ತಿರುವನಂತಪುರ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಮೇ 6ರವರೆಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಸೂಚಿಸಿದ್ದಾರೆ.
ಕೇರಳದಲ್ಲಿ ತಾಪಮಾನ ಏರಿಕೆ ಮುಂದುವರಿದಿದ್ದು, ಬಿಸಿ ಗಾಳಿಯಿಂದಾಗುವ ಪರಿಣಾಮಗಳನ್ನು ನಿಯಂತ್ರಿಸುವ ಸಂಬಂಧ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆನ್ಲೈನ್ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.
‘ಆಲಪ್ಪುಳ, ಪಾಲಕ್ಕಾಡ್, ತ್ರಿಶ್ಶೂರ್ ಮತ್ತು ಕೋಯಿಕ್ಕೋಡ್ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ಅಧಿಕ ತಾಪಮಾನದ ಯೆಲ್ಲೋ ಅಲರ್ಟ್ ನೀಡಿದ್ದು, ಜನರು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಸಂಚರಿಸಬಾರದು’ ಎಂದು ಹೇಳಿದ್ದಾರೆ.