<p><strong>ಕೊಚ್ಚಿ:</strong> ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನಿಗಾ ಘಟಕ<br />ದಲ್ಲಿದ್ದ ಕೇರಳದ ದಂಪತಿ ಈಗ ಗುಣಮುಖರಾಗಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ದಂಪತಿ, ‘ಆಸ್ಪತ್ರೆಯ ವೈದ್ಯರು ಹಾಗೂ ಶುಶ್ರೂಷಕರು ನಮಗೆ ಹೊಸ ಬದುಕು ಕೊಟ್ಟಿದ್ದಾರೆ’ ಎಂದೂ ಹೇಳಿದ್ದಾರೆ.</p>.<p>ಲಾಕ್ಡೌನ್ ನಿಯಮಗಳ ಯಶಸ್ಸಿಗಾಗಿ ಎಲ್ಲರೂ ಒಗ್ಗೂಡಿ ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ಆಸ್ಪತ್ರೆಯಿಂದ ವಾಪಸಾದ ಕೊಟ್ಟಾಯಂ ಜಿಲ್ಲೆಯ ಚೆಂಗಳಂನ ನಿವಾಸಿಯೊಬ್ಬರು ಪ್ರತಿಕ್ರಿಯಿಸಿದರು.</p>.<p>ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ ನಿಗಾ ಘಟಕದಲ್ಲಿ 21 ದಿನವಿದ್ದ ದಂಪತಿ ಮಾ. 25ರಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಇಟಲಿಯಿಂದ ಬಂದಿದ್ದ ಪತ್ನಿಯ ಪೋಷಕರಿಂದ ಇವರಿಗೆ ಸೋಂಕು ಹರಡಿತ್ತು.</p>.<p>‘ಸರ್ಕಾರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಪ್ರತಿ ಸಲಹೆಯನ್ನು ಪಾಲಿಸಿ. ಸೋಂಕು ಹರಡುವುದನ್ನು ತಡೆಯಲು ಸಿಬ್ಬಂದಿ ದಿನವಿಡೀ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ಕೋವಿಡ್ ಸೋಂಕು ಅಷ್ಟು ಅಪಾಯಕಾರಿ ಎಂದು ಅನ್ನಿಸುವುದಿಲ್ಲ. ಆದರೆ ಮಾಧ್ಯಮಗಳ ವರದಿಗಳಿಂದಾಗಿ ನಮಗೂ ಆರಂಭದಲ್ಲಿ ಭಯವಾಗಿತ್ತು. ಆದರೆ, ವೈದ್ಯರು, ಶುಶ್ರೂಷಕರ ನೆರವಿನಿಂದ ನಾವು ಈ ಮಾನಸಿಕ ಆಘಾತದಿಂದ ಹೊರಬಂದೆವು.</p>.<p>‘21 ದಿನಗಳ ದೀರ್ಘವಾಸ ಸರ್ಕಾರಿ ಆಸ್ಪತ್ರೆ ಕುರಿತಂತೆ ನನ್ನ ನಿಲುವನ್ನೇ ಬದಲಿಸಿದೆ’ ಎಂದು ಅವರು ಹೇಳಿದರು.</p>.<p>‘ನಮ್ಮಿಂದಾಗಿ ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಸೋಂಕು ಹರಡಿಲ್ಲ ಎಂಬುದೇ ನಮಗೆ ಸಮಾಧಾನದ ಸಂಗತಿಯಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನಿಗಾ ಘಟಕ<br />ದಲ್ಲಿದ್ದ ಕೇರಳದ ದಂಪತಿ ಈಗ ಗುಣಮುಖರಾಗಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ದಂಪತಿ, ‘ಆಸ್ಪತ್ರೆಯ ವೈದ್ಯರು ಹಾಗೂ ಶುಶ್ರೂಷಕರು ನಮಗೆ ಹೊಸ ಬದುಕು ಕೊಟ್ಟಿದ್ದಾರೆ’ ಎಂದೂ ಹೇಳಿದ್ದಾರೆ.</p>.<p>ಲಾಕ್ಡೌನ್ ನಿಯಮಗಳ ಯಶಸ್ಸಿಗಾಗಿ ಎಲ್ಲರೂ ಒಗ್ಗೂಡಿ ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ಆಸ್ಪತ್ರೆಯಿಂದ ವಾಪಸಾದ ಕೊಟ್ಟಾಯಂ ಜಿಲ್ಲೆಯ ಚೆಂಗಳಂನ ನಿವಾಸಿಯೊಬ್ಬರು ಪ್ರತಿಕ್ರಿಯಿಸಿದರು.</p>.<p>ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ ನಿಗಾ ಘಟಕದಲ್ಲಿ 21 ದಿನವಿದ್ದ ದಂಪತಿ ಮಾ. 25ರಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಇಟಲಿಯಿಂದ ಬಂದಿದ್ದ ಪತ್ನಿಯ ಪೋಷಕರಿಂದ ಇವರಿಗೆ ಸೋಂಕು ಹರಡಿತ್ತು.</p>.<p>‘ಸರ್ಕಾರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಪ್ರತಿ ಸಲಹೆಯನ್ನು ಪಾಲಿಸಿ. ಸೋಂಕು ಹರಡುವುದನ್ನು ತಡೆಯಲು ಸಿಬ್ಬಂದಿ ದಿನವಿಡೀ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ಕೋವಿಡ್ ಸೋಂಕು ಅಷ್ಟು ಅಪಾಯಕಾರಿ ಎಂದು ಅನ್ನಿಸುವುದಿಲ್ಲ. ಆದರೆ ಮಾಧ್ಯಮಗಳ ವರದಿಗಳಿಂದಾಗಿ ನಮಗೂ ಆರಂಭದಲ್ಲಿ ಭಯವಾಗಿತ್ತು. ಆದರೆ, ವೈದ್ಯರು, ಶುಶ್ರೂಷಕರ ನೆರವಿನಿಂದ ನಾವು ಈ ಮಾನಸಿಕ ಆಘಾತದಿಂದ ಹೊರಬಂದೆವು.</p>.<p>‘21 ದಿನಗಳ ದೀರ್ಘವಾಸ ಸರ್ಕಾರಿ ಆಸ್ಪತ್ರೆ ಕುರಿತಂತೆ ನನ್ನ ನಿಲುವನ್ನೇ ಬದಲಿಸಿದೆ’ ಎಂದು ಅವರು ಹೇಳಿದರು.</p>.<p>‘ನಮ್ಮಿಂದಾಗಿ ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಸೋಂಕು ಹರಡಿಲ್ಲ ಎಂಬುದೇ ನಮಗೆ ಸಮಾಧಾನದ ಸಂಗತಿಯಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>