<p><strong>ತಿರುವನಂತಪುರಂ:</strong> ಪಕ್ಷದ ಅಧ್ಯಕ್ಷ ಸ್ಥಾನದಿಂದ ನನ್ನ ಇಳಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಭಾನುವಾರ ತಿಳಿಸಿದ್ದಾರೆ.</p><p>ಕೇರಳ ಕಾಂಗ್ರೆಸ್ನಲ್ಲಿ ಅಧ್ಯಕ್ಷರು ಸೇರಿ ಮುಖಂಡರ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳಾಗಲಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸುಧಾಕರನ್ ಅವರ ಹೇಳಿಕೆ ಬಂದಿದೆ.</p><p>ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಅವರು ನನ್ನ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ, ಅಂತಹ ಯಾವುದೇ ಬದಲಾವಣೆಗಳ ಬಗ್ಗೆ ಪಕ್ಷ ಚರ್ಚೆ ಮಾಡಿಲ್ಲ, ಕೆಪಿಸಿಸಿ ಸ್ಥಾನದಿಂದ ನನ್ನ ಕೆಳಗಿಳಿಸುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಸುಧಾಕರನ್ ಹೇಳಿದರು. </p><p> ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಸಮಯದಲ್ಲಿ ಅಧ್ಯಕ್ಷರ ಬದಲಾವಣೆ ಬಗ್ಗೆ ಅವರು ಯಾವುದೇ ಸೂಚನೆ ನೀಡಲಿಲ್ಲ, ಪಕ್ಷದ ಬಲವರ್ಧನೆ ಬಗ್ಗೆ ಸಲಹೆ ನೀಡಿದರು ಎಂದು ಸುಧಾಕರನ್ ಮಾಹಿತಿ ನೀಡಿದರು.</p><p>ನನಗೆ ಆರೋಗ್ಯ ಸರಿ ಇಲ್ಲ ಎಂದು ಪಕ್ಷದ ಒಳಗೆ ಕೆಲವರು ನನ್ನನ್ನು ಪಕ್ಷದಿಂದ ಹೊರ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ನನಗಿಂತ (76 ವರ್ಷ) ಹಿರಿಯರು ಪಕ್ಷದ ಉನ್ನತ ಸ್ಥಾನಗಳನ್ನು ನಿರ್ವಹಣೆ ಮಾಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ಪಕ್ಷದ ಅಧ್ಯಕ್ಷ ಸ್ಥಾನದಿಂದ ನನ್ನ ಇಳಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಭಾನುವಾರ ತಿಳಿಸಿದ್ದಾರೆ.</p><p>ಕೇರಳ ಕಾಂಗ್ರೆಸ್ನಲ್ಲಿ ಅಧ್ಯಕ್ಷರು ಸೇರಿ ಮುಖಂಡರ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳಾಗಲಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸುಧಾಕರನ್ ಅವರ ಹೇಳಿಕೆ ಬಂದಿದೆ.</p><p>ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಅವರು ನನ್ನ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ, ಅಂತಹ ಯಾವುದೇ ಬದಲಾವಣೆಗಳ ಬಗ್ಗೆ ಪಕ್ಷ ಚರ್ಚೆ ಮಾಡಿಲ್ಲ, ಕೆಪಿಸಿಸಿ ಸ್ಥಾನದಿಂದ ನನ್ನ ಕೆಳಗಿಳಿಸುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಸುಧಾಕರನ್ ಹೇಳಿದರು. </p><p> ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಸಮಯದಲ್ಲಿ ಅಧ್ಯಕ್ಷರ ಬದಲಾವಣೆ ಬಗ್ಗೆ ಅವರು ಯಾವುದೇ ಸೂಚನೆ ನೀಡಲಿಲ್ಲ, ಪಕ್ಷದ ಬಲವರ್ಧನೆ ಬಗ್ಗೆ ಸಲಹೆ ನೀಡಿದರು ಎಂದು ಸುಧಾಕರನ್ ಮಾಹಿತಿ ನೀಡಿದರು.</p><p>ನನಗೆ ಆರೋಗ್ಯ ಸರಿ ಇಲ್ಲ ಎಂದು ಪಕ್ಷದ ಒಳಗೆ ಕೆಲವರು ನನ್ನನ್ನು ಪಕ್ಷದಿಂದ ಹೊರ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ನನಗಿಂತ (76 ವರ್ಷ) ಹಿರಿಯರು ಪಕ್ಷದ ಉನ್ನತ ಸ್ಥಾನಗಳನ್ನು ನಿರ್ವಹಣೆ ಮಾಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>