<p><strong>ತಿರುವನಂತಪುರ:</strong> ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಮುಂದೂಡುವಂತೆ ಕೇರಳ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.</p><p>ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭಿಸುವುದು ಬೇಡ ಎಂದು ಎಸ್ಐಆರ್ ಕುರಿತು ಚರ್ಚಿಸಲು ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಕರೆದಿದ್ದ ಸಭೆಯಲ್ಲಿ ರಾಜ್ಯದ ಪ್ರತಿನಿಧಿಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.</p><p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸೆಪ್ಟೆಂಬರ್ 30ರೊಳಗೆ ಸಜ್ಜಾಗುವಂತೆ ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ಈಚೆಗೆ ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿತ್ತು. ಈ ಮೂಲಕ ಅಕ್ಟೋಬರ್–ನವೆಂಬರ್ ವೇಳೆಗೆ ದೇಶದಾದ್ಯಂತ ಎಸ್ಐಆರ್ ನಡೆಸುವ ಸೂಚನೆ ನೀಡಿತ್ತು.</p><p>ಎಸ್ಐಆರ್ ಕುರಿತು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಆಯೋಗದ ಹಿರಿಯ ಅಧಿಕಾರಿಗಳು ಈಚೆಗೆ ಮಹತ್ವದ ಸಭೆ ನಡೆಸಿದ್ದರು. ಎಸ್ಐಆರ್ ಪ್ರಕ್ರಿಯೆಗೆ ಸಜ್ಜಾಗಲು ಸೆಪ್ಟೆಂಬರ್ 30ರ ಗಡುವು ನಿಗದಿಪಡಿಸಲಾಗಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದರು.</p>.ಆಳ–ಅಗಲ: ಎಸ್ಐಆರ್ ಒಳ ಹೊರಗು.ಆಳ–ಅಗಲ | ಎಸ್ಐಆರ್: ಕಾನೂನು ಹೇಳುವುದೇನು?.ಅಕ್ರಮವಿದ್ದರೆ ಎಸ್ಐಆರ್ ರದ್ದು: ಸುಪ್ರೀಂ ಕೋರ್ಟ್ ಎಚ್ಚರಿಕೆ .ಸಂಪಾದಕೀಯ | ಬಿಹಾರದಲ್ಲಿ ‘ಎಸ್ಐಆರ್’ ಪ್ರಕ್ರಿಯೆ; ಆಧಾರ್ ಸೇರ್ಪಡೆ ಸ್ವಾಗತಾರ್ಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಮುಂದೂಡುವಂತೆ ಕೇರಳ ಚುನಾವಣಾ ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.</p><p>ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭಿಸುವುದು ಬೇಡ ಎಂದು ಎಸ್ಐಆರ್ ಕುರಿತು ಚರ್ಚಿಸಲು ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಕರೆದಿದ್ದ ಸಭೆಯಲ್ಲಿ ರಾಜ್ಯದ ಪ್ರತಿನಿಧಿಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.</p><p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸೆಪ್ಟೆಂಬರ್ 30ರೊಳಗೆ ಸಜ್ಜಾಗುವಂತೆ ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ಈಚೆಗೆ ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿತ್ತು. ಈ ಮೂಲಕ ಅಕ್ಟೋಬರ್–ನವೆಂಬರ್ ವೇಳೆಗೆ ದೇಶದಾದ್ಯಂತ ಎಸ್ಐಆರ್ ನಡೆಸುವ ಸೂಚನೆ ನೀಡಿತ್ತು.</p><p>ಎಸ್ಐಆರ್ ಕುರಿತು ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಆಯೋಗದ ಹಿರಿಯ ಅಧಿಕಾರಿಗಳು ಈಚೆಗೆ ಮಹತ್ವದ ಸಭೆ ನಡೆಸಿದ್ದರು. ಎಸ್ಐಆರ್ ಪ್ರಕ್ರಿಯೆಗೆ ಸಜ್ಜಾಗಲು ಸೆಪ್ಟೆಂಬರ್ 30ರ ಗಡುವು ನಿಗದಿಪಡಿಸಲಾಗಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದರು.</p>.ಆಳ–ಅಗಲ: ಎಸ್ಐಆರ್ ಒಳ ಹೊರಗು.ಆಳ–ಅಗಲ | ಎಸ್ಐಆರ್: ಕಾನೂನು ಹೇಳುವುದೇನು?.ಅಕ್ರಮವಿದ್ದರೆ ಎಸ್ಐಆರ್ ರದ್ದು: ಸುಪ್ರೀಂ ಕೋರ್ಟ್ ಎಚ್ಚರಿಕೆ .ಸಂಪಾದಕೀಯ | ಬಿಹಾರದಲ್ಲಿ ‘ಎಸ್ಐಆರ್’ ಪ್ರಕ್ರಿಯೆ; ಆಧಾರ್ ಸೇರ್ಪಡೆ ಸ್ವಾಗತಾರ್ಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>