ಸಿರಪ್ ಸೇವಿಸಿದ ಕೆಲವು ಮಕ್ಕಳು ಬೇರೆ ರಾಜ್ಯಗಳಲ್ಲಿ ಮೃತಪಟ್ಟಿದ್ದರಿಂದ, ಡ್ರಗ್ಸ್ ನಿಯಂತ್ರಣ ಇಲಾಖೆಯು ರಾಜ್ಯದಲ್ಲಿ ಅದರ ಮಾರಾಟವನ್ನು ಸ್ಥಗಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>