<p>ತಿರುವನಂತಪುರ: ಕೊಡಕರ ಹವಾಲ ಪ್ರಕರಣದ ತನಿಖೆಯ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸದಸ್ಯರ ನಡುವೆ ನಡೆದ ವಾಗ್ವಾದಕ್ಕೆ ಕೇರಳ ವಿಧಾನಸಭೆಯ ಅಧಿವೇಶನ ಸೋಮವಾರ ಸಾಕ್ಷಿಯಾಯಿತು.</p>.<p>ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಬಿಜೆಪಿ ನಾಯಕರನ್ನು ರಕ್ಷಿಸಲು ಎಲ್ಡಿಎಫ್ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ವಿರೋಧಪಕ್ಷದ ಸದಸ್ಯರು ಕಲಾಪದಿಂದ ಹೊರನಡೆದರು.</p>.<p>ಬಿಜೆಪಿಯ ಕೆಲವು ನಾಯಕರು ಹಣ ಅಕ್ರಮ ವರ್ಗಾವಣೆಯ ಸೂತ್ರರಾಗಿದ್ದರೂ ಕೇರಳ ಪೊಲೀಸರು ಅವರನ್ನು ಸಾಕ್ಷಿಗಳ ಪಟ್ಟಿಯಲ್ಲಿ ಸೇರಿಸಿ ಈಚೆಗೆ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಆರೋಪಿಸಿದ ವಿರೋಧಪಕ್ಷದ ಸದಸ್ಯರು, ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಬಹುಕೋಟಿ ಹವಾಲ ಪ್ರಕರಣದ ತನಿಖೆಯನ್ನು ಬುಡಮೇಲು ಮಾಡಲು ಬಿಜೆಪಿ ಮತ್ತು ಸಿಪಿಎಂನವರು ಪ್ರಯತ್ನಿಸುತ್ತಿದ್ದಾರೆ ಎಂದೂ ಆರೋಪಿಸಿದ್ದಾರೆ.</p>.<p>ವಿರೋಧ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ವಿರೋಧ ಪಕ್ಷವು ಉದ್ದೇಶಪೂರ್ವಕವಾಗಿ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ’ ಎಂದಿದ್ದಾರೆ.</p>.<p>ಕೊಡಕರದಲ್ಲಿ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದ ಬಳಿಕ ವಿಧಾನಸಭಾ ಚುನಾವಣೆಗಾಗಿ ಭಾರಿ ಮೊತ್ತದ ಹಣ ಹರಿದು ಬಂದಿದೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯ ರಾಜ್ಯ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ 17 ಮಂದಿ ಬಿಜೆಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ: ಕೊಡಕರ ಹವಾಲ ಪ್ರಕರಣದ ತನಿಖೆಯ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸದಸ್ಯರ ನಡುವೆ ನಡೆದ ವಾಗ್ವಾದಕ್ಕೆ ಕೇರಳ ವಿಧಾನಸಭೆಯ ಅಧಿವೇಶನ ಸೋಮವಾರ ಸಾಕ್ಷಿಯಾಯಿತು.</p>.<p>ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಬಿಜೆಪಿ ನಾಯಕರನ್ನು ರಕ್ಷಿಸಲು ಎಲ್ಡಿಎಫ್ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ವಿರೋಧಪಕ್ಷದ ಸದಸ್ಯರು ಕಲಾಪದಿಂದ ಹೊರನಡೆದರು.</p>.<p>ಬಿಜೆಪಿಯ ಕೆಲವು ನಾಯಕರು ಹಣ ಅಕ್ರಮ ವರ್ಗಾವಣೆಯ ಸೂತ್ರರಾಗಿದ್ದರೂ ಕೇರಳ ಪೊಲೀಸರು ಅವರನ್ನು ಸಾಕ್ಷಿಗಳ ಪಟ್ಟಿಯಲ್ಲಿ ಸೇರಿಸಿ ಈಚೆಗೆ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಆರೋಪಿಸಿದ ವಿರೋಧಪಕ್ಷದ ಸದಸ್ಯರು, ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಬಹುಕೋಟಿ ಹವಾಲ ಪ್ರಕರಣದ ತನಿಖೆಯನ್ನು ಬುಡಮೇಲು ಮಾಡಲು ಬಿಜೆಪಿ ಮತ್ತು ಸಿಪಿಎಂನವರು ಪ್ರಯತ್ನಿಸುತ್ತಿದ್ದಾರೆ ಎಂದೂ ಆರೋಪಿಸಿದ್ದಾರೆ.</p>.<p>ವಿರೋಧ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ವಿರೋಧ ಪಕ್ಷವು ಉದ್ದೇಶಪೂರ್ವಕವಾಗಿ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ’ ಎಂದಿದ್ದಾರೆ.</p>.<p>ಕೊಡಕರದಲ್ಲಿ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದ ಬಳಿಕ ವಿಧಾನಸಭಾ ಚುನಾವಣೆಗಾಗಿ ಭಾರಿ ಮೊತ್ತದ ಹಣ ಹರಿದು ಬಂದಿದೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯ ರಾಜ್ಯ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ 17 ಮಂದಿ ಬಿಜೆಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>