<p><strong>ತಿರುವನಂತಪುರ</strong>: ಕೇರಳ ಕಾಂಗ್ರೆಸ್ನ ನಾಯಕಿ ಆರ್. ರೇಷ್ಮಿ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡರು.</p>.<p>ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿ ಈಗಿನ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಅವರು ಹಲವು ಬಾರಿ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ.</p>.<p>‘ಎರಡು ದಶಕಗಳಿಂದಲೂ ಕಾಂಗ್ರೆಸ್ನ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. 2021ರ ವಿಧಾನಸಭಾ ಚುನಾವಣೆ ನಂತರ ಕಹಿ ಅನುಭವಿಸಿದೆ. ಇದು ಪಕ್ಷದಿಂದ ದೂರವಾಗುವಂತೆ ಮಾಡಿತು’ ಎಂದು ರೇಷ್ಮಿ ಬಿಜೆಪಿಗೆ ಸೇರಿದ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಣಕಾಸು ಸಚಿವರ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತ ನಾನು, ಚುನಾವಣೆ ಬಳಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರಲು ಯತ್ನಿಸಿದೆ. ಆದರೆ ಸಹಕಾರ ದೊರಕಲಿಲ್ಲ’ ಎಂದರು.</p>.<p>ರೇಷ್ಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, ‘ರೇಷ್ಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳ ಕಾಂಗ್ರೆಸ್ನ ನಾಯಕಿ ಆರ್. ರೇಷ್ಮಿ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡರು.</p>.<p>ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿ ಈಗಿನ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಅವರು ಹಲವು ಬಾರಿ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ.</p>.<p>‘ಎರಡು ದಶಕಗಳಿಂದಲೂ ಕಾಂಗ್ರೆಸ್ನ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. 2021ರ ವಿಧಾನಸಭಾ ಚುನಾವಣೆ ನಂತರ ಕಹಿ ಅನುಭವಿಸಿದೆ. ಇದು ಪಕ್ಷದಿಂದ ದೂರವಾಗುವಂತೆ ಮಾಡಿತು’ ಎಂದು ರೇಷ್ಮಿ ಬಿಜೆಪಿಗೆ ಸೇರಿದ ನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಣಕಾಸು ಸಚಿವರ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತ ನಾನು, ಚುನಾವಣೆ ಬಳಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರಲು ಯತ್ನಿಸಿದೆ. ಆದರೆ ಸಹಕಾರ ದೊರಕಲಿಲ್ಲ’ ಎಂದರು.</p>.<p>ರೇಷ್ಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, ‘ರೇಷ್ಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂದು ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>