<p><strong>ತಿರುವನಂತಪುರ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರ ₹50,000 ಪರಿಹಾರ ನೀಡಿದ್ದು, ಹೆಚ್ಚಿನ ಸಹಾಯದ ಭರವಸೆ ನೀಡಿದೆ.</p><p>ಸಚಿವ ವಿ.ಎನ್. ವಾಸವನ್ ಕುಟುಂಬವನ್ನು ಭೇಟಿ ಮಾಡಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಬೇಡಿಕೆಗಳ ಕುರಿತು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.</p>.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ . <p>ಮೃತಪಟ್ಟ ಮಹಿಳೆಯ (ಬಿಂದು) ಮಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಮತ್ತು ಚಿಕಿತ್ಸಾ ವೆಚ್ಚವನ್ನು ಕಾಲೇಜು ಭರಿಸಲಿದೆ. ಬಿಂದು ಅವರ ಮಗನಿಗೆ ಶೀಘ್ರದಲ್ಲೇ ತಾತ್ಕಾಲಿಕ ಉದ್ಯೋಗ ನೀಡಲಾಗುವುದು. ಶಾಶ್ವತ ಉದ್ಯೋಗದ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಾಸವನ್ ತಿಳಿಸಿದ್ದರು .</p><p>ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬಿಂದು ಅವರ ಕುಟುಂಬ ಸದಸ್ಯರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ವರದಿಯಾಗಿದೆ.</p><p>ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿತ್ತು. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.</p>.ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ: ಮಹಿಳೆ ಸಾವು.ಸೊನ್ನೆ ಸುತ್ತಿದ 6 ಬ್ಯಾಟರ್ಗಳು: ಭಾರತದ ಎದುರು ಅನಗತ್ಯ ದಾಖಲೆ ಬರೆದ ಇಂಗ್ಲೆಂಡ್. <p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂದು (52) ಎಂದು ಗುರುತಿಸಲಾಗಿತ್ತು. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p>.ವೈದ್ಯಕೀಯ ತಪಾಸಣೆ: ಅಮೆರಿಕಕ್ಕೆ ತೆರಳಿದ ಕೇರಳ ಸಿಎಂ ಪಿಣರಾಯಿ ವಿಜಯನ್.ಬೆನ್ ಸ್ಟೋಕ್ಸ್ 'ಗೋಲ್ಡನ್ ಡಕ್': ದ್ರಾವಿಡ್ ಹೆಸರಲ್ಲೇ ಉಳಿಯಿತು ಅಪರೂಪದ ದಾಖಲೆ.ಮದರಸಾದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಾಯ; ಧರ್ಮಗುರು ಬಂಧನ.8 ಬಾರಿ ನಿರಂತರವಾಗಿ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆ: ದಾಖಲೆ ನಿರ್ಮಿಸಿದ ಹೊರಟ್ಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರ ₹50,000 ಪರಿಹಾರ ನೀಡಿದ್ದು, ಹೆಚ್ಚಿನ ಸಹಾಯದ ಭರವಸೆ ನೀಡಿದೆ.</p><p>ಸಚಿವ ವಿ.ಎನ್. ವಾಸವನ್ ಕುಟುಂಬವನ್ನು ಭೇಟಿ ಮಾಡಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಬೇಡಿಕೆಗಳ ಕುರಿತು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.</p>.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ . <p>ಮೃತಪಟ್ಟ ಮಹಿಳೆಯ (ಬಿಂದು) ಮಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಮತ್ತು ಚಿಕಿತ್ಸಾ ವೆಚ್ಚವನ್ನು ಕಾಲೇಜು ಭರಿಸಲಿದೆ. ಬಿಂದು ಅವರ ಮಗನಿಗೆ ಶೀಘ್ರದಲ್ಲೇ ತಾತ್ಕಾಲಿಕ ಉದ್ಯೋಗ ನೀಡಲಾಗುವುದು. ಶಾಶ್ವತ ಉದ್ಯೋಗದ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಾಸವನ್ ತಿಳಿಸಿದ್ದರು .</p><p>ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬಿಂದು ಅವರ ಕುಟುಂಬ ಸದಸ್ಯರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ವರದಿಯಾಗಿದೆ.</p><p>ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿತ್ತು. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.</p>.ಕೇರಳದ ಕೊಟ್ಟಾಯಂ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕುಸಿತ: ಮಹಿಳೆ ಸಾವು.ಸೊನ್ನೆ ಸುತ್ತಿದ 6 ಬ್ಯಾಟರ್ಗಳು: ಭಾರತದ ಎದುರು ಅನಗತ್ಯ ದಾಖಲೆ ಬರೆದ ಇಂಗ್ಲೆಂಡ್. <p>ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂದು (52) ಎಂದು ಗುರುತಿಸಲಾಗಿತ್ತು. ಅಲೀನಾ (11), ಅಮಲ್ ಪ್ರದೀಪ್ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಟ್ಟಡ (ವಾರ್ಡುಗಳಿಗೆ ಹೊಂದಿಕೊಂಡಿದ್ದ ಟಾಯ್ಲೆಟ್ ಕಾಂಪ್ಲೆಕ್ಸ್) ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ತಿಳಿಸಿದ್ದಾರೆ.</p>.ವೈದ್ಯಕೀಯ ತಪಾಸಣೆ: ಅಮೆರಿಕಕ್ಕೆ ತೆರಳಿದ ಕೇರಳ ಸಿಎಂ ಪಿಣರಾಯಿ ವಿಜಯನ್.ಬೆನ್ ಸ್ಟೋಕ್ಸ್ 'ಗೋಲ್ಡನ್ ಡಕ್': ದ್ರಾವಿಡ್ ಹೆಸರಲ್ಲೇ ಉಳಿಯಿತು ಅಪರೂಪದ ದಾಖಲೆ.ಮದರಸಾದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಾಯ; ಧರ್ಮಗುರು ಬಂಧನ.8 ಬಾರಿ ನಿರಂತರವಾಗಿ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆ: ದಾಖಲೆ ನಿರ್ಮಿಸಿದ ಹೊರಟ್ಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>