<p><strong>ತಿರುವನಂತಪುರ:</strong> ಕೇರಳದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ರಾಜ್ಯದಾದ್ಯಂತ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.ಲೈಬೀರಿಯಾದ ಹಡಗು ಮುಳುಗಡೆ: ಇದೊಂದು ‘ವಿಪತ್ತು’ ಎಂದು ಘೋಷಿಸಿದ ಕೇರಳ ಸರ್ಕಾರ.<p>ರಾಜ್ಯದ ಉತ್ತರ ಜಿಲ್ಲೆಗಳ ಎತ್ತರದ ಪ್ರದೇಶಗಳು ಮತ್ತು ನೆರೆಯ ಪಟ್ಟಣಗಳಲ್ಲಿ ರಸ್ತೆಗಳು ಮುಳುಗಿ, ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.</p><p>ನದಿಗಳು ಉಕ್ಕಿ ಹರಿದಿದ್ದೇ ತಗ್ಗು ಪ್ರದೇಶಗಳು ಮುಳುಗಡೆಯಾಗಲು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.</p><p>ಕಾಸರಗೋಡಿನಲ್ಲಿ ಮಧುವಾಹಿನಿ ನದಿ ಉಕ್ಕಿ ಹರಿದು ರಸ್ತೆಗಳನ್ನು ಹಾಳು ಮಾಡಿದೆ. ಅನೇಕ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.</p>.ಕೇರಳ ಸಿಎಂ ಪಿಣರಾಯಿ ವಿಜಯನ್ ಸಾಧನೆಯ ಸಾಕ್ಷ್ಯಚಿತ್ರ ಬಿಡುಗಡೆ.<p>ಪ್ರವಾಹವು ನೆಲಮಹಡಿಗೆ ಪ್ರವೇಶಿಸುತ್ತಿದ್ದಂತೆ ಜನರನ್ನು ತಮ್ಮ ಮನೆಗಳ ಮೊದಲ ಮಹಡಿಗೆ ಸ್ಥಳಾಂತರಗೊಂಡರು.</p><p>ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿಯೂ ಸಹ ಭಾರೀ ಮಳೆಯಿಂದಾಗಿ ವ್ಯಾಪಕ ನಾಶನಷ್ಟ ಸಂಭವಿಸಿದೆ.</p><p>ಕಣ್ಣೂರಿನ ಪಯ್ಯನ್ನೂರಿನಲ್ಲಿ ಅನೇಕ ಮನೆಗಳ ಮುಂದೆ ನಾಡ ಹಾಗೂ ಫೈಬರ್ ದೋಣಿಗಳನ್ನು ಕಟ್ಟಿರುವುದು ಕಂಡುಬಂದಿದೆ.</p>.ಕೇರಳ|ಪೋಕ್ಸೊ ಪ್ರಕರಣದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ:ಶಿಕ್ಷಣ ಸಚಿವ .<p>‘ಪ್ರವಾಹದ ನೀರು ಕಡಿಮೆಯಾಗದಿದ್ದರೆ ಆಶ್ರಯ ಶಿಬಿರಗಳಿಗೆ ತೆರಳಬೇಕಾಗಬಹುದು ಎಂಬ ಭಯ ನಮಗಿದೆ. ಹೀಗಾಗಿ ದೋಣಿಗಳನ್ನು ಸಿದ್ಧವಾಗಿಟ್ಟುಕೊಂಡಿದ್ದೇವೆ’ ಎಂದು ವೃದ್ಧರೊಬ್ಬರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.</p><p>ಕೊಟ್ಟಯಂ ಜಿಲ್ಲೆಯಲ್ಲಿ ಇದುವರೆಗೆ 46 ಆಶ್ರಯ ಶಿಬಿರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 1,136 ಜನರು ಅವುಗಳಲ್ಲಿ ವಾಸಿಸುತ್ತಿದ್ದಾರೆ.</p><p>ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.</p>.ಕೇರಳ|ಕೃಷಿ ಭೂಮಿಯಲ್ಲಿ ಬಾಂಬ್ ಪತ್ತೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ರಾಜ್ಯದಾದ್ಯಂತ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.ಲೈಬೀರಿಯಾದ ಹಡಗು ಮುಳುಗಡೆ: ಇದೊಂದು ‘ವಿಪತ್ತು’ ಎಂದು ಘೋಷಿಸಿದ ಕೇರಳ ಸರ್ಕಾರ.<p>ರಾಜ್ಯದ ಉತ್ತರ ಜಿಲ್ಲೆಗಳ ಎತ್ತರದ ಪ್ರದೇಶಗಳು ಮತ್ತು ನೆರೆಯ ಪಟ್ಟಣಗಳಲ್ಲಿ ರಸ್ತೆಗಳು ಮುಳುಗಿ, ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.</p><p>ನದಿಗಳು ಉಕ್ಕಿ ಹರಿದಿದ್ದೇ ತಗ್ಗು ಪ್ರದೇಶಗಳು ಮುಳುಗಡೆಯಾಗಲು ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.</p><p>ಕಾಸರಗೋಡಿನಲ್ಲಿ ಮಧುವಾಹಿನಿ ನದಿ ಉಕ್ಕಿ ಹರಿದು ರಸ್ತೆಗಳನ್ನು ಹಾಳು ಮಾಡಿದೆ. ಅನೇಕ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.</p>.ಕೇರಳ ಸಿಎಂ ಪಿಣರಾಯಿ ವಿಜಯನ್ ಸಾಧನೆಯ ಸಾಕ್ಷ್ಯಚಿತ್ರ ಬಿಡುಗಡೆ.<p>ಪ್ರವಾಹವು ನೆಲಮಹಡಿಗೆ ಪ್ರವೇಶಿಸುತ್ತಿದ್ದಂತೆ ಜನರನ್ನು ತಮ್ಮ ಮನೆಗಳ ಮೊದಲ ಮಹಡಿಗೆ ಸ್ಥಳಾಂತರಗೊಂಡರು.</p><p>ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿಯೂ ಸಹ ಭಾರೀ ಮಳೆಯಿಂದಾಗಿ ವ್ಯಾಪಕ ನಾಶನಷ್ಟ ಸಂಭವಿಸಿದೆ.</p><p>ಕಣ್ಣೂರಿನ ಪಯ್ಯನ್ನೂರಿನಲ್ಲಿ ಅನೇಕ ಮನೆಗಳ ಮುಂದೆ ನಾಡ ಹಾಗೂ ಫೈಬರ್ ದೋಣಿಗಳನ್ನು ಕಟ್ಟಿರುವುದು ಕಂಡುಬಂದಿದೆ.</p>.ಕೇರಳ|ಪೋಕ್ಸೊ ಪ್ರಕರಣದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ:ಶಿಕ್ಷಣ ಸಚಿವ .<p>‘ಪ್ರವಾಹದ ನೀರು ಕಡಿಮೆಯಾಗದಿದ್ದರೆ ಆಶ್ರಯ ಶಿಬಿರಗಳಿಗೆ ತೆರಳಬೇಕಾಗಬಹುದು ಎಂಬ ಭಯ ನಮಗಿದೆ. ಹೀಗಾಗಿ ದೋಣಿಗಳನ್ನು ಸಿದ್ಧವಾಗಿಟ್ಟುಕೊಂಡಿದ್ದೇವೆ’ ಎಂದು ವೃದ್ಧರೊಬ್ಬರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.</p><p>ಕೊಟ್ಟಯಂ ಜಿಲ್ಲೆಯಲ್ಲಿ ಇದುವರೆಗೆ 46 ಆಶ್ರಯ ಶಿಬಿರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 1,136 ಜನರು ಅವುಗಳಲ್ಲಿ ವಾಸಿಸುತ್ತಿದ್ದಾರೆ.</p><p>ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.</p>.ಕೇರಳ|ಕೃಷಿ ಭೂಮಿಯಲ್ಲಿ ಬಾಂಬ್ ಪತ್ತೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>