<p><strong>ತಿರುವನಂತಪುರಂ:</strong> ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕವು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ಪ್ರಯಾಣ ನಿರ್ಬಂಧಗಳನ್ನು ಹೇರಿದೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ, ಈ ನಿರ್ಬಂಧಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವ ಪ್ರಯಾಣ ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದೆ ಎಂದು ಅವರು ವಾದಿಸಿದ್ದಾರೆ.</p>.<p>'ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನದ ವಿರುದ್ಧ ಹೊಸ ನಿರ್ಬಂಧಗಳನ್ನು ವಿಧಿಸಿದೆ' ಎಂದು ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.</p>.<p>ಶಾಸಕ ಎಕೆಎಂ ಅಶ್ರಫ್ (ಐಯುಎಂಎಲ್) ಅವರು ಬರೆದ ಪತ್ರಕ್ಕೆಉತ್ತರಿಸಿದ ಅವರು, ವಿವಿಧ ಉದ್ದೇಶಗಳಿಗಾಗಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುತ್ತಿರುವ ರಾಜ್ಯದ ಜನರಿಗೆ ನಿರ್ಬಂಧಗಳಿಂದ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಈ ಸಂಬಂಧ ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಈಗಾಗಲೇ ಕರ್ನಾಟಕದ ಡಿಜಿಪಿಯನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಚಿತಪಡಿಸಿದ್ದಾರೆ.</p>.<p>ಕರ್ನಾಟಕ ವಿಧಿಸಿರುವ ನಿರ್ಬಂಧಗಳನ್ನು ವಿವರಿಸಿದ ಮುಖ್ಯಮಂತ್ರಿ, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಯೊಳಗಿನ ಆರ್ಟಿ-ಪಿಸಿಆರ್ ಕೋವಿಡ್ ನೆಗೆಟಿವ್ ವರದಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 2 ರಿಂದಲೇ ಆ ರಾಜ್ಯದ ಅಧಿಕಾರಿಗಳು ತಲಪಾಡಿಯ ಗಡಿ ಚೆಕ್ ಪೋಸ್ಟ್ನಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ಹೇಳಿದರು.</p>.<p>ಕರ್ನಾಟಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹೋಗುವವರಿಗೆ ಮತ್ತು ಅಗತ್ಯ ಸೇವಾ ವಲಯಕ್ಕೆ ಸೇರಿದವರಿಗೆ ಈ ನಿರ್ಬಂಧಗಳಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ರಾಜ್ಯ ಪೊಲೀಸರು ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>ಆದ್ಯತೆಯ ಮೇರೆಗೆ ಮಂಗಳೂರಿಗೆ ಪ್ರತಿನಿತ್ಯ ಪ್ರಯಾಣಿಸುವವರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸಲು ಗಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕವು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಮೇಲೆ ಪ್ರಯಾಣ ನಿರ್ಬಂಧಗಳನ್ನು ಹೇರಿದೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ, ಈ ನಿರ್ಬಂಧಗಳು ಕೇಂದ್ರದ ನಿರ್ದೇಶನಕ್ಕೆ ವಿರುದ್ಧವಾಗಿವೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವ ಪ್ರಯಾಣ ನಿರ್ಬಂಧಗಳನ್ನು ಹೇರಬಾರದು ಎಂದು ಹೇಳಿದೆ ಎಂದು ಅವರು ವಾದಿಸಿದ್ದಾರೆ.</p>.<p>'ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನದ ವಿರುದ್ಧ ಹೊಸ ನಿರ್ಬಂಧಗಳನ್ನು ವಿಧಿಸಿದೆ' ಎಂದು ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.</p>.<p>ಶಾಸಕ ಎಕೆಎಂ ಅಶ್ರಫ್ (ಐಯುಎಂಎಲ್) ಅವರು ಬರೆದ ಪತ್ರಕ್ಕೆಉತ್ತರಿಸಿದ ಅವರು, ವಿವಿಧ ಉದ್ದೇಶಗಳಿಗಾಗಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುತ್ತಿರುವ ರಾಜ್ಯದ ಜನರಿಗೆ ನಿರ್ಬಂಧಗಳಿಂದ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಈ ಸಂಬಂಧ ರಾಜ್ಯ ಡಿಜಿಪಿ ಅನಿಲ್ ಕಾಂತ್ ಅವರು ಈಗಾಗಲೇ ಕರ್ನಾಟಕದ ಡಿಜಿಪಿಯನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಚಿತಪಡಿಸಿದ್ದಾರೆ.</p>.<p>ಕರ್ನಾಟಕ ವಿಧಿಸಿರುವ ನಿರ್ಬಂಧಗಳನ್ನು ವಿವರಿಸಿದ ಮುಖ್ಯಮಂತ್ರಿ, ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಯೊಳಗಿನ ಆರ್ಟಿ-ಪಿಸಿಆರ್ ಕೋವಿಡ್ ನೆಗೆಟಿವ್ ವರದಿ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಗಸ್ಟ್ 2 ರಿಂದಲೇ ಆ ರಾಜ್ಯದ ಅಧಿಕಾರಿಗಳು ತಲಪಾಡಿಯ ಗಡಿ ಚೆಕ್ ಪೋಸ್ಟ್ನಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ಹೇಳಿದರು.</p>.<p>ಕರ್ನಾಟಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹೋಗುವವರಿಗೆ ಮತ್ತು ಅಗತ್ಯ ಸೇವಾ ವಲಯಕ್ಕೆ ಸೇರಿದವರಿಗೆ ಈ ನಿರ್ಬಂಧಗಳಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ರಾಜ್ಯ ಪೊಲೀಸರು ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>ಆದ್ಯತೆಯ ಮೇರೆಗೆ ಮಂಗಳೂರಿಗೆ ಪ್ರತಿನಿತ್ಯ ಪ್ರಯಾಣಿಸುವವರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸಲು ಗಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>