ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಸ್ಮಗ್ಲಿಂಗ್ – ಕೇರಳ ಸಿಎಂ ಪಿಣರಾಯಿ ವಿಜಯನ್‌ರಿಂದ ಕೋಮು ರಾಜಕಾರಣ: ಬಿಜೆಪಿ

Last Updated 20 ಸೆಪ್ಟೆಂಬರ್ 2020, 7:45 IST
ಅಕ್ಷರ ಗಾತ್ರ

ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣ ಮರೆಮಾಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೀಳುಮಟ್ಟದ ಕೋಮು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇರಳ ಬಿಜೆಪಿ ಆರೋಪಿಸಿದೆ.

‘ಪವಿತ್ರ ಕುರಾನ್ ಮತ್ತು ಅಲ್ಪಸಂಖ್ಯಾತರ ಭಾವನೆಗಳು ಕೇರಳದ ಪ್ರಮುಖ ಗಮನಹರಿಸಬೇಕಾದ ವಿಷಯಗಳು ಎಂದು ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ. ಅವರು ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಪವಿತ್ರ ಕುರಾನ್‌ನಿಂದ ಮುಚ್ಚಲು ಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿಯ ಕೇರಳದ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ಎರ್ನಾಕುಲಂನಲ್ಲಿ ಮೂವರು ಅಲ್‌ ಖೈದಾ ಉಗ್ರರ ಬಂಧನ ವಿಚಾರ ಪ್ರಸ್ತಾಪಿಸಿದ ಅವರು, ರಾಜ್ಯವು ಭಯೋತ್ಪಾದಕರಿಗೆ ಸ್ವರ್ಗವಾಗಿ ಪರಿಣಮಿಸಿರುವುದು ಇದರಿಂದ ತಿಳಿದುಬರುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT