<p><strong>ತಿರುವನಂತಪುರ</strong>: ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ ಸತೀಶನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಸತತ ಮನವೊಲಿಕೆ ನಂತರ, ಗೃಹ ಸಚಿವರಾಗಿ ಸಂಪುಟ ಸೇರಲು ರಮೇಶ್ ಚೆನ್ನಿತ್ತಲ ಒಪ್ಪಿಕೊಂಡಿದ್ದಾರೆ.</p>.<p>ರಮೇಶ್ ಚೆನ್ನಿತ್ತಲ ಅವರು ಈ ಬಾರಿ ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿತು.</p>.<p>2011ರಲ್ಲೂ ಚೆನ್ನಿತ್ತಲ ಅವರಿಗೆ ಅವಕಾಶ ಕೈತಪ್ಪಿತ್ತು. ಈ ಬಾರಿಯೂ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಮುನಿಸಿಕೊಂಡ ಚೆನ್ನಿತ್ತಲ, ಯುಡಿಎಫ್ ಸಭೆಯಿಂದ ದೂರ ಉಳಿದಿದ್ದರು. ಈಗ ಮನವೊಲಿಕೆ ನಂತರ ಸಂಪುಟ ಸೇರಲು ಅವರು ಒಪ್ಪಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಕೂಡ ಸತೀಶನ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.</p>.<p>‘ರಾಜಕೀಯದಲ್ಲಿ ಅವಕಾಶಗಳು ವಿಭಿನ್ನ ರೂಪಗಳಲ್ಲಿ ಬರುತ್ತವೆ. ವೇಣುಗೋಪಾಲ್ ಅವರು ಎಐಸಿಸಿಯಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಕೇರಳಂನ ಯುಡಿಎಫ್ ಸರ್ಕಾರಕ್ಕೆ ಅವರ ಬೆಂಬಲ ಅತ್ಯಗತ್ಯ’ ಎಂದು ವಿ.ಡಿ ಸತೀಶನ್ ಹೇಳಿದ್ದಾರೆ.</p>.<p>ಚೆನ್ನಿತ್ತಲ ಅವರೊಂದಿಗೆ ಅವರ ಕೆಲವು ನಿಷ್ಠಾವಂತರು ಸಹ ಸಂಪುಟ ಸೇರುವ ಸಾಧ್ಯತೆ ಇದೆ.</p>.<p>ಉಮ್ಮನ್ ಚಾಂಡಿ ನೇತೃತ್ವದ ಯುಡಿಎಫ್ ಸರ್ಕಾರದಲ್ಲಿ 2014ರಿಂದ 2016ರವರೆಗೆ ಚೆನ್ನಿತ್ತಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>‘ಎಲ್ಲ ಸಚಿವ ಸ್ಥಾನಗಳನ್ನು ಭಾನುವಾರದೊಳಗೆ ನಿರ್ಧರಿಸಲಾಗುತ್ತದೆ. ಇಡೀ ಸಚಿವ ಸಂಪುಟದ ಪ್ರಮಾಣ ವಚನ ಸೋಮವಾರ ನಡೆಯಲಿದೆ’ ಎಂದು ಸತೀಶನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಚಿವ ಸಂಪುಟದ ಮೊದಲ ಸಭೆಯಲ್ಲಿ, ಕಾಂಗ್ರೆಸ್ನ ಚುನಾವಣಾ ಭರವಸೆಯಾದ ‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ’ದ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.</p>.<p><strong>‘ತೃಪ್ತಿದಾಯಕ ಮಾತುಕತೆ’</strong></p><p>‘ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ, ಖಾತೆ ಹಂಚಿಕೆ ಬಗ್ಗೆ ಮಾತುಕತೆ ತೃಪ್ತಿದಾಯಕವಾಗಿ ಮುಂದುವರಿದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಸಣ್ಣಿ ಜೋಸೆಫ್ ಶನಿವಾರ ಹೇಳಿದ್ದಾರೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾದ ಬಳಿಕ ಜೋಸೆಫ್ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಯುಡಿಎಫ್ ಮಿತ್ರ ಪಕ್ಷಗಳಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಬಗ್ಗೆ ಮಾತುಕತೆ ಸರಾಗವಾಗಿ ನಡೆದಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ ಸತೀಶನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಸತತ ಮನವೊಲಿಕೆ ನಂತರ, ಗೃಹ ಸಚಿವರಾಗಿ ಸಂಪುಟ ಸೇರಲು ರಮೇಶ್ ಚೆನ್ನಿತ್ತಲ ಒಪ್ಪಿಕೊಂಡಿದ್ದಾರೆ.</p>.<p>ರಮೇಶ್ ಚೆನ್ನಿತ್ತಲ ಅವರು ಈ ಬಾರಿ ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿತು.</p>.<p>2011ರಲ್ಲೂ ಚೆನ್ನಿತ್ತಲ ಅವರಿಗೆ ಅವಕಾಶ ಕೈತಪ್ಪಿತ್ತು. ಈ ಬಾರಿಯೂ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಮುನಿಸಿಕೊಂಡ ಚೆನ್ನಿತ್ತಲ, ಯುಡಿಎಫ್ ಸಭೆಯಿಂದ ದೂರ ಉಳಿದಿದ್ದರು. ಈಗ ಮನವೊಲಿಕೆ ನಂತರ ಸಂಪುಟ ಸೇರಲು ಅವರು ಒಪ್ಪಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಕೂಡ ಸತೀಶನ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.</p>.<p>‘ರಾಜಕೀಯದಲ್ಲಿ ಅವಕಾಶಗಳು ವಿಭಿನ್ನ ರೂಪಗಳಲ್ಲಿ ಬರುತ್ತವೆ. ವೇಣುಗೋಪಾಲ್ ಅವರು ಎಐಸಿಸಿಯಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಕೇರಳಂನ ಯುಡಿಎಫ್ ಸರ್ಕಾರಕ್ಕೆ ಅವರ ಬೆಂಬಲ ಅತ್ಯಗತ್ಯ’ ಎಂದು ವಿ.ಡಿ ಸತೀಶನ್ ಹೇಳಿದ್ದಾರೆ.</p>.<p>ಚೆನ್ನಿತ್ತಲ ಅವರೊಂದಿಗೆ ಅವರ ಕೆಲವು ನಿಷ್ಠಾವಂತರು ಸಹ ಸಂಪುಟ ಸೇರುವ ಸಾಧ್ಯತೆ ಇದೆ.</p>.<p>ಉಮ್ಮನ್ ಚಾಂಡಿ ನೇತೃತ್ವದ ಯುಡಿಎಫ್ ಸರ್ಕಾರದಲ್ಲಿ 2014ರಿಂದ 2016ರವರೆಗೆ ಚೆನ್ನಿತ್ತಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>‘ಎಲ್ಲ ಸಚಿವ ಸ್ಥಾನಗಳನ್ನು ಭಾನುವಾರದೊಳಗೆ ನಿರ್ಧರಿಸಲಾಗುತ್ತದೆ. ಇಡೀ ಸಚಿವ ಸಂಪುಟದ ಪ್ರಮಾಣ ವಚನ ಸೋಮವಾರ ನಡೆಯಲಿದೆ’ ಎಂದು ಸತೀಶನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಚಿವ ಸಂಪುಟದ ಮೊದಲ ಸಭೆಯಲ್ಲಿ, ಕಾಂಗ್ರೆಸ್ನ ಚುನಾವಣಾ ಭರವಸೆಯಾದ ‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ’ದ ಬಗ್ಗೆ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.</p>.<p><strong>‘ತೃಪ್ತಿದಾಯಕ ಮಾತುಕತೆ’</strong></p><p>‘ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ, ಖಾತೆ ಹಂಚಿಕೆ ಬಗ್ಗೆ ಮಾತುಕತೆ ತೃಪ್ತಿದಾಯಕವಾಗಿ ಮುಂದುವರಿದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಸಣ್ಣಿ ಜೋಸೆಫ್ ಶನಿವಾರ ಹೇಳಿದ್ದಾರೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾದ ಬಳಿಕ ಜೋಸೆಫ್ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಯುಡಿಎಫ್ ಮಿತ್ರ ಪಕ್ಷಗಳಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಬಗ್ಗೆ ಮಾತುಕತೆ ಸರಾಗವಾಗಿ ನಡೆದಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>