<p>ನವದೆಹಲಿ/ ತಿರುವನಂತಪುರ (ಪಿಟಿಐ): ಕೆಪಿಸಿಸಿಯ ಮಾಜಿ ಅಧ್ಯಕ್ಷರು, ಕಾರ್ಯಾಧ್ಯಕ್ಷರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದರೂ, ಕಾಂಗ್ರೆಸ್ ಹೈಕಮಾಂಡ್ಗೆ ಕೇರಳಂ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸಲು ಮಂಗಳವಾರವೂ ಸಾಧ್ಯವಾಗಲಿಲ್ಲ. ಆದರೆ, ಈ ಕುರಿತು ವಾರದಿಂದೀಚೆಗೆ ನಡೆಯುತ್ತಿರುವ ಚರ್ಚೆ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಸ್ಥಾನ ಕ್ಕಾಗಿ ಪಟ್ಟುಹಿಡಿದಿರುವ ಕೆ.ಸಿ ವೇಣುಗೋಪಾಲ್ ಮತ್ತು ವಿ.ಡಿ.ಸತೀಶನ್ ಇಬ್ಬರೂ ಕಣದಿಂದ ಹಿಂದೆ ಸರಿಯಲು ಒಪ್ಪದ ಕಾರಣ ಮತ್ತು ಇಬ್ಬರಲ್ಲಿ ಒಬ್ಬರನ್ನು ಅಂತಿಮಗೊಳಿಸಲು ಹೈಕಮಾಂಡ್ಗೆ ಸುಲಭವಾಗಿ ಆಗದ ಕಾರಣ ಅನಿಶ್ಚಿತತೆ ಮುಂದುವರಿದಿದೆ.</p>.<p>ಕೆಪಿಸಿಸಿ ಮಾಜಿ ಅಧ್ಯಕ್ಷರಾದ ವಿ.ಎಂ. ಸುಧೀರನ್, ಎಂ. ರಾಮಚಂದ್ರನ್, ಕೆ. ಸುಧಾಕರನ್, ಕೆ. ಮುರಳೀಧರನ್ ಮತ್ತು ಎಂ.ಎಂ ಹಸನ್ ಅವರು ಮಂಗಳವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.</p>.<p>ಹಿರಿಯ ಶಾಸಕರಾದ ಟಿ. ರಾಧಾಕೃಷ್ಣನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಪಿ.ಸಿ ವಿಷ್ಣುನಾಥ್, ಶಾಫಿ ಪರಂಬಿಲ್, ಎ.ಪಿ. ಅನಿಲ್ ಕುಮಾರ್ ಅವರನ್ನೂ ಹೈಕಮಾಂಡ್ ದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿತು. ಹಿರಿಯ ಮುಖಂಡ ಎ.ಕೆ. ಆ್ಯಂಟನಿ ಅವರೊಂದಿಗೂ ರಾಹುಲ್ ದೂರವಾಣಿ ಮೂಲಕ ಚರ್ಚೆ ನಡೆಸಿದರು.</p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಮುರಳೀಧರನ್, ‘ಕೇರಳಂ ಮುಖ್ಯಮಂತ್ರಿ ಹೆಸರು ಮಂಗಳವಾರ ರಾತ್ರಿ ಅಥವಾ ಬುಧವಾರ ಘೋಷಣೆಯಾಗಲಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-51-326900842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ/ ತಿರುವನಂತಪುರ (ಪಿಟಿಐ): ಕೆಪಿಸಿಸಿಯ ಮಾಜಿ ಅಧ್ಯಕ್ಷರು, ಕಾರ್ಯಾಧ್ಯಕ್ಷರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದರೂ, ಕಾಂಗ್ರೆಸ್ ಹೈಕಮಾಂಡ್ಗೆ ಕೇರಳಂ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸಲು ಮಂಗಳವಾರವೂ ಸಾಧ್ಯವಾಗಲಿಲ್ಲ. ಆದರೆ, ಈ ಕುರಿತು ವಾರದಿಂದೀಚೆಗೆ ನಡೆಯುತ್ತಿರುವ ಚರ್ಚೆ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಸ್ಥಾನ ಕ್ಕಾಗಿ ಪಟ್ಟುಹಿಡಿದಿರುವ ಕೆ.ಸಿ ವೇಣುಗೋಪಾಲ್ ಮತ್ತು ವಿ.ಡಿ.ಸತೀಶನ್ ಇಬ್ಬರೂ ಕಣದಿಂದ ಹಿಂದೆ ಸರಿಯಲು ಒಪ್ಪದ ಕಾರಣ ಮತ್ತು ಇಬ್ಬರಲ್ಲಿ ಒಬ್ಬರನ್ನು ಅಂತಿಮಗೊಳಿಸಲು ಹೈಕಮಾಂಡ್ಗೆ ಸುಲಭವಾಗಿ ಆಗದ ಕಾರಣ ಅನಿಶ್ಚಿತತೆ ಮುಂದುವರಿದಿದೆ.</p>.<p>ಕೆಪಿಸಿಸಿ ಮಾಜಿ ಅಧ್ಯಕ್ಷರಾದ ವಿ.ಎಂ. ಸುಧೀರನ್, ಎಂ. ರಾಮಚಂದ್ರನ್, ಕೆ. ಸುಧಾಕರನ್, ಕೆ. ಮುರಳೀಧರನ್ ಮತ್ತು ಎಂ.ಎಂ ಹಸನ್ ಅವರು ಮಂಗಳವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.</p>.<p>ಹಿರಿಯ ಶಾಸಕರಾದ ಟಿ. ರಾಧಾಕೃಷ್ಣನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಪಿ.ಸಿ ವಿಷ್ಣುನಾಥ್, ಶಾಫಿ ಪರಂಬಿಲ್, ಎ.ಪಿ. ಅನಿಲ್ ಕುಮಾರ್ ಅವರನ್ನೂ ಹೈಕಮಾಂಡ್ ದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿತು. ಹಿರಿಯ ಮುಖಂಡ ಎ.ಕೆ. ಆ್ಯಂಟನಿ ಅವರೊಂದಿಗೂ ರಾಹುಲ್ ದೂರವಾಣಿ ಮೂಲಕ ಚರ್ಚೆ ನಡೆಸಿದರು.</p>.<p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಮುರಳೀಧರನ್, ‘ಕೇರಳಂ ಮುಖ್ಯಮಂತ್ರಿ ಹೆಸರು ಮಂಗಳವಾರ ರಾತ್ರಿ ಅಥವಾ ಬುಧವಾರ ಘೋಷಣೆಯಾಗಲಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-51-326900842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>