<p><strong>ತಿರುವನಂತಪುರಂ</strong>: ಕೇರಳ ಸರ್ಕಾರವು 2024-25ನೇ ಸಾಲಿನ ಬಜೆಟ್ ಅನ್ನು ಇಂದು (ಸೋಮವಾರ) ಮಂಡಿಸಿದೆ. ಬಜೆಟ್ನಲ್ಲಿ ಘೋಷಣೆಗಳು ಮಾಡಿರುವ ಅಂಶಗಳು ವಾಸ್ತವಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಟೀಕಿಸಿದೆ. </p><p>ಹಣಕಾಸು ಸಚಿವ ಕೆ. ಎನ್. ಬಾಲಗೋಪಾಲ್ ಅವರು ಬಜೆಟ್ ಮಂಡಿಸಿದರು. </p><p>ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ. ಡಿ. ಸತೀಶನ್ ಅವರು 2023-24ನೇ ಹಣಕಾಸು ವರ್ಷದಲ್ಲಿ ಯೋಜಿತ ವೆಚ್ಚದ ಶೇ.55ರಷ್ಟು ಮಾತ್ರ ಸರ್ಕಾರ ಖರ್ಚು ಮಾಡಿದ್ದು, ಇನ್ನೆರಡು ತಿಂಗಳಲ್ಲಿ ಮುಗಿಯಲಿರುವ ಬಜೆಟ್ ವರ್ಷದಲ್ಲಿ ಸಾರ್ವಜನಿಕರಿಗೆ ಹೇಗೆ ಭರವಸೆಯ ಘೋಷಣೆಗಳನ್ನು ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.</p><p>ಬಜೆಟ್ನಲ್ಲಿ ರಬ್ಬರ್ ಬೆಂಬಲ ಬೆಲೆಯನ್ನು ₹170 ರಿಂದ ₹180 ರೂಪಾಯಿಗೆ ಏರಿಸಲಾಗಿದೆ. ಕೇವಲ ₹10 ರೂಪಾಯಿ ಹೆಚ್ಚಳ ಮಾಡಿರುವುದು ರಬ್ಬರ್ ಬೆಳೆಗಾರರನ್ನು ಅವಮಾನಿಸಿದಂತಾಗಿದೆ ಎಂದು ಸತೀಶನ್ ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಕೇರಳ ಸರ್ಕಾರವು 2024-25ನೇ ಸಾಲಿನ ಬಜೆಟ್ ಅನ್ನು ಇಂದು (ಸೋಮವಾರ) ಮಂಡಿಸಿದೆ. ಬಜೆಟ್ನಲ್ಲಿ ಘೋಷಣೆಗಳು ಮಾಡಿರುವ ಅಂಶಗಳು ವಾಸ್ತವಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಟೀಕಿಸಿದೆ. </p><p>ಹಣಕಾಸು ಸಚಿವ ಕೆ. ಎನ್. ಬಾಲಗೋಪಾಲ್ ಅವರು ಬಜೆಟ್ ಮಂಡಿಸಿದರು. </p><p>ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ. ಡಿ. ಸತೀಶನ್ ಅವರು 2023-24ನೇ ಹಣಕಾಸು ವರ್ಷದಲ್ಲಿ ಯೋಜಿತ ವೆಚ್ಚದ ಶೇ.55ರಷ್ಟು ಮಾತ್ರ ಸರ್ಕಾರ ಖರ್ಚು ಮಾಡಿದ್ದು, ಇನ್ನೆರಡು ತಿಂಗಳಲ್ಲಿ ಮುಗಿಯಲಿರುವ ಬಜೆಟ್ ವರ್ಷದಲ್ಲಿ ಸಾರ್ವಜನಿಕರಿಗೆ ಹೇಗೆ ಭರವಸೆಯ ಘೋಷಣೆಗಳನ್ನು ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.</p><p>ಬಜೆಟ್ನಲ್ಲಿ ರಬ್ಬರ್ ಬೆಂಬಲ ಬೆಲೆಯನ್ನು ₹170 ರಿಂದ ₹180 ರೂಪಾಯಿಗೆ ಏರಿಸಲಾಗಿದೆ. ಕೇವಲ ₹10 ರೂಪಾಯಿ ಹೆಚ್ಚಳ ಮಾಡಿರುವುದು ರಬ್ಬರ್ ಬೆಳೆಗಾರರನ್ನು ಅವಮಾನಿಸಿದಂತಾಗಿದೆ ಎಂದು ಸತೀಶನ್ ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>