<p><strong>ತಿರುವನಂತಪುರ</strong>: ವೈದ್ಯರ ಸಲಹಾ ಚೀಟಿ(ಪ್ರಿಸ್ಕ್ರಿಪ್ಷನ್) ಇಲ್ಲದೆ 12 ವರ್ಷದೊಳಗಿನ ಮಕ್ಕಳಿಗೆ ಯಾವುದೇ ಔಷಧಿಗಳನ್ನು ನೀಡಬಾರದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.</p><p>‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ವರದಿಯಾಗಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ.</p><p>ಇಂದು ವೈದ್ಯರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.</p><p>‘ಮಕ್ಕಳ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಅಧ್ಯಯನ ಮಾಡಲು ರಾಜ್ಯವು ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದ್ದು, ತಕ್ಷಣ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಔಷಧ ಚೀಟಿ ಇಲ್ಲದೇ 12 ವರ್ಷದೊಳಗಿನ ಮಕ್ಕಳಿಗೆ ಔಷಧಿ ನೀಡಬಾರದು. ಹಳೆಯ ಔಷಧಿ ಚೀಟಿ ನೀಡಿದರೂ ಔಷಧಿ ವಿತರಿಸುವಂತಿಲ್ಲ. ಈ ಬಗ್ಗೆ ಔಷಧ ನಿಯಂತ್ರಕರಿಗೆ ನಿರ್ದೇಶಗಳನ್ನು ನೀಡಲಾಗಿದೆ’ ಎಂದು ಹೇಳಿದ್ದಾರೆ.</p><p>‘ಮಕ್ಕಳಿಗೆ ಅವರ ದೇಹದ ತೂಕಕ್ಕೆ ಅನುಗುಣವಾಗಿ ಔಷಧಿಗಳನ್ನು ಶಿಫಾರಸು ಮಾಡುವುದರಿಂದ ಒಂದು ಮಗುವಿಗೆ ನೀಡಿದ ಔಷಧಿಯನ್ನು ಇನ್ನೊಂದು ಮಗುವಿಗೆ ನೀಡಬಾರದು. ಇದರಿಂದ ಅಪಾಯ ಹೆಚ್ಚು’ ಎಂದು ಅವರು ತಿಳಿಸಿದ್ದಾರೆ.</p><p>ಕೇರಳದಲ್ಲಿ ಮಕ್ಕಳ ಕೆಮ್ಮಿನ ಸಿರಪ್ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ವರದಿಯಾಗಿಲ್ಲ ಎಂದು ವೈದ್ಯರು ಸಭೆಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p><p>‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಧ್ಯಪ್ರದೇಶದಲ್ಲಿ 14 ಮತ್ತು ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಮೂತ್ರಪಿಂಡದ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಔಷಧದ ಮಾದರಿಯಲ್ಲಿ ವಿಷಯಕಾರಿ ಅಂಶ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ಕೋಲ್ಡ್ರಿಫ್ ಸಿರಪ್ ಮಾರಾಟ ನಿಷೇಧಿಸಿರುವ ಮಧ್ಯಪ್ರದೇಶ ಸರ್ಕಾರ, ಹೆಚ್ಚಿನ ತನಿಖೆಗೆ ಎಸ್ಐಟಿ ತಂಡ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವೈದ್ಯರ ಸಲಹಾ ಚೀಟಿ(ಪ್ರಿಸ್ಕ್ರಿಪ್ಷನ್) ಇಲ್ಲದೆ 12 ವರ್ಷದೊಳಗಿನ ಮಕ್ಕಳಿಗೆ ಯಾವುದೇ ಔಷಧಿಗಳನ್ನು ನೀಡಬಾರದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.</p><p>‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ವರದಿಯಾಗಿದೆ. ಇದರ ಬೆನ್ನಲ್ಲೇ ಕೇರಳ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ.</p><p>ಇಂದು ವೈದ್ಯರು, ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.</p><p>‘ಮಕ್ಕಳ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಅಧ್ಯಯನ ಮಾಡಲು ರಾಜ್ಯವು ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದ್ದು, ತಕ್ಷಣ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಔಷಧ ಚೀಟಿ ಇಲ್ಲದೇ 12 ವರ್ಷದೊಳಗಿನ ಮಕ್ಕಳಿಗೆ ಔಷಧಿ ನೀಡಬಾರದು. ಹಳೆಯ ಔಷಧಿ ಚೀಟಿ ನೀಡಿದರೂ ಔಷಧಿ ವಿತರಿಸುವಂತಿಲ್ಲ. ಈ ಬಗ್ಗೆ ಔಷಧ ನಿಯಂತ್ರಕರಿಗೆ ನಿರ್ದೇಶಗಳನ್ನು ನೀಡಲಾಗಿದೆ’ ಎಂದು ಹೇಳಿದ್ದಾರೆ.</p><p>‘ಮಕ್ಕಳಿಗೆ ಅವರ ದೇಹದ ತೂಕಕ್ಕೆ ಅನುಗುಣವಾಗಿ ಔಷಧಿಗಳನ್ನು ಶಿಫಾರಸು ಮಾಡುವುದರಿಂದ ಒಂದು ಮಗುವಿಗೆ ನೀಡಿದ ಔಷಧಿಯನ್ನು ಇನ್ನೊಂದು ಮಗುವಿಗೆ ನೀಡಬಾರದು. ಇದರಿಂದ ಅಪಾಯ ಹೆಚ್ಚು’ ಎಂದು ಅವರು ತಿಳಿಸಿದ್ದಾರೆ.</p><p>ಕೇರಳದಲ್ಲಿ ಮಕ್ಕಳ ಕೆಮ್ಮಿನ ಸಿರಪ್ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ವರದಿಯಾಗಿಲ್ಲ ಎಂದು ವೈದ್ಯರು ಸಭೆಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p><p>‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಧ್ಯಪ್ರದೇಶದಲ್ಲಿ 14 ಮತ್ತು ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಮೂತ್ರಪಿಂಡದ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಔಷಧದ ಮಾದರಿಯಲ್ಲಿ ವಿಷಯಕಾರಿ ಅಂಶ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ಕೋಲ್ಡ್ರಿಫ್ ಸಿರಪ್ ಮಾರಾಟ ನಿಷೇಧಿಸಿರುವ ಮಧ್ಯಪ್ರದೇಶ ಸರ್ಕಾರ, ಹೆಚ್ಚಿನ ತನಿಖೆಗೆ ಎಸ್ಐಟಿ ತಂಡ ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>