<p><strong>ತಿರುವನಂತಪುರ:</strong> ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಕಟ್ಟಡ ಕುಸಿದು ಮೃತಪಟ್ಟಿದ್ದ ಮಹಿಳೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಮೃತ ಮಹಿಳೆಯ ಮಗನಿಗೆ ಸೂಕ್ತ ಕೆಲಸ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ಶಿಫಾರಸು ಮಾಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವ ಬಗ್ಗೆ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. </p><p>ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜಿನ ಶೌಚಾಲಯ ಸಂಕೀರ್ಣ ಜುಲೈ 3ರಂದು ಕುಸಿದು ಬಿದ್ದು, ಬಿಂದು (52) ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಬಾಲಕಿ ಸೇರಿ ಮೂವರು ಗಾಯಗೊಂಡಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶಸ್ತ್ರಚಿಕಿತ್ಸಾ ಬ್ಲಾಕ್ಗೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿದ್ದಾಗಲೇ ಈ ದುರಂತ ಸಂಭವಿಸಿತ್ತು.</p><p>ಮಹಿಳೆ ಮೃತಪಟ್ಟ ಘಟನೆಯ ಹೊಣೆ ಹೊತ್ತು, ಆರೋಗ್ಯ ಸಚಿವೆ ವೀಣಾ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನೇೃತ್ವದ ಯುಡಿಎಫ್ನ ಮಿತ್ರ ಪಕ್ಷಗಳು ಮತ್ತು ಬಿಜೆಪಿಯ ವಿವಿಧ ವಿಭಾಗಗಳಿಂದ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಕಟ್ಟಡ ಕುಸಿದು ಮೃತಪಟ್ಟಿದ್ದ ಮಹಿಳೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಮೃತ ಮಹಿಳೆಯ ಮಗನಿಗೆ ಸೂಕ್ತ ಕೆಲಸ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ಶಿಫಾರಸು ಮಾಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.</p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವ ಬಗ್ಗೆ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. </p><p>ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜಿನ ಶೌಚಾಲಯ ಸಂಕೀರ್ಣ ಜುಲೈ 3ರಂದು ಕುಸಿದು ಬಿದ್ದು, ಬಿಂದು (52) ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಬಾಲಕಿ ಸೇರಿ ಮೂವರು ಗಾಯಗೊಂಡಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶಸ್ತ್ರಚಿಕಿತ್ಸಾ ಬ್ಲಾಕ್ಗೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿದ್ದಾಗಲೇ ಈ ದುರಂತ ಸಂಭವಿಸಿತ್ತು.</p><p>ಮಹಿಳೆ ಮೃತಪಟ್ಟ ಘಟನೆಯ ಹೊಣೆ ಹೊತ್ತು, ಆರೋಗ್ಯ ಸಚಿವೆ ವೀಣಾ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನೇೃತ್ವದ ಯುಡಿಎಫ್ನ ಮಿತ್ರ ಪಕ್ಷಗಳು ಮತ್ತು ಬಿಜೆಪಿಯ ವಿವಿಧ ವಿಭಾಗಗಳಿಂದ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>