<p><strong>ಕಣ್ಣೂರು:</strong> ಕೇರಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಬಿರುಸಿನಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. </p><p>'ಕೇರಳದಲ್ಲಿ ಸತತ ಮೂರನೇ ಬಾರಿಗೆ ಎಲ್ಡಿಎಫ್ ಗೆಲ್ಲಬೇಕೆಂದು ಪ್ರಧಾನಿ ಮೋದಿ ಬಯಸುತ್ತಿದ್ದಾರೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಆರೋಪಿಸಿದ್ದಾರೆ. </p>.ಶಬರಿಮಲೆ ವಿಚಾರದಲ್ಲಿ ಮೌನವಾಗಿರುವ ಮೋದಿಗೆ ಧರ್ಮದ ಬಗ್ಗೆ ಕಾಳಜಿ ಇಲ್ಲ: ರಾಹುಲ್.ಸಮುದಾಯಗಳ ಮಧ್ಯೆ ತಂದಿಟ್ಟ ಮೋದಿ, ಶಾ ವಿರುದ್ಧ ಆರೋಪ ಪಟ್ಟಿ ದಾಖಲಿಸಬೇಕು: ಮಮತಾ.<p>ಕಣ್ಣೂರು ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್, 'ಎಲ್ಡಿಎಫ್ ಹಾಗೂ ಬಿಜೆಪಿಯ ವಿರುದ್ಧ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹೋರಾಡುತ್ತಿದೆ' ಎಂದು ಹೇಳಿದ್ದಾರೆ. </p><p>'ಈ ಚುನಾವಣೆಯು ಎರಡು ಸಿದ್ಧಾಂತಗಳ ನಡುವಣ ಸ್ಪರ್ಧೆಯಾಗಿದೆ. ಮೊದಲ ಬಾರಿಗೆ ಬಿಜೆಪಿ ಹಾಗೂ ಎಡರಂಗದ ನಡುವೆ ಒಪ್ಪಂದ ಏರ್ಪಟ್ಟಿದೆ' ಎಂದು ಹೇಳಿದ್ದಾರೆ. </p><p>'ಸಿದ್ಧಾಂತಗಳು ಬೇರೆಯೇ ಆಗಿದ್ದರೂ ಎಡರಂಗವು ಬಲಪಂಥೀಯ ಪಕ್ಷದೊಂದಿಗೆ ಹೊಂದಾಣಿಕೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಸಿಐಐ(ಎಂ) ತೊರೆದು ಯುಡಿಎಫ್ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ವಿ. ಕುಂಞಿಕೃಷ್ಣನ್ ಹಾಗೂ ಟಿ.ಕೆ. ಗೋವಿಂದನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. </p><p>'ಎಡರಂಗವು ಕಾರ್ಪೊರೇಟ್ ಪಕ್ಷವಾಗಿರುವುದರಿಂದ ಬಿಜೆಪಿಯೊಂದಿಗೆ ಪಾಲುದಾರಿಕೆ ಹೊಂದಿದೆ. ಜನಪರ ಪಕ್ಷವಾಗಿ ಉಳಿದಿಲ್ಲ. ವೇದಿಕೆಯಲ್ಲಿ ಕುಳಿತವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ. ಎಡಪಂಥೀಯ ಚಿಂತನೆ ಹೊಂದಿದ್ದವರೂ ಈಗ ಕಾಂಗ್ರೆಸ್ ಪರವಾಗಿದ್ದಾರೆ. ನಮ್ಮ ಪಕ್ಷವು ಅವರನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. </p><p>'ಕೇರಳ ರಾಜಕಾರಣದಲ್ಲಿ ಬಿಜೆಪಿ ನಿಲುವನ್ನು ರಾಹುಲ್ ಪ್ರಶ್ನಿಸಿದ್ದಾರೆ. ಬೇರೆಡೆಗಳಲ್ಲಿ ಧರ್ಮ, ದೇವರ ಬಗ್ಗೆ ಮಾತನಾಡುವ ಪ್ರಧಾನಿ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಏಕೆ ಪ್ರಶ್ನೆ ಎತ್ತುತ್ತಿಲ್ಲ' ಎಂದು ಕೇಳಿದ್ದಾರೆ. </p><p>'ಶಬರಿಮಲೆ ಪ್ರಕರಣದಲ್ಲಿ ಸಿಪಿಐ(ಎಂ) ನಾಯಕರು ಭಾಗಿಯಾಗಿದ್ದಾರೆ. ಆದರೆ ಬಿಜೆಪಿ ಮೌನವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಹಿಂದೂ ಧರ್ಮದ ರಕ್ಷಕರು ಎಂದು ಹೇಳುವವರು ಕೇರಳಕ್ಕೆ ಬಂದಾಗ ಶಬರಿಮಲೆ ವಿಷಯದ ಬಗ್ಗೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಎಡರಂಗವು ಗೆಲ್ಲಬೇಕೆಂದು ಬಯಸುತ್ತಾರೆ' ಎಂದು ಟೀಕಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು:</strong> ಕೇರಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಬಿರುಸಿನಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. </p><p>'ಕೇರಳದಲ್ಲಿ ಸತತ ಮೂರನೇ ಬಾರಿಗೆ ಎಲ್ಡಿಎಫ್ ಗೆಲ್ಲಬೇಕೆಂದು ಪ್ರಧಾನಿ ಮೋದಿ ಬಯಸುತ್ತಿದ್ದಾರೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಆರೋಪಿಸಿದ್ದಾರೆ. </p>.ಶಬರಿಮಲೆ ವಿಚಾರದಲ್ಲಿ ಮೌನವಾಗಿರುವ ಮೋದಿಗೆ ಧರ್ಮದ ಬಗ್ಗೆ ಕಾಳಜಿ ಇಲ್ಲ: ರಾಹುಲ್.ಸಮುದಾಯಗಳ ಮಧ್ಯೆ ತಂದಿಟ್ಟ ಮೋದಿ, ಶಾ ವಿರುದ್ಧ ಆರೋಪ ಪಟ್ಟಿ ದಾಖಲಿಸಬೇಕು: ಮಮತಾ.<p>ಕಣ್ಣೂರು ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್, 'ಎಲ್ಡಿಎಫ್ ಹಾಗೂ ಬಿಜೆಪಿಯ ವಿರುದ್ಧ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹೋರಾಡುತ್ತಿದೆ' ಎಂದು ಹೇಳಿದ್ದಾರೆ. </p><p>'ಈ ಚುನಾವಣೆಯು ಎರಡು ಸಿದ್ಧಾಂತಗಳ ನಡುವಣ ಸ್ಪರ್ಧೆಯಾಗಿದೆ. ಮೊದಲ ಬಾರಿಗೆ ಬಿಜೆಪಿ ಹಾಗೂ ಎಡರಂಗದ ನಡುವೆ ಒಪ್ಪಂದ ಏರ್ಪಟ್ಟಿದೆ' ಎಂದು ಹೇಳಿದ್ದಾರೆ. </p><p>'ಸಿದ್ಧಾಂತಗಳು ಬೇರೆಯೇ ಆಗಿದ್ದರೂ ಎಡರಂಗವು ಬಲಪಂಥೀಯ ಪಕ್ಷದೊಂದಿಗೆ ಹೊಂದಾಣಿಕೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಸಿಐಐ(ಎಂ) ತೊರೆದು ಯುಡಿಎಫ್ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ವಿ. ಕುಂಞಿಕೃಷ್ಣನ್ ಹಾಗೂ ಟಿ.ಕೆ. ಗೋವಿಂದನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. </p><p>'ಎಡರಂಗವು ಕಾರ್ಪೊರೇಟ್ ಪಕ್ಷವಾಗಿರುವುದರಿಂದ ಬಿಜೆಪಿಯೊಂದಿಗೆ ಪಾಲುದಾರಿಕೆ ಹೊಂದಿದೆ. ಜನಪರ ಪಕ್ಷವಾಗಿ ಉಳಿದಿಲ್ಲ. ವೇದಿಕೆಯಲ್ಲಿ ಕುಳಿತವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ. ಎಡಪಂಥೀಯ ಚಿಂತನೆ ಹೊಂದಿದ್ದವರೂ ಈಗ ಕಾಂಗ್ರೆಸ್ ಪರವಾಗಿದ್ದಾರೆ. ನಮ್ಮ ಪಕ್ಷವು ಅವರನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. </p><p>'ಕೇರಳ ರಾಜಕಾರಣದಲ್ಲಿ ಬಿಜೆಪಿ ನಿಲುವನ್ನು ರಾಹುಲ್ ಪ್ರಶ್ನಿಸಿದ್ದಾರೆ. ಬೇರೆಡೆಗಳಲ್ಲಿ ಧರ್ಮ, ದೇವರ ಬಗ್ಗೆ ಮಾತನಾಡುವ ಪ್ರಧಾನಿ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಏಕೆ ಪ್ರಶ್ನೆ ಎತ್ತುತ್ತಿಲ್ಲ' ಎಂದು ಕೇಳಿದ್ದಾರೆ. </p><p>'ಶಬರಿಮಲೆ ಪ್ರಕರಣದಲ್ಲಿ ಸಿಪಿಐ(ಎಂ) ನಾಯಕರು ಭಾಗಿಯಾಗಿದ್ದಾರೆ. ಆದರೆ ಬಿಜೆಪಿ ಮೌನವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಹಿಂದೂ ಧರ್ಮದ ರಕ್ಷಕರು ಎಂದು ಹೇಳುವವರು ಕೇರಳಕ್ಕೆ ಬಂದಾಗ ಶಬರಿಮಲೆ ವಿಷಯದ ಬಗ್ಗೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಎಡರಂಗವು ಗೆಲ್ಲಬೇಕೆಂದು ಬಯಸುತ್ತಾರೆ' ಎಂದು ಟೀಕಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>