<p><strong>ತಿರುವನಂತಪುರ</strong>: ಕೇಂದ್ರ ಬಜೆಟ್ನಲ್ಲಿ ಕೇರಳ ರಾಜ್ಯವನ್ನು ನಿರ್ಲಕ್ಷಿಸಿರುವ ಕ್ರಮವನ್ನು ಖಂಡಿಸಿ ಫೆಬ್ರುವರಿ 3ರಂದು ‘ಕಪ್ಪು ದಿನ’ವನ್ನು ಆಚರಿಸಲಾಗುವುದು ಎಂದು ಆಡಳಿತಾರೂಢ ಸಿಪಿಎಂ ಸೋಮವಾರ ತಿಳಿಸಿದೆ.</p>.<p>‘ಬಜೆಟ್ಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 29 ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಆದರೆ, ಅವುಗಳಲ್ಲಿ ಯಾವುದನ್ನೂ ಸ್ವೀಕರಿಸಿಲ್ಲ. ಭಾರತದ ಭೂಪಟದಲ್ಲಿ ಕೇರಳ ಅಸ್ತಿತ್ವದಲ್ಲಿಲ್ಲ ಎಂಬಂತೆ ಬಜೆಟ್ ಮಂಡಿಸಲಾಗಿದೆ’ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>‘ಏಮ್ಸ್ ಬೇಡಿಕೆಯನ್ನು ಕೇಂದ್ರ ಮತ್ತೊಮ್ಮೆ ನಿರ್ಲಕ್ಷಿಸಿದೆ. ಏಳು ಹೈಸ್ಪೀಡ್ ರೈಲು ಕಾರಿಡಾರ್, ಒಳನಾಡು ಜಲ ಸಾರಿಗೆ ಯೋಜನೆಗಳಿಂದಲೂ ರಾಜ್ಯವನ್ನು ಹೊರಗಿಡಲಾಗಿದೆ. ವಿಝಿಂಜಂ ಬಂದರಿಗೆ ಯಾವುದೇ ವಿಶೇಷ ಪ್ಯಾಕೇಜ್ಗೆ ಅನುಮೋದನೆ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p>.<p>‘ಫೆಬ್ರುವರಿ 3ರಂದು ಎಲ್ಲ ಬೂತ್ಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಲಾಗುವುದು. ಜನವಿರೋಧಿ ಬಜೆಟ್ ವಿರುದ್ಧ ನಡೆಯುವ ಪ್ರತಿಭಟನೆಗಳಲ್ಲಿ ಸಾರ್ವಜನಿಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇಂದ್ರ ಬಜೆಟ್ನಲ್ಲಿ ಕೇರಳ ರಾಜ್ಯವನ್ನು ನಿರ್ಲಕ್ಷಿಸಿರುವ ಕ್ರಮವನ್ನು ಖಂಡಿಸಿ ಫೆಬ್ರುವರಿ 3ರಂದು ‘ಕಪ್ಪು ದಿನ’ವನ್ನು ಆಚರಿಸಲಾಗುವುದು ಎಂದು ಆಡಳಿತಾರೂಢ ಸಿಪಿಎಂ ಸೋಮವಾರ ತಿಳಿಸಿದೆ.</p>.<p>‘ಬಜೆಟ್ಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ 29 ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಆದರೆ, ಅವುಗಳಲ್ಲಿ ಯಾವುದನ್ನೂ ಸ್ವೀಕರಿಸಿಲ್ಲ. ಭಾರತದ ಭೂಪಟದಲ್ಲಿ ಕೇರಳ ಅಸ್ತಿತ್ವದಲ್ಲಿಲ್ಲ ಎಂಬಂತೆ ಬಜೆಟ್ ಮಂಡಿಸಲಾಗಿದೆ’ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>‘ಏಮ್ಸ್ ಬೇಡಿಕೆಯನ್ನು ಕೇಂದ್ರ ಮತ್ತೊಮ್ಮೆ ನಿರ್ಲಕ್ಷಿಸಿದೆ. ಏಳು ಹೈಸ್ಪೀಡ್ ರೈಲು ಕಾರಿಡಾರ್, ಒಳನಾಡು ಜಲ ಸಾರಿಗೆ ಯೋಜನೆಗಳಿಂದಲೂ ರಾಜ್ಯವನ್ನು ಹೊರಗಿಡಲಾಗಿದೆ. ವಿಝಿಂಜಂ ಬಂದರಿಗೆ ಯಾವುದೇ ವಿಶೇಷ ಪ್ಯಾಕೇಜ್ಗೆ ಅನುಮೋದನೆ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p>.<p>‘ಫೆಬ್ರುವರಿ 3ರಂದು ಎಲ್ಲ ಬೂತ್ಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಲಾಗುವುದು. ಜನವಿರೋಧಿ ಬಜೆಟ್ ವಿರುದ್ಧ ನಡೆಯುವ ಪ್ರತಿಭಟನೆಗಳಲ್ಲಿ ಸಾರ್ವಜನಿಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>