<p><strong>ಕೊಚ್ಚಿ:</strong> ಕೊಚ್ಚಿ–ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಯೋಜನೆಯು ಪೂರ್ಣಗೊಂಡಿದ್ದು, ಇದನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶ್ಲಾಘಿಸಿದ್ದಾರೆ.</p>.<p>ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಗೇಲ್ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಪಿಣರಾಯಿ ವಿಜಯನ್ ಅವರು,‘ 2014 ರಲ್ಲಿ ವಿವಿಧ ಅಡಚಣೆಗಳಿಂದಾಗಿ ಈ ಯೋಜನೆಯನ್ನು ನಿಲ್ಲಿಸಬೇಕಾಯಿತು. 2016ರಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ಪುನರಾರಂಭಿಸಿದೆವು. ಈ ವೇಳೆ ಗೇಲ್ ಸಂಸ್ಥೆಯ ಅಧಿಕಾರಿಗಳು ಕೂಡ ನಮಗೆ ಸಾಥ್ ನೀಡಿದರು. ನಮ್ಮ ಜಂಟಿ ಪ್ರಯತ್ನವು ಈಗ ಸಫಲಗೊಂಡಿದೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದರು.</p>.<p>450 ಕಿ.ಮೀ ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ ಅನ್ನು ಗೇಲ್ ಇಂಡಿಯಾ ಲಿಮಿಟೆಡ್ ನಿರ್ಮಿಸಿದೆ.</p>.<p>ಈ ಪೈಪ್ಲೈನ್ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೊಡ್, ಕಣ್ಣೂರು, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲಕ ಹಾದುಹೋಗುತ್ತದೆ. ಇದು ಕರ್ನಾಟಕ ಮತ್ತು ಕೇರಳ ಸರ್ಕಾರ ಸಹಭಾಗಿತ್ವದ ಯೋಜನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೊಚ್ಚಿ–ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಯೋಜನೆಯು ಪೂರ್ಣಗೊಂಡಿದ್ದು, ಇದನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶ್ಲಾಘಿಸಿದ್ದಾರೆ.</p>.<p>ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಗೇಲ್ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಪಿಣರಾಯಿ ವಿಜಯನ್ ಅವರು,‘ 2014 ರಲ್ಲಿ ವಿವಿಧ ಅಡಚಣೆಗಳಿಂದಾಗಿ ಈ ಯೋಜನೆಯನ್ನು ನಿಲ್ಲಿಸಬೇಕಾಯಿತು. 2016ರಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ಪುನರಾರಂಭಿಸಿದೆವು. ಈ ವೇಳೆ ಗೇಲ್ ಸಂಸ್ಥೆಯ ಅಧಿಕಾರಿಗಳು ಕೂಡ ನಮಗೆ ಸಾಥ್ ನೀಡಿದರು. ನಮ್ಮ ಜಂಟಿ ಪ್ರಯತ್ನವು ಈಗ ಸಫಲಗೊಂಡಿದೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದರು.</p>.<p>450 ಕಿ.ಮೀ ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ ಅನ್ನು ಗೇಲ್ ಇಂಡಿಯಾ ಲಿಮಿಟೆಡ್ ನಿರ್ಮಿಸಿದೆ.</p>.<p>ಈ ಪೈಪ್ಲೈನ್ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೊಡ್, ಕಣ್ಣೂರು, ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲಕ ಹಾದುಹೋಗುತ್ತದೆ. ಇದು ಕರ್ನಾಟಕ ಮತ್ತು ಕೇರಳ ಸರ್ಕಾರ ಸಹಭಾಗಿತ್ವದ ಯೋಜನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>