<p><strong>ನವದೆಹಲಿ:</strong> ಕೇರಳಂ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ಕಾಂಗ್ರೆಸ್ ವೀಕ್ಷಕರು ತಮ್ಮ ವರದಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಕ್ರವಾರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.</p>.<p>ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರು ಕಾಂಗ್ರೆಸ್ ಶಾಸಕರೊಂದಿಗೆ ಗುರುವಾರ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದರು. ನೂತನ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯದ ಕುರಿತು ಖರ್ಗೆ ಅವರೊಂದಿಗೆ ಚರ್ಚಿಸಿದ್ದಾರೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಪಕ್ಷದ ಬಹುಪಾಲು ಶಾಸಕರು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹಿಂದೆ ಕೇರಳಂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ವಿ.ಡಿ. ಸತೀಶನ್ ಅವರನ್ನು ಜನರು ಬೆಂಬಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಕೆ.ಸಿ. ವೇಣುಗೋಪಾಲ್, ಸತೀಶನ್ ಹಾಗೂ ರಮೇಶ್ ಚೆನ್ನಿತ್ತಲ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಖರ್ಗೆ ಅವರು ಈ ಮೂವರು ಆಕಾಂಕ್ಷಿಗಳನ್ನು ಮಾತುಕತೆಗಾಗಿ ಕರೆದಿದ್ದಾರೆ. </p>.<p>ವೇಣುಗೋಪಾಲ್ ಅವರು ಮುಖ್ಯಮಂತ್ರಿ ಹುದ್ದೆ ವಹಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಇದಕ್ಕಾಗಿ ಪಕ್ಷದ ಹೈಕಮಾಂಡ್ ಮೇಲೆ ತಮ್ಮ ಪ್ರಭಾವ ಬಳಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಹತ್ತಿರವಾಗಿರುವುದು ಸಹ ಅವರಿಗೆ ಅನುಕೂಲವಾಗಬಹುದು ಎಂದು ಮೂಲಗಳು ತಿಳಿಸಿವೆ.</p>.<p>ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟವು ಒಟ್ಟು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳಂ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ಕಾಂಗ್ರೆಸ್ ವೀಕ್ಷಕರು ತಮ್ಮ ವರದಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಕ್ರವಾರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.</p>.<p>ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರು ಕಾಂಗ್ರೆಸ್ ಶಾಸಕರೊಂದಿಗೆ ಗುರುವಾರ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದರು. ನೂತನ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯದ ಕುರಿತು ಖರ್ಗೆ ಅವರೊಂದಿಗೆ ಚರ್ಚಿಸಿದ್ದಾರೆ.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಪಕ್ಷದ ಬಹುಪಾಲು ಶಾಸಕರು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹಿಂದೆ ಕೇರಳಂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ವಿ.ಡಿ. ಸತೀಶನ್ ಅವರನ್ನು ಜನರು ಬೆಂಬಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಕೆ.ಸಿ. ವೇಣುಗೋಪಾಲ್, ಸತೀಶನ್ ಹಾಗೂ ರಮೇಶ್ ಚೆನ್ನಿತ್ತಲ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಖರ್ಗೆ ಅವರು ಈ ಮೂವರು ಆಕಾಂಕ್ಷಿಗಳನ್ನು ಮಾತುಕತೆಗಾಗಿ ಕರೆದಿದ್ದಾರೆ. </p>.<p>ವೇಣುಗೋಪಾಲ್ ಅವರು ಮುಖ್ಯಮಂತ್ರಿ ಹುದ್ದೆ ವಹಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಇದಕ್ಕಾಗಿ ಪಕ್ಷದ ಹೈಕಮಾಂಡ್ ಮೇಲೆ ತಮ್ಮ ಪ್ರಭಾವ ಬಳಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಹತ್ತಿರವಾಗಿರುವುದು ಸಹ ಅವರಿಗೆ ಅನುಕೂಲವಾಗಬಹುದು ಎಂದು ಮೂಲಗಳು ತಿಳಿಸಿವೆ.</p>.<p>ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟವು ಒಟ್ಟು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>