<p><strong>ಮಲ್ಲಪುರಂ (ಕೇರಳ):</strong> ಕೇರಳದ ನಿಲಾಂಬುರ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.</p><p>ಕಾಂಗ್ರೆಸ್ನ ಆರ್ಯಧನ ಶೌಕಾತ್ ಅವರು ಸಮೀಪದ ಪ್ರತಿಸ್ಪರ್ಧಿ ಆಡಳಿತಾರೂಢ ಸಿಪಿಐ (ಎಂ) ಪಕ್ಷದ ಎಂ.ಸ್ವರಾಜ್ ಅವರ ಎದುರು 11 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p><p>ಎಲ್ಡಿಎಫ್ ಬೆಂಬಲಿತ ಪಕ್ಷೇತರ ಶಾಸಕ, ಪಿ.ವಿ. ಅನ್ವರ್ ರಾಜೀನಾಮೆ ನೀಡಿದ್ದ ಕಾರಣ ನಿಲಾಂಬುರ್ ಕ್ಷೇತ್ರ ತೆರವಾಗಿತ್ತು,</p><p>ಎಲ್ಡಿಎಫ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. ಈ ಹಿಂದೆ ಪುತ್ತುಪ್ಪಲ್ಲಿ , ಪಾಲಕ್ಕಾಡ್ ಮತ್ತು ತ್ರಿಕ್ಕಾಕಾರ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆ ವೇಳೆ ಸೋಲುಂಡಿತ್ತು.</p><p>ಜೂನ್ 19 ರಂದು ನಡೆದ ಚುನಾವಣೆಯಲ್ಲಿ ಶೌಕಾತ್ 1,75,989 ಮತಗಳನ್ನು ಪಡೆದಿದ್ದು, ಒಟ್ಟು ಮತಗಳ ಶೇ 44.17 ಆಗಿದೆ. ಪ್ರತಿಸ್ಪರ್ಧಿ ಸ್ವರಾಜ್ 66,660 ಮತಗಳನ್ನು ಪಡೆದಿದ್ದು, ಒಟ್ಟು ಮತಗಳ ಶೇ 37.88 ಆಗಿದೆ.</p><p>ಅಚ್ಚರಿ ವಿಚಾರವೆಂದರೆ, ಈ ಹಿಂದೆ ರಾಜೀನಾಮೆ ನೀಡಿ ಈಗ ತೃಣಮೂಲ ಕಾಂಗ್ರೆಸ್ನ ರಾಜ್ಯ ಸಂಚಾಲಕರಾಗಿರುವ ಅನ್ವರ್ ಅವರು ಸ್ವತಂತ್ರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಮತ್ತು ಎಲ್ಡಿಎಫ್ಗೆ ಪ್ರಬಲ ಪೈಪೋಟಿ ನೀಡಿ, ಶೇ 11.23 ಅಂದರೆ 19,760 ಮತಗಳನ್ನು ಪಡೆದಿದ್ದಾರೆ.</p>.ಕಾಂಗ್ರೆಸ್ನ ಕೆಲ ನಾಯಕರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದೆ: MP ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲ್ಲಪುರಂ (ಕೇರಳ):</strong> ಕೇರಳದ ನಿಲಾಂಬುರ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.</p><p>ಕಾಂಗ್ರೆಸ್ನ ಆರ್ಯಧನ ಶೌಕಾತ್ ಅವರು ಸಮೀಪದ ಪ್ರತಿಸ್ಪರ್ಧಿ ಆಡಳಿತಾರೂಢ ಸಿಪಿಐ (ಎಂ) ಪಕ್ಷದ ಎಂ.ಸ್ವರಾಜ್ ಅವರ ಎದುರು 11 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p><p>ಎಲ್ಡಿಎಫ್ ಬೆಂಬಲಿತ ಪಕ್ಷೇತರ ಶಾಸಕ, ಪಿ.ವಿ. ಅನ್ವರ್ ರಾಜೀನಾಮೆ ನೀಡಿದ್ದ ಕಾರಣ ನಿಲಾಂಬುರ್ ಕ್ಷೇತ್ರ ತೆರವಾಗಿತ್ತು,</p><p>ಎಲ್ಡಿಎಫ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. ಈ ಹಿಂದೆ ಪುತ್ತುಪ್ಪಲ್ಲಿ , ಪಾಲಕ್ಕಾಡ್ ಮತ್ತು ತ್ರಿಕ್ಕಾಕಾರ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆ ವೇಳೆ ಸೋಲುಂಡಿತ್ತು.</p><p>ಜೂನ್ 19 ರಂದು ನಡೆದ ಚುನಾವಣೆಯಲ್ಲಿ ಶೌಕಾತ್ 1,75,989 ಮತಗಳನ್ನು ಪಡೆದಿದ್ದು, ಒಟ್ಟು ಮತಗಳ ಶೇ 44.17 ಆಗಿದೆ. ಪ್ರತಿಸ್ಪರ್ಧಿ ಸ್ವರಾಜ್ 66,660 ಮತಗಳನ್ನು ಪಡೆದಿದ್ದು, ಒಟ್ಟು ಮತಗಳ ಶೇ 37.88 ಆಗಿದೆ.</p><p>ಅಚ್ಚರಿ ವಿಚಾರವೆಂದರೆ, ಈ ಹಿಂದೆ ರಾಜೀನಾಮೆ ನೀಡಿ ಈಗ ತೃಣಮೂಲ ಕಾಂಗ್ರೆಸ್ನ ರಾಜ್ಯ ಸಂಚಾಲಕರಾಗಿರುವ ಅನ್ವರ್ ಅವರು ಸ್ವತಂತ್ರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಮತ್ತು ಎಲ್ಡಿಎಫ್ಗೆ ಪ್ರಬಲ ಪೈಪೋಟಿ ನೀಡಿ, ಶೇ 11.23 ಅಂದರೆ 19,760 ಮತಗಳನ್ನು ಪಡೆದಿದ್ದಾರೆ.</p>.ಕಾಂಗ್ರೆಸ್ನ ಕೆಲ ನಾಯಕರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದೆ: MP ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>