<p><strong>ತಿರುವನಂತಪುರ:</strong> ‘ಮುಂಡತ್ತಿಕೋಡ್ ಪಟಾಕಿ ದುರಂತದ ತನಿಖೆಗೆ ತ್ರಿಶ್ಶೂರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ಶೀಘ್ರದಲ್ಲೇ ತಿಳಿಯಲಿದೆ’ ಎಂದು ಕೇರಳ ಡಿಜಿಪಿ ರಾವಡ ಎ. ಚಂದ್ರಶೇಖರ್ ಹೇಳಿದ್ದಾರೆ.</p>.<p>ಕೇರಳ ಸರ್ಕಾರ ಈ ದುರಂತವನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹14 ಲಕ್ಷ ಪರಿಹಾರ ಘೋಷಿಸಿದೆ.</p>.<p>‘ಎಸ್ಐಟಿ ತನಿಖೆಯ ಜತೆಯಲ್ಲೇ, ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ಏಕಸದಸ್ಯ ಆಯೋಗವು ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ನೀಡಲಿದೆ’ ಎಂದು ಕಂದಾಯ ಸಚಿವ ಕೆ. ರಾಜನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಮೃತದೇಹಗಳ ಅಂತ್ಯಸಂಸ್ಕಾರ, ಮಾದರಿ ಸಂಗ್ರಹ, ಡಿಎನ್ಎ ಪರೀಕ್ಷೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ರೂಪಿಸುವಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸರ್ಕಾರ ಸೂಚನೆ ನೀಡಿದೆ.</p>.<p>‘ಗಾಯಾಳುಗಳಿಗೆ ತಕ್ಷಣದ ಪರಿಹಾರವಾಗಿ ₹2 ಲಕ್ಷ ಪಾವತಿಸಲಾಗುವುದು. ಅವರ ಚಿಕಿತ್ಸಾ ವೆಚ್ಚವನ್ನು ಪೂರ್ಣವಾಗಿ ಸರ್ಕಾರವೇ ಭರಿಸಲಿದೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ ವೆಚ್ಚವನ್ನೂ ಪಾವತಿಸಲಾಗುವುದು’ ಎಂದು ಸಚಿವ ರಾಜನ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1409354664</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಮುಂಡತ್ತಿಕೋಡ್ ಪಟಾಕಿ ದುರಂತದ ತನಿಖೆಗೆ ತ್ರಿಶ್ಶೂರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ಶೀಘ್ರದಲ್ಲೇ ತಿಳಿಯಲಿದೆ’ ಎಂದು ಕೇರಳ ಡಿಜಿಪಿ ರಾವಡ ಎ. ಚಂದ್ರಶೇಖರ್ ಹೇಳಿದ್ದಾರೆ.</p>.<p>ಕೇರಳ ಸರ್ಕಾರ ಈ ದುರಂತವನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹14 ಲಕ್ಷ ಪರಿಹಾರ ಘೋಷಿಸಿದೆ.</p>.<p>‘ಎಸ್ಐಟಿ ತನಿಖೆಯ ಜತೆಯಲ್ಲೇ, ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ಏಕಸದಸ್ಯ ಆಯೋಗವು ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ನೀಡಲಿದೆ’ ಎಂದು ಕಂದಾಯ ಸಚಿವ ಕೆ. ರಾಜನ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಮೃತದೇಹಗಳ ಅಂತ್ಯಸಂಸ್ಕಾರ, ಮಾದರಿ ಸಂಗ್ರಹ, ಡಿಎನ್ಎ ಪರೀಕ್ಷೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ರೂಪಿಸುವಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸರ್ಕಾರ ಸೂಚನೆ ನೀಡಿದೆ.</p>.<p>‘ಗಾಯಾಳುಗಳಿಗೆ ತಕ್ಷಣದ ಪರಿಹಾರವಾಗಿ ₹2 ಲಕ್ಷ ಪಾವತಿಸಲಾಗುವುದು. ಅವರ ಚಿಕಿತ್ಸಾ ವೆಚ್ಚವನ್ನು ಪೂರ್ಣವಾಗಿ ಸರ್ಕಾರವೇ ಭರಿಸಲಿದೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ ವೆಚ್ಚವನ್ನೂ ಪಾವತಿಸಲಾಗುವುದು’ ಎಂದು ಸಚಿವ ರಾಜನ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1409354664</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>