<p><strong>ನವದೆಹಲಿ:</strong> ಕೇರಳಂನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯುಡಿಎಫ್ ಸಜ್ಜಾಗಿದ್ದರೂ, ಮುಖ್ಯಮಂತ್ರಿ ಆಯ್ಕೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ಪರ್ಧಾ ಕಣದಲ್ಲಿರುವ ಮೂವರೊಂದಿಗೆ ಶನಿವಾರ ಸತತ ಮೂರು ಗಂಟೆ ಚರ್ಚೆ ನಡೆಸಿದರೂ ಒಮ್ಮತ ಮೂಡಲಿಲ್ಲ.</p>.<p>‘ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಸರಿಯಾದ ಸಮಯದಲ್ಲಿಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಪಕ್ಷ ಸ್ಪಷ್ಟಪಡಿಸಿದೆ. ಆದರೆ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ಮುಖಂಡ ಎ.ಕೆ. ಆ್ಯಂಟನಿ ಅವರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಕೇರಳಂ ಮುಖ್ಯಮಂತ್ರಿ ಹೆಸರು ಘೋಷಣೆಗೆ ಇನ್ನೂ ಎರಡು ದಿನ ತೆಗೆದುಕೊಳ್ಳಬಹುದು ಎಂದು ಮೂಲಗಳು ಹೇಳಿವೆ.</p>.<p>‘ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳಂ ಉಸ್ತುವಾರಿ ದೀಪಾ ದಾಸ್ ಮುನ್ಶಿ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p>.<p>ಕೇರಳಂ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ನಡೆದ ಕಾಂಗ್ರೆಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರ್ಧಾರವೇ ಅಂತಿಮ. ವಿಧಾನಸಭೆ ವಿಸರ್ಜನೆಗೆ ಮೇ 23 ಕೊನೆಯ ದಿನ. ಅದರೊಳಗೆ, ಸರಿಯಾದ ಸಮಯದಲ್ಲಿ, ನಮ್ಮ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ. ನಾವೂ ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದು ವಿವರಿಸಿದರು. </p>.<p>ಸುದೀರ್ಘ ಚರ್ಚೆ: ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ಪರ್ಧಾ ಕಣದಲ್ಲಿರುವ ಕೆ.ಸಿ. ವೇಣುಗೋಪಾಲ್, ವಿ.ಡಿ ಸತೀಶನ್, ರಮೇಶ್ ಚೆನ್ನಿತ್ತಲ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ಗಾಂಧಿ ಶನಿವಾರ ಸುದೀರ್ಘ ಚರ್ಚೆ ನಡೆಸಿದರು. ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಣ್ಣಿ ಜೋಸೆಫ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. </p>.<p>ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಈಗಾಗಲೇ ಕೇರಳಂ ಕಾಂಗ್ರೆಸ್ ಶಾಸಕರ ಸಭೆ ನಡೆಸಿ, ಒಂದು ಸಾಲಿನ ನಿರ್ಣಯ ಅಂಗೀಕರಿಸಿ, ವರದಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಖರ್ಗೆ ಮತ್ತು ರಾಹುಲ್ ಗಾಂಧಿ ಇದಕ್ಕೆ ಅಂತಿಮ ಅಂಕಿತ ಹಾಕುವುದು ಮಾತ್ರ ಬಾಕಿ ಉಳಿದಿದೆ. </p>.<p>ಈ ವರದಿಯಲ್ಲಿ, ಹೆಚ್ಚಿನ ಶಾಸಕರು ಕೆ.ಸಿ ವೇಣುಗೋಪಾಲ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ, ಆದರೆ, ಸಾರ್ವಜನಿಕರ ಒಲವು ವಿ.ಡಿ.ಸತೀಶನ್ ಪರವಾಗಿದೆ ಎಂದು ವೀಕ್ಷಕರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಕೇರಳಂನ 140 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 63 ಸ್ಥಾನಗಳನ್ನು ಹೊಂದಿದೆ. ಯಡಿಎಫ್ನಲ್ಲಿರುವ ಐಯುಎಂಲ್ 22 ಹಾಗೂ ಕೇರಳ ಕಾಂಗ್ರೆಸ್ (ಕೆಇಸಿ) 8 ಸ್ಥಾನ, ಆರ್ಎಸ್ಪಿ 3 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟಾರೆ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. </p>.<div><blockquote>ಕೇರಳಂ ಜನರು ನಮಗೆ ಪ್ರಚಂಡ ಬಹುಮತ ನೀಡಿದ್ದಾರೆ. ಬ್ಯಾನರ್ ಫೆಕ್ಸ್ ಅಳವಡಿಸುವಂತಹ ಅಶಿಸ್ತಿನ ಘಟನೆಗಳು ಕಾಂಗ್ರೆಸ್ ಸಂಸ್ಕೃತಿಯಲ್ಲ </blockquote><span class="attribution"> –ದೀಪಾ ದಾಸ್ ಮುನ್ಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ </span></div>.<h2>ರಾಷ್ಟ್ರ ರಾಜಧಾನಿಯಲ್ಲೂ ಫೆಕ್ಸ್ </h2>.<p>ಪೋಸ್ಟರ್ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರೂ ಯಾವುದೇ ಹಾಲಿ ಸಂಸದರನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ಈ ಹಿಂದೆ ನಿಲುವು ತೆಗೆದುಕೊಂಡಿತ್ತು. ಆದರೆ ವೇಣುಗೋಪಾಲ್ ಸಿ.ಎಂ ಸ್ಥಾನಕ್ಕಾಗಿ ಹಕ್ಕು ಮಂಡಿಸುವುದರೊಂದಿಗೆ ಸಿ.ಎಂ ಸ್ಥಾನದ ಸ್ಪರ್ಧೆ ಬಿಸಿಯಾಗಿದ್ದು ರಾಷ್ಟ್ರ ರಾಜಧಾನಿಯಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ವೇಣುಗೋಪಾಲ್ ಮತ್ತು ಸತೀಶನ್ ಅವರ ಪರವಾಗಿ ಅವರ ಬೆಂಬಲಿಗರು ಕೇರಳಂ ಮತ್ತು ದೆಹಲಿಯಲ್ಲೂ ಪೋಸ್ಟರ್ ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಸತೀಶನ್ ಅವರನ್ನು ಸ್ವಾಗತಿಸಿ ಭಾರಿ ಬೆಂಬಲ ವ್ಯಕ್ತಪಡಿಸಿದ್ದಾರೆ. ವೇಣುಗೋಪಾಲ್ ಅವರೇ ಕೇರಳಂನ ಮುಂದಿನ ಮುಖ್ಯಮಂತ್ರಿ ಎಂಬ ಪೋಸ್ಟರ್ಗಳನ್ನು ನವದೆಹಲಿಯ ಖರ್ಗೆ ನಿವಾಸದ ಹೊರಗಡೆ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳಂನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯುಡಿಎಫ್ ಸಜ್ಜಾಗಿದ್ದರೂ, ಮುಖ್ಯಮಂತ್ರಿ ಆಯ್ಕೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ಪರ್ಧಾ ಕಣದಲ್ಲಿರುವ ಮೂವರೊಂದಿಗೆ ಶನಿವಾರ ಸತತ ಮೂರು ಗಂಟೆ ಚರ್ಚೆ ನಡೆಸಿದರೂ ಒಮ್ಮತ ಮೂಡಲಿಲ್ಲ.</p>.<p>‘ಕೇರಳಂ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಸರಿಯಾದ ಸಮಯದಲ್ಲಿಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಪಕ್ಷ ಸ್ಪಷ್ಟಪಡಿಸಿದೆ. ಆದರೆ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ಮುಖಂಡ ಎ.ಕೆ. ಆ್ಯಂಟನಿ ಅವರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಕೇರಳಂ ಮುಖ್ಯಮಂತ್ರಿ ಹೆಸರು ಘೋಷಣೆಗೆ ಇನ್ನೂ ಎರಡು ದಿನ ತೆಗೆದುಕೊಳ್ಳಬಹುದು ಎಂದು ಮೂಲಗಳು ಹೇಳಿವೆ.</p>.<p>‘ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳಂ ಉಸ್ತುವಾರಿ ದೀಪಾ ದಾಸ್ ಮುನ್ಶಿ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p>.<p>ಕೇರಳಂ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ನಡೆದ ಕಾಂಗ್ರೆಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರ್ಧಾರವೇ ಅಂತಿಮ. ವಿಧಾನಸಭೆ ವಿಸರ್ಜನೆಗೆ ಮೇ 23 ಕೊನೆಯ ದಿನ. ಅದರೊಳಗೆ, ಸರಿಯಾದ ಸಮಯದಲ್ಲಿ, ನಮ್ಮ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ. ನಾವೂ ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದು ವಿವರಿಸಿದರು. </p>.<p>ಸುದೀರ್ಘ ಚರ್ಚೆ: ಕೇರಳಂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ಪರ್ಧಾ ಕಣದಲ್ಲಿರುವ ಕೆ.ಸಿ. ವೇಣುಗೋಪಾಲ್, ವಿ.ಡಿ ಸತೀಶನ್, ರಮೇಶ್ ಚೆನ್ನಿತ್ತಲ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ಗಾಂಧಿ ಶನಿವಾರ ಸುದೀರ್ಘ ಚರ್ಚೆ ನಡೆಸಿದರು. ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಣ್ಣಿ ಜೋಸೆಫ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. </p>.<p>ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಈಗಾಗಲೇ ಕೇರಳಂ ಕಾಂಗ್ರೆಸ್ ಶಾಸಕರ ಸಭೆ ನಡೆಸಿ, ಒಂದು ಸಾಲಿನ ನಿರ್ಣಯ ಅಂಗೀಕರಿಸಿ, ವರದಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಖರ್ಗೆ ಮತ್ತು ರಾಹುಲ್ ಗಾಂಧಿ ಇದಕ್ಕೆ ಅಂತಿಮ ಅಂಕಿತ ಹಾಕುವುದು ಮಾತ್ರ ಬಾಕಿ ಉಳಿದಿದೆ. </p>.<p>ಈ ವರದಿಯಲ್ಲಿ, ಹೆಚ್ಚಿನ ಶಾಸಕರು ಕೆ.ಸಿ ವೇಣುಗೋಪಾಲ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ, ಆದರೆ, ಸಾರ್ವಜನಿಕರ ಒಲವು ವಿ.ಡಿ.ಸತೀಶನ್ ಪರವಾಗಿದೆ ಎಂದು ವೀಕ್ಷಕರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಕೇರಳಂನ 140 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 63 ಸ್ಥಾನಗಳನ್ನು ಹೊಂದಿದೆ. ಯಡಿಎಫ್ನಲ್ಲಿರುವ ಐಯುಎಂಲ್ 22 ಹಾಗೂ ಕೇರಳ ಕಾಂಗ್ರೆಸ್ (ಕೆಇಸಿ) 8 ಸ್ಥಾನ, ಆರ್ಎಸ್ಪಿ 3 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟಾರೆ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. </p>.<div><blockquote>ಕೇರಳಂ ಜನರು ನಮಗೆ ಪ್ರಚಂಡ ಬಹುಮತ ನೀಡಿದ್ದಾರೆ. ಬ್ಯಾನರ್ ಫೆಕ್ಸ್ ಅಳವಡಿಸುವಂತಹ ಅಶಿಸ್ತಿನ ಘಟನೆಗಳು ಕಾಂಗ್ರೆಸ್ ಸಂಸ್ಕೃತಿಯಲ್ಲ </blockquote><span class="attribution"> –ದೀಪಾ ದಾಸ್ ಮುನ್ಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ </span></div>.<h2>ರಾಷ್ಟ್ರ ರಾಜಧಾನಿಯಲ್ಲೂ ಫೆಕ್ಸ್ </h2>.<p>ಪೋಸ್ಟರ್ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರೂ ಯಾವುದೇ ಹಾಲಿ ಸಂಸದರನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ಈ ಹಿಂದೆ ನಿಲುವು ತೆಗೆದುಕೊಂಡಿತ್ತು. ಆದರೆ ವೇಣುಗೋಪಾಲ್ ಸಿ.ಎಂ ಸ್ಥಾನಕ್ಕಾಗಿ ಹಕ್ಕು ಮಂಡಿಸುವುದರೊಂದಿಗೆ ಸಿ.ಎಂ ಸ್ಥಾನದ ಸ್ಪರ್ಧೆ ಬಿಸಿಯಾಗಿದ್ದು ರಾಷ್ಟ್ರ ರಾಜಧಾನಿಯಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ವೇಣುಗೋಪಾಲ್ ಮತ್ತು ಸತೀಶನ್ ಅವರ ಪರವಾಗಿ ಅವರ ಬೆಂಬಲಿಗರು ಕೇರಳಂ ಮತ್ತು ದೆಹಲಿಯಲ್ಲೂ ಪೋಸ್ಟರ್ ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಸತೀಶನ್ ಅವರನ್ನು ಸ್ವಾಗತಿಸಿ ಭಾರಿ ಬೆಂಬಲ ವ್ಯಕ್ತಪಡಿಸಿದ್ದಾರೆ. ವೇಣುಗೋಪಾಲ್ ಅವರೇ ಕೇರಳಂನ ಮುಂದಿನ ಮುಖ್ಯಮಂತ್ರಿ ಎಂಬ ಪೋಸ್ಟರ್ಗಳನ್ನು ನವದೆಹಲಿಯ ಖರ್ಗೆ ನಿವಾಸದ ಹೊರಗಡೆ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>