<p><strong>ತಿರುವನಂತಪುರ:</strong> ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣದ ಎರಡು ಪ್ರಮುಖ ಭಾಗಗಳನ್ನು ಓದಿಲ್ಲ ಎಂದು ಮಂಗಳವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. </p><p>ಕೇರಳ ವಿಧಾನಸಭೆಯ ಕಲಾಪ ಆರಂಭವಾಗಿದ್ದು, ರಾಜ್ಯಪಾಲರ ಭಾಷಣದಲ್ಲಿ ನೀತಿ ಭಾಷಣವನ್ನು ಪೂರ್ಣವಾಗಿ ಓದಿಲ್ಲ ಎಂದು ರಾಜ್ಯಪಾಲರ ಭಾಷಣದ ಬಳಿಕ ಪಿಣರಾಯಿ ವಿಜಯನ್ ಆರೋಪಿಸಿದರು.</p><p>ರಾಜ್ಯಪಾಲರು ವಿಧಾನಸಭೆಯಲ್ಲಿ ಸರ್ಕಾರ ನೀಡಿದ್ದ ಭಾಷಣದ ಪ್ಯಾರಾಗ್ರಾಫ್ 12ರ ಆರಂಭ ಮತ್ತು ಪ್ಯಾರಾಗ್ರಾಫ್ 15ರ ಕೊನೆಯ ಭಾಗವನ್ನು ಓದಿಲ್ಲ ಎಂದು ಹೇಳಿದರು. </p><p>ರಾಜ್ಯಪಾಲರು ಓದದೇ ಬಿಟ್ಟಿರುವ ಭಾಗಗಳಲ್ಲಿ ಮೊದಲನೆಯದು ‘ಸಾಮಾಜಿಕ ಮತ್ತು ಸಾಂಸ್ಥಿಕ ಸಾಧನೆಗಳ ಹೊರತಾಗಿಯೂ, ಒಕ್ಕೂಟದ ವ್ಯವಸ್ಥೆಯ ಭಾಗವಾಗಿರುವ ಕೇರಳವನ್ನು ಕೇಂದ್ರ ಸರ್ಕಾರ ಆರ್ಥಿಕವಾಗಿ ಕುಗ್ಗಿಸಲು ಪ್ರಯತ್ನಿಸುತ್ತಿದೆ. ಇದರಿಂದಾಗಿ ರಾಜ್ಯವು ತೀವ್ರ ಆರ್ಥಿಕ ಒತ್ತಡ ಎದುರಿಸುತ್ತಿದೆ’ ಎಂಬುದಾಗಿತ್ತು.</p><p>ಮತ್ತೊಂದು ಭಾಗದಲ್ಲಿ ‘ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ನಮ್ಮ ಸರ್ಕಾರವು ಈ ವಿಷಯಗಳ ಬಗ್ಗೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ, ಇವುಗಳನ್ನು ಸಂವಿಧಾನ ಪೀಠಕ್ಕೆ ಉಲ್ಲೇಖಿಸಲಾಗಿದೆ’ ಎಂದು ಮುಖ್ಯಮಂತ್ರಿ ವಿಜಯನ್ ಅವರು ಓದಿ ಹೇಳಿದರು.</p><p>ಮಾತ್ರವಲ್ಲ, ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನೇ ಅಧಿಕೃತ ಭಾಷಣವೆಂದು ಒಪ್ಪಿಕೊಳ್ಳಬೇಕೆಂದು ವಿಜಯನ್ ಅವರು ಸ್ಪೀಕರ್ಗೆ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣದ ಎರಡು ಪ್ರಮುಖ ಭಾಗಗಳನ್ನು ಓದಿಲ್ಲ ಎಂದು ಮಂಗಳವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. </p><p>ಕೇರಳ ವಿಧಾನಸಭೆಯ ಕಲಾಪ ಆರಂಭವಾಗಿದ್ದು, ರಾಜ್ಯಪಾಲರ ಭಾಷಣದಲ್ಲಿ ನೀತಿ ಭಾಷಣವನ್ನು ಪೂರ್ಣವಾಗಿ ಓದಿಲ್ಲ ಎಂದು ರಾಜ್ಯಪಾಲರ ಭಾಷಣದ ಬಳಿಕ ಪಿಣರಾಯಿ ವಿಜಯನ್ ಆರೋಪಿಸಿದರು.</p><p>ರಾಜ್ಯಪಾಲರು ವಿಧಾನಸಭೆಯಲ್ಲಿ ಸರ್ಕಾರ ನೀಡಿದ್ದ ಭಾಷಣದ ಪ್ಯಾರಾಗ್ರಾಫ್ 12ರ ಆರಂಭ ಮತ್ತು ಪ್ಯಾರಾಗ್ರಾಫ್ 15ರ ಕೊನೆಯ ಭಾಗವನ್ನು ಓದಿಲ್ಲ ಎಂದು ಹೇಳಿದರು. </p><p>ರಾಜ್ಯಪಾಲರು ಓದದೇ ಬಿಟ್ಟಿರುವ ಭಾಗಗಳಲ್ಲಿ ಮೊದಲನೆಯದು ‘ಸಾಮಾಜಿಕ ಮತ್ತು ಸಾಂಸ್ಥಿಕ ಸಾಧನೆಗಳ ಹೊರತಾಗಿಯೂ, ಒಕ್ಕೂಟದ ವ್ಯವಸ್ಥೆಯ ಭಾಗವಾಗಿರುವ ಕೇರಳವನ್ನು ಕೇಂದ್ರ ಸರ್ಕಾರ ಆರ್ಥಿಕವಾಗಿ ಕುಗ್ಗಿಸಲು ಪ್ರಯತ್ನಿಸುತ್ತಿದೆ. ಇದರಿಂದಾಗಿ ರಾಜ್ಯವು ತೀವ್ರ ಆರ್ಥಿಕ ಒತ್ತಡ ಎದುರಿಸುತ್ತಿದೆ’ ಎಂಬುದಾಗಿತ್ತು.</p><p>ಮತ್ತೊಂದು ಭಾಗದಲ್ಲಿ ‘ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ನಮ್ಮ ಸರ್ಕಾರವು ಈ ವಿಷಯಗಳ ಬಗ್ಗೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ, ಇವುಗಳನ್ನು ಸಂವಿಧಾನ ಪೀಠಕ್ಕೆ ಉಲ್ಲೇಖಿಸಲಾಗಿದೆ’ ಎಂದು ಮುಖ್ಯಮಂತ್ರಿ ವಿಜಯನ್ ಅವರು ಓದಿ ಹೇಳಿದರು.</p><p>ಮಾತ್ರವಲ್ಲ, ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನೇ ಅಧಿಕೃತ ಭಾಷಣವೆಂದು ಒಪ್ಪಿಕೊಳ್ಳಬೇಕೆಂದು ವಿಜಯನ್ ಅವರು ಸ್ಪೀಕರ್ಗೆ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>