<p><strong>ಕಣ್ಣೂರು:</strong> ಕೇರಳ ರಾಜ್ಯವು ದೇಶದಲ್ಲಿ ನಾಲ್ಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದ ಖ್ಯಾತಿ ಪಡೆದುಕೊಂಡಿದೆ.</p>.<p>ತಿರುವನಂತಪುರ, ಕೊಚ್ಚಿ, ಕೋಯಿಕ್ಕೋಡ್ ಬಳಿಕ ಇದೀಗ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಲೋಕಾರ್ಪಣೆಗೊಂಡಿದೆ.</p>.<p>ಭಾನುವಾರ ಮೊದಲ ವಿಮಾನ ಹಾರಾಟ ನಡೆಸುವ ಮೂಲಕ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಕ್ಕಿತು. ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಏರ್ ಇಂಡಿಯಾ ವಿಮಾನ ಹಾರಾಟಕ್ಕೆ ಹಸಿರುನಿಶಾನೆ ತೋರಿಸಿದರು. 186 ಪ್ರಯಾಣಿಕರನ್ನು ಹೊತ್ತು ವಿಮಾನವು ಅಬುಧಾಬಿಗೆ ಪ್ರಯಾಣ ಬೆಳೆಸಿತು.</p>.<p>ರಾಜ್ಯದ ಕನಸಿನ ಯೋಜನೆಗೆ ಬೆಂಬಲ ನೀಡಿದ ಸುರೇಶ್ ಪ್ರಭು ಅವರಿಗೆ ಪಿಣರಾಯಿ ವಿಜಯನ್ ಧನ್ಯವಾದ ಹೇಳಿದರು. ಮಾಜಿ ಮುಖ್ಯಮಂತ್ರಿ ಇ.ಕೆ ನಾಯನಾರ್, ಉದ್ಯಮಿ ಕೃಷ್ಣನ್ ನಾಯರ್ ಅವರ ನೆರವನ್ನೂ ಸ್ಮರಿಸಿದರು.</p>.<p>ಕಾರ್ಯಕ್ರಮವನ್ನು ಪ್ರತಿಪಕ್ಷ ಯುಡಿಎಫ್ ಹಾಗೂ ಬಿಜೆಪಿ ಬಹಿಷ್ಕರಿಸಿದ್ದವು. ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಅಹ್ವಾನ ನೀಡದ್ದಕ್ಕೆ ಯುಡಿಎಫ್ ಮುನಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು:</strong> ಕೇರಳ ರಾಜ್ಯವು ದೇಶದಲ್ಲಿ ನಾಲ್ಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದ ಖ್ಯಾತಿ ಪಡೆದುಕೊಂಡಿದೆ.</p>.<p>ತಿರುವನಂತಪುರ, ಕೊಚ್ಚಿ, ಕೋಯಿಕ್ಕೋಡ್ ಬಳಿಕ ಇದೀಗ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಲೋಕಾರ್ಪಣೆಗೊಂಡಿದೆ.</p>.<p>ಭಾನುವಾರ ಮೊದಲ ವಿಮಾನ ಹಾರಾಟ ನಡೆಸುವ ಮೂಲಕ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಕ್ಕಿತು. ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಏರ್ ಇಂಡಿಯಾ ವಿಮಾನ ಹಾರಾಟಕ್ಕೆ ಹಸಿರುನಿಶಾನೆ ತೋರಿಸಿದರು. 186 ಪ್ರಯಾಣಿಕರನ್ನು ಹೊತ್ತು ವಿಮಾನವು ಅಬುಧಾಬಿಗೆ ಪ್ರಯಾಣ ಬೆಳೆಸಿತು.</p>.<p>ರಾಜ್ಯದ ಕನಸಿನ ಯೋಜನೆಗೆ ಬೆಂಬಲ ನೀಡಿದ ಸುರೇಶ್ ಪ್ರಭು ಅವರಿಗೆ ಪಿಣರಾಯಿ ವಿಜಯನ್ ಧನ್ಯವಾದ ಹೇಳಿದರು. ಮಾಜಿ ಮುಖ್ಯಮಂತ್ರಿ ಇ.ಕೆ ನಾಯನಾರ್, ಉದ್ಯಮಿ ಕೃಷ್ಣನ್ ನಾಯರ್ ಅವರ ನೆರವನ್ನೂ ಸ್ಮರಿಸಿದರು.</p>.<p>ಕಾರ್ಯಕ್ರಮವನ್ನು ಪ್ರತಿಪಕ್ಷ ಯುಡಿಎಫ್ ಹಾಗೂ ಬಿಜೆಪಿ ಬಹಿಷ್ಕರಿಸಿದ್ದವು. ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಅಹ್ವಾನ ನೀಡದ್ದಕ್ಕೆ ಯುಡಿಎಫ್ ಮುನಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>