ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣ ಮರೆಮಾಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೀಳುಮಟ್ಟದ ಕೋಮು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇರಳ ಬಿಜೆಪಿ ಆರೋಪಿಸಿದೆ.
‘ಪವಿತ್ರ ಕುರಾನ್ ಮತ್ತು ಅಲ್ಪಸಂಖ್ಯಾತರ ಭಾವನೆಗಳು ಕೇರಳದ ಪ್ರಮುಖ ಗಮನಹರಿಸಬೇಕಾದ ವಿಷಯಗಳು ಎಂದು ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ. ಅವರು ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಪವಿತ್ರ ಕುರಾನ್ನಿಂದ ಮುಚ್ಚಲು ಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿಯ ಕೇರಳದ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.
ಎರ್ನಾಕುಲಂನಲ್ಲಿ ಮೂವರು ಅಲ್ ಖೈದಾ ಉಗ್ರರ ಬಂಧನ ವಿಚಾರ ಪ್ರಸ್ತಾಪಿಸಿದ ಅವರು, ರಾಜ್ಯವು ಭಯೋತ್ಪಾದಕರಿಗೆ ಸ್ವರ್ಗವಾಗಿ ಪರಿಣಮಿಸಿರುವುದು ಇದರಿಂದ ತಿಳಿದುಬರುತ್ತದೆ ಎಂದು ಹೇಳಿದ್ದಾರೆ.
CM Pinarayi Vijayan is playing a very dirty communal politics in the gold smuggling case. He said y'day that Holy Quran & sentiments of minority (Muslims) are the main issues in Kerala. He is trying to cover up the smuggling case with Holy Quran: K Surendran, Kerala BJP president pic.twitter.com/nzgfHh2Fbo