<p><strong>ತಿರುವನಂತಪುರ:</strong> ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ. ಮತ್ತು ಅವರ ಒಡೆತನದ ಬೆಂಗಳೂರು ಮೂಲದ ಐ.ಟಿ ಕಂಪನಿಗೆ ಕೊಚ್ಚಿಯ ಖಾಸಗಿ ಕಂಪನಿಯಿಂದ ಅಕ್ರಮವಾಗಿ ಹಣ ಪಾವತಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆರೋಪಿಸಿದ್ದಾರೆ.</p>.<p>ಕೊಚ್ಚಿ ಮೂಲದ ಖಾಸಗಿ ಕಂಪನಿ ಕೊಚಿನ್ ಮಿನೆರಲ್ಸ್ ಆ್ಯಂಡ್ ರುಟೈಲ್ಸ್ ಲಿಮಿಟೆಡ್ನಿಂದ (ಸಿಎಂಆರ್ಎಲ್) ಬೆಂಗಳೂರಿನ ಎಕ್ಸಲಾಜಿಕ್ ಸಲ್ಯೂಷನ್ಸ್ ಐ.ಟಿ ಕಂಪನಿ ಮತ್ತು ವೀಣಾ ಅವರಿಗೆ ₹1.72 ಕೋಟಿ ಹಣ ಅಕ್ರಮವಾಗಿ ಸಂದಾಯವಾಗಿದೆ ಎಂದು ಆದಾಯ ತೆರಿಗೆ ಮಧ್ಯಂತರ ಇತ್ಯರ್ಥ ಮಂಡಳಿಯ ವರದಿಯಲ್ಲಿ ಹೇಳಿದೆ. ಇದರಿಂದ ಪಿಣರಾಯಿ ವಿಜಯನ್ ಅವರು ಮತ್ತೊಂದು ಮುಜುಗರ ಎದುರಿಸುವಂತಾಗಿದೆ. </p>.<p>ವೀಣಾ ಟಿ. ಅವರು ಕೇರಳ ಲೋಕೋಪಯೋಗಿ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಅವರ ಪತ್ನಿಯೂ ಹೌದು.</p>.<p>ಎಕ್ಸಲಾಜಿಕ್ ಸಲ್ಯೂಷನ್ಸ್ ಕಂಪನಿಯು ಕೇರಳ ಸರ್ಕಾರದಲ್ಲಿ ಅಧಿಕಾರಸ್ಥ, ಪ್ರಮುಖ ರಾಜಕಾರಣಿಯೊಬ್ಬರ ಮಗಳ ಒಡೆತನದ್ದಾಗಿದೆ. ಯಾವುದೇ ಸೇವೆಗಳನ್ನು ಒದಗಿಸದಿದ್ದರೂ ಸಿಎಂಆರ್ಎಲ್ನಿಂದ 2017-18 ರಿಂದ 2019-20ರ ಅವಧಿಯಲ್ಲಿ ಕಂತುಗಳಲ್ಲಿ ವೀಣಾ ಟಿ. ಅವರಿಗೆ ₹55 ಲಕ್ಷ ಮತ್ತು ಎಕ್ಸಲಾಜಿಕ್ ಸಲ್ಯೂಷನ್ಸ್ಗೆ 1.17 ಕೋಟಿ ಪಾವತಿಯಾಗಿದೆ ಎಂದು ಆರೋಪಿಸಿದೆ.</p>.<p>ಸಿಎಂಆರ್ಎಲ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರಿಂದ ಕಾಂಗ್ರೆಸ್ಸಿನವರು ಸೇರಿ ಹಲವು ಹಿರಿಯ ರಾಜಕಾರಣಿಗಳಿಗೆ, ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮ ಸಂಸ್ಥೆಗಳಿಗೆ ಹಣ ಅಕ್ರಮವಾಗಿ ಪಾವತಿಯಾಗಿದ್ದು, ಇದರ ಸಾಕ್ಷ್ಯಗಳನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವುದಾಗಿ ಹೇಳಲಾಗಿದೆ. </p>.<p>ಸಿಎಂಆರ್ಎಲ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಶಶಿಧರನ್ ಕರ್ತಾ ಅವರು ಈ ಹಿಂದೆ ಕೇರಳ ಕರಾವಳಿ ಪ್ರದೇಶಗಳಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸಿದ್ದರು.</p>.<p>ಇದರ ಬಗ್ಗೆ ಮಲಯಾಳ ಪತ್ರಿಕೆಯೊಂದು ಬುಧವಾರ ವರದಿ ಪ್ರಕಟಿಸಿದ ನಂತರ, ಮುಖ್ಯಮಂತ್ರಿಯವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಒತ್ತಾಯಿಸಿವೆ.</p>.<p>ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.</p>.<p>ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಮತ್ತು ಕೇರಳ ಬಿಜೆಪಿ ನಾಯಕ ವಿ. ಮುರಳೀಧರನ್ ಅವರು, ಕಾಂಗ್ರೆಸ್ನ ಅನೇಕ ನಾಯಕರು ಈ ಸಂಸ್ಥೆಯಿಂದ ಲಂಚ ಪಡೆದಿದ್ದಾರೆ. ಹಾಗಾಗಿ, ಕಾಂಗ್ರೆಸ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ಅವರು ಈ ವಿಷಯವನ್ನು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಟಿ. ಮತ್ತು ಅವರ ಒಡೆತನದ ಬೆಂಗಳೂರು ಮೂಲದ ಐ.ಟಿ ಕಂಪನಿಗೆ ಕೊಚ್ಚಿಯ ಖಾಸಗಿ ಕಂಪನಿಯಿಂದ ಅಕ್ರಮವಾಗಿ ಹಣ ಪಾವತಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆರೋಪಿಸಿದ್ದಾರೆ.</p>.<p>ಕೊಚ್ಚಿ ಮೂಲದ ಖಾಸಗಿ ಕಂಪನಿ ಕೊಚಿನ್ ಮಿನೆರಲ್ಸ್ ಆ್ಯಂಡ್ ರುಟೈಲ್ಸ್ ಲಿಮಿಟೆಡ್ನಿಂದ (ಸಿಎಂಆರ್ಎಲ್) ಬೆಂಗಳೂರಿನ ಎಕ್ಸಲಾಜಿಕ್ ಸಲ್ಯೂಷನ್ಸ್ ಐ.ಟಿ ಕಂಪನಿ ಮತ್ತು ವೀಣಾ ಅವರಿಗೆ ₹1.72 ಕೋಟಿ ಹಣ ಅಕ್ರಮವಾಗಿ ಸಂದಾಯವಾಗಿದೆ ಎಂದು ಆದಾಯ ತೆರಿಗೆ ಮಧ್ಯಂತರ ಇತ್ಯರ್ಥ ಮಂಡಳಿಯ ವರದಿಯಲ್ಲಿ ಹೇಳಿದೆ. ಇದರಿಂದ ಪಿಣರಾಯಿ ವಿಜಯನ್ ಅವರು ಮತ್ತೊಂದು ಮುಜುಗರ ಎದುರಿಸುವಂತಾಗಿದೆ. </p>.<p>ವೀಣಾ ಟಿ. ಅವರು ಕೇರಳ ಲೋಕೋಪಯೋಗಿ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಅವರ ಪತ್ನಿಯೂ ಹೌದು.</p>.<p>ಎಕ್ಸಲಾಜಿಕ್ ಸಲ್ಯೂಷನ್ಸ್ ಕಂಪನಿಯು ಕೇರಳ ಸರ್ಕಾರದಲ್ಲಿ ಅಧಿಕಾರಸ್ಥ, ಪ್ರಮುಖ ರಾಜಕಾರಣಿಯೊಬ್ಬರ ಮಗಳ ಒಡೆತನದ್ದಾಗಿದೆ. ಯಾವುದೇ ಸೇವೆಗಳನ್ನು ಒದಗಿಸದಿದ್ದರೂ ಸಿಎಂಆರ್ಎಲ್ನಿಂದ 2017-18 ರಿಂದ 2019-20ರ ಅವಧಿಯಲ್ಲಿ ಕಂತುಗಳಲ್ಲಿ ವೀಣಾ ಟಿ. ಅವರಿಗೆ ₹55 ಲಕ್ಷ ಮತ್ತು ಎಕ್ಸಲಾಜಿಕ್ ಸಲ್ಯೂಷನ್ಸ್ಗೆ 1.17 ಕೋಟಿ ಪಾವತಿಯಾಗಿದೆ ಎಂದು ಆರೋಪಿಸಿದೆ.</p>.<p>ಸಿಎಂಆರ್ಎಲ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರಿಂದ ಕಾಂಗ್ರೆಸ್ಸಿನವರು ಸೇರಿ ಹಲವು ಹಿರಿಯ ರಾಜಕಾರಣಿಗಳಿಗೆ, ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮ ಸಂಸ್ಥೆಗಳಿಗೆ ಹಣ ಅಕ್ರಮವಾಗಿ ಪಾವತಿಯಾಗಿದ್ದು, ಇದರ ಸಾಕ್ಷ್ಯಗಳನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವುದಾಗಿ ಹೇಳಲಾಗಿದೆ. </p>.<p>ಸಿಎಂಆರ್ಎಲ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಶಶಿಧರನ್ ಕರ್ತಾ ಅವರು ಈ ಹಿಂದೆ ಕೇರಳ ಕರಾವಳಿ ಪ್ರದೇಶಗಳಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸಿದ್ದರು.</p>.<p>ಇದರ ಬಗ್ಗೆ ಮಲಯಾಳ ಪತ್ರಿಕೆಯೊಂದು ಬುಧವಾರ ವರದಿ ಪ್ರಕಟಿಸಿದ ನಂತರ, ಮುಖ್ಯಮಂತ್ರಿಯವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಒತ್ತಾಯಿಸಿವೆ.</p>.<p>ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.</p>.<p>ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಮತ್ತು ಕೇರಳ ಬಿಜೆಪಿ ನಾಯಕ ವಿ. ಮುರಳೀಧರನ್ ಅವರು, ಕಾಂಗ್ರೆಸ್ನ ಅನೇಕ ನಾಯಕರು ಈ ಸಂಸ್ಥೆಯಿಂದ ಲಂಚ ಪಡೆದಿದ್ದಾರೆ. ಹಾಗಾಗಿ, ಕಾಂಗ್ರೆಸ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ಅವರು ಈ ವಿಷಯವನ್ನು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>