ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು, ‘ಪಾಲಕ್ಕಾಡ್ ಕೊಲೆಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಲಕ್ಕಾಡಿನಲ್ಲಿ ಮೇಲಿಂದ ಮೇಲೆ ಕೋಮು ದಳ್ಳುರಿಯ ಕೊಲೆಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ರಾಜ್ಯ ಹೊತ್ತಿ ಉರಿಯುತ್ತಿದ್ದರೂ ಮುಖ್ಯಮಂತ್ರಿ ತಮ್ಮ ಸರ್ಕಾರದ ಒಂದನೇ ವರ್ಷಾಚರಣೆ ಸಂಭ್ರಮದಲ್ಲಿದ್ದಾರೆ. ತಿರುವನಂತಪುರದಿಂದ ಕಾಸರಗೋಡುವರೆಗೆ ಗೂಂಡಾಗಳ ಸಾಮ್ರಾಜ್ಯ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.