<p><strong>ಇಡುಕ್ಕಿ/ತಿರುವನಂತಪುರ</strong>: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮನ್ನುದ್ದೇಶಿಸಿ ನೀಡಿರುವ ಹೇಳಿಕೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.</p><p>ಇಡುಕ್ಕಿ ಜಿಲ್ಲೆಯ ವಟ್ಟವಾಡದಲ್ಲಿ ಗುರುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೋಪಿ ಅವರನ್ನು, ತಮ್ಮ ಭಾಗದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗೋಪಿ, 'ಮುಂದಿನ ದಿನಗಳಲ್ಲಿ ಸುಶಿಕ್ಷತ ಶಿಕ್ಷಣ ಸಚಿವರು ಬರಲಿ' ಎಂದು ಹೇಳಿದ್ದಾರೆ.</p><p>ನೇರವಾಗಿ ಶಿವನ್ಕುಟ್ಟಿ ಅವರ ಹೆಸರನ್ನು ಉಲ್ಲೇಖಿಸದ ಕೇಂದ್ರ ಸಚಿವ, ತಮ್ಮನ್ನು ಆಗಾಗ್ಗೆ ಟೀಕಿಸುವ ಶಿಕ್ಷಣ ಸಚಿವರಿಂದ ಇಂತಹ ಸೌಕರ್ಯಗಳನ್ನು ನಿರೀಕ್ಷಿಸಬಾರದು ಎಂದಿದ್ದಾರೆ.</p><p>ಗೋಪಿ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.</p><p>ಈ ಸಂಬಂಧ ಶಿವನ್ಕುಟ್ಟಿ ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರಿಂದ ರಾಜ್ಯಕ್ಕೆ ಒಂದು ಪಿನ್ನಿನಷ್ಟೂ ಉಪಯೋಗವಾಗಿಲ್ಲ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಡುಕ್ಕಿ/ತಿರುವನಂತಪುರ</strong>: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮನ್ನುದ್ದೇಶಿಸಿ ನೀಡಿರುವ ಹೇಳಿಕೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.</p><p>ಇಡುಕ್ಕಿ ಜಿಲ್ಲೆಯ ವಟ್ಟವಾಡದಲ್ಲಿ ಗುರುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೋಪಿ ಅವರನ್ನು, ತಮ್ಮ ಭಾಗದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗೋಪಿ, 'ಮುಂದಿನ ದಿನಗಳಲ್ಲಿ ಸುಶಿಕ್ಷತ ಶಿಕ್ಷಣ ಸಚಿವರು ಬರಲಿ' ಎಂದು ಹೇಳಿದ್ದಾರೆ.</p><p>ನೇರವಾಗಿ ಶಿವನ್ಕುಟ್ಟಿ ಅವರ ಹೆಸರನ್ನು ಉಲ್ಲೇಖಿಸದ ಕೇಂದ್ರ ಸಚಿವ, ತಮ್ಮನ್ನು ಆಗಾಗ್ಗೆ ಟೀಕಿಸುವ ಶಿಕ್ಷಣ ಸಚಿವರಿಂದ ಇಂತಹ ಸೌಕರ್ಯಗಳನ್ನು ನಿರೀಕ್ಷಿಸಬಾರದು ಎಂದಿದ್ದಾರೆ.</p><p>ಗೋಪಿ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.</p><p>ಈ ಸಂಬಂಧ ಶಿವನ್ಕುಟ್ಟಿ ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರಿಂದ ರಾಜ್ಯಕ್ಕೆ ಒಂದು ಪಿನ್ನಿನಷ್ಟೂ ಉಪಯೋಗವಾಗಿಲ್ಲ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>