<p><strong>ತಿರುವನಂತಪುರ:</strong> ವಿಲಾಸಿ ಕಾರಿಗೆ ಪಟ್ಟು ಹಿಡಿದ ಮಗನ ಹಠ ವಿಕೋಕ್ಕೆ ತಿರುಗಿದ ಪರಿಣಾಮ ಕಬ್ಬಿಣದ ಸರಳಿನಿಂದ ತಂದೆ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣ ಕೇರಳದ ವಂಚಿಯೂರ್ನಲ್ಲಿ ಗುರುವಾರ ನಡೆದಿದೆ.</p><p>ತಂದೆಯ ದಾಳಿಗೆ ಒಳಗಾದ 28 ವರ್ಷದ ಮಗನ ತಲೆಗೆ ಗಂಭೀರವಾಗಿ ಗಾಯವಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.</p><p>ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ತಂದೆಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿ ತಂದೆಯು ಮಗನ ಬೇಡಿಕೆಯಂತೆ ಇತ್ತೀಚೆಗೆ ವಿಲಾಸಿ ಬೈಕ್ ಕೊಡಿಸಿದ್ದರು. ಆದರೆ ಅದರಿಂದಲೂ ತೃಪ್ತಿಯಾಗ ಯುವಕ, ವಿಲಾಸಿ ಕಾರಿಗೆ ಬೇಡಿಕೆ ಇಟ್ಟಿದ್ದ. ಈ ವಿಷಯವಾಗಿ ಇಬ್ಬರ ನಡುವೆ ಗುರುವಾರ ತೀವ್ರ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲಿ ತಂದೆಯ ಮೇಲೆ ಮಗ ದಾಳಿ ಮಾಡಿದ್ದ. ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕೈಗೆ ಸಿಕ್ಕ ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಯುವಕ ನಿರುದ್ಯೋಗಿಯಾಗಿದ್ದ. ಆದರೆ ಸದಾ ವಿಲಾಸಿ ವಸ್ತುಗಳಿಗೆ ಮನೆಯಲ್ಲಿ ಬೇಡಿಕೆ ಇಡುತ್ತಿದ್ದ. ಅದು ಸಿಗದಿದ್ದಾಗ ತಕ್ಷಣ ಕೋಪಗೊಳ್ಳುತ್ತಿದ್ದ ಎಂದು ಅವರ ಸಂಬಂಧಿಕರು ಹಾಗೂ ಅಕ್ಕಪಕ್ಕದವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>‘ಮಗನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ತಲೆಮರೆಸಿಕೊಂಡಿರುವ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಿಲಾಸಿ ಕಾರಿಗೆ ಪಟ್ಟು ಹಿಡಿದ ಮಗನ ಹಠ ವಿಕೋಕ್ಕೆ ತಿರುಗಿದ ಪರಿಣಾಮ ಕಬ್ಬಿಣದ ಸರಳಿನಿಂದ ತಂದೆ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣ ಕೇರಳದ ವಂಚಿಯೂರ್ನಲ್ಲಿ ಗುರುವಾರ ನಡೆದಿದೆ.</p><p>ತಂದೆಯ ದಾಳಿಗೆ ಒಳಗಾದ 28 ವರ್ಷದ ಮಗನ ತಲೆಗೆ ಗಂಭೀರವಾಗಿ ಗಾಯವಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.</p><p>ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ತಂದೆಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿ ತಂದೆಯು ಮಗನ ಬೇಡಿಕೆಯಂತೆ ಇತ್ತೀಚೆಗೆ ವಿಲಾಸಿ ಬೈಕ್ ಕೊಡಿಸಿದ್ದರು. ಆದರೆ ಅದರಿಂದಲೂ ತೃಪ್ತಿಯಾಗ ಯುವಕ, ವಿಲಾಸಿ ಕಾರಿಗೆ ಬೇಡಿಕೆ ಇಟ್ಟಿದ್ದ. ಈ ವಿಷಯವಾಗಿ ಇಬ್ಬರ ನಡುವೆ ಗುರುವಾರ ತೀವ್ರ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲಿ ತಂದೆಯ ಮೇಲೆ ಮಗ ದಾಳಿ ಮಾಡಿದ್ದ. ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕೈಗೆ ಸಿಕ್ಕ ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಯುವಕ ನಿರುದ್ಯೋಗಿಯಾಗಿದ್ದ. ಆದರೆ ಸದಾ ವಿಲಾಸಿ ವಸ್ತುಗಳಿಗೆ ಮನೆಯಲ್ಲಿ ಬೇಡಿಕೆ ಇಡುತ್ತಿದ್ದ. ಅದು ಸಿಗದಿದ್ದಾಗ ತಕ್ಷಣ ಕೋಪಗೊಳ್ಳುತ್ತಿದ್ದ ಎಂದು ಅವರ ಸಂಬಂಧಿಕರು ಹಾಗೂ ಅಕ್ಕಪಕ್ಕದವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>‘ಮಗನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ತಲೆಮರೆಸಿಕೊಂಡಿರುವ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>