<p><strong>ತಿರುವನಂತಪುರ:</strong> ತಮಿಳುನಾಡು ಮೂಲದ ಶ್ರೀಸನ್ ಫಾರ್ಮಾ ಕಂಪನಿ ತಯಾರಿಸುವ ಔಷಧಗಳ ವಿತರಣೆಯನ್ನು ಕೇರಳ ಸರ್ಕಾರ ಮಂಗಳವಾರ ನಿಷೇಧಿಸಿದೆ.</p>.<p>ಶ್ರೀಸನ್ ಕಂಪನಿಯ ಪರವಾನಗಿಯನ್ನು ರದ್ದುಗೊಳಿಸುವ ತಮಿಳುನಾಡು ಡ್ರಗ್ಸ್ ಕಂಟ್ರೋಲರ್ ಅವರ ಕ್ರಮಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.</p>.<p>ಗುಜರಾತ್ ಮೂಲದ ಕಂಪನಿ ತಯಾರಿಸುವ ‘ರೆಸ್ಪಿಫ್ರೆಶ್ ಟಿಆರ್’ ಔಷಧಿಯ ಗುಣಮಟ್ಟ ಕಳಪೆಯಾಗಿರುವುದು ಕಂಡುಬಂದಿದ್ದು, ಅದರ ವಿತರಣೆಯನ್ನು ತಕ್ಷಣವೇ ನಿಲ್ಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ಐವರು ವಿತರಕರು ಈ ಔಷಧಗಳನ್ನು ಪೂರೈಸುತ್ತಿದ್ದು, ವಿತರಣೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.</p>.<p>‘ಈ ಔಷಧ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳ ಮೂಲಕ ಈ ಔಷಧಗಳನ್ನು ವಿತರಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಕೆಮ್ಮಿನ ಸಿರಪ್ ಸೇವನೆಯಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 14 ಮಕ್ಕಳು ಮೃತಪಟ್ಟ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಕೇರಳ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ತಮಿಳುನಾಡು ಮೂಲದ ಶ್ರೀಸನ್ ಫಾರ್ಮಾ ಕಂಪನಿ ತಯಾರಿಸುವ ಔಷಧಗಳ ವಿತರಣೆಯನ್ನು ಕೇರಳ ಸರ್ಕಾರ ಮಂಗಳವಾರ ನಿಷೇಧಿಸಿದೆ.</p>.<p>ಶ್ರೀಸನ್ ಕಂಪನಿಯ ಪರವಾನಗಿಯನ್ನು ರದ್ದುಗೊಳಿಸುವ ತಮಿಳುನಾಡು ಡ್ರಗ್ಸ್ ಕಂಟ್ರೋಲರ್ ಅವರ ಕ್ರಮಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.</p>.<p>ಗುಜರಾತ್ ಮೂಲದ ಕಂಪನಿ ತಯಾರಿಸುವ ‘ರೆಸ್ಪಿಫ್ರೆಶ್ ಟಿಆರ್’ ಔಷಧಿಯ ಗುಣಮಟ್ಟ ಕಳಪೆಯಾಗಿರುವುದು ಕಂಡುಬಂದಿದ್ದು, ಅದರ ವಿತರಣೆಯನ್ನು ತಕ್ಷಣವೇ ನಿಲ್ಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ಐವರು ವಿತರಕರು ಈ ಔಷಧಗಳನ್ನು ಪೂರೈಸುತ್ತಿದ್ದು, ವಿತರಣೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.</p>.<p>‘ಈ ಔಷಧ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳ ಮೂಲಕ ಈ ಔಷಧಗಳನ್ನು ವಿತರಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಕೆಮ್ಮಿನ ಸಿರಪ್ ಸೇವನೆಯಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 14 ಮಕ್ಕಳು ಮೃತಪಟ್ಟ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಕೇರಳ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>